AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ವರ್ಗಾವಣೆ ನೀತಿಗೆ ಬೇಸತ್ತು ಸ್ವಯಂ ನಿವೃತ್ತಿಗೆ ಹೆಡ್ ಕಾನ್​ಸ್ಟೇಬಲ್ ಮನವಿ, ರಾಜೀನಾಮೆ ಪತ್ರ ವೈರಲ್

Dharwad news: ವರ್ಗಾವಣೆಯಲ್ಲಿ ಆಗುತ್ತಿರುವ ಅನ್ಯಾಯದಿಂದ ಬೇಸತ್ತ ಹೆಡ್​ ಕಾನ್​ಸ್ಟೇಬಲ್ ಒಬ್ಬರು ಸ್ವಯಂ ನಿವೃತ್ತಿ ಮುಂದಾಗಿದ್ದಾರೆ. ಸದ್ಯ ಪೊಲೀಸ್ ಸಿಬ್ಬಂದಿಯ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಧಾರವಾಡ: ವರ್ಗಾವಣೆ ನೀತಿಗೆ ಬೇಸತ್ತು ಸ್ವಯಂ ನಿವೃತ್ತಿಗೆ ಹೆಡ್ ಕಾನ್​ಸ್ಟೇಬಲ್ ಮನವಿ, ರಾಜೀನಾಮೆ ಪತ್ರ ವೈರಲ್
ವರ್ಗಾವಣೆ ನೀತಿಗೆ ಬೇಸತ್ತು ಸ್ವಯಂ ನಿವೃತ್ತಿಗೆ ಹೆಡ್ ಕಾನ್​ಸ್ಟೇಬಲ್ ಮನವಿ
Rakesh Nayak Manchi
|

Updated on: Jun 22, 2023 | 9:39 PM

Share

ಧಾರವಾಡ: ಡಿಸಿಆರ್‌ಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್​ಸ್ಟೇಬಲ್ ಒಬ್ಬರು ವರ್ಗಾವಣೆ (Transfer) ನೀತಿಗೆ ಬೇಸತ್ತು ಸ್ವಯಂ ನಿವೃತ್ತಿ ಪಡೆಯಲು ಮುಂದಾಗಿದ್ದಾರೆ. ಆರ್.ಎನ್‌. ಗೊರಗುದ್ದಿ ಸ್ವಯಂ ನಿವೃತ್ತಿಗೆ ಮುಂದಾದ ಸಿಬ್ಬಂದಿಯಾಗಿದ್ದಾರೆ. ಸದ್ಯ ಇವರ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗುತ್ತಿದೆ.

ಡಿಸಿಆರ್‌ಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗೊರಗುದ್ದಿ ಅವರನ್ನು ಐದು ವರ್ಷವಾಗುವ ಮೊದಲೇ ಅಳ್ನಾವರ ಠಾಣೆಗೆ ವರ್ಗಾವಣೆ ಮಾಡಿದ್ದಾರೆ. ವರ್ಗಾವಣೆ ಬಳಿಕವೂ ಡಿಪಿಒಗೆ ಕರ್ತವ್ಯದ ಮೇಲೆ ನಿಯೋಜನೆ ಮಾಡಲಾಗಿದೆ. ಇದರಿಂದ ರೋಸಿ ಹೋಗಿರುವುದಾಗಿ ಪತ್ರದಲ್ಲಿ ಅಳಲು ತೋಡಿಕೊಂಡಿದ್ದು, ರಾಜೀನಾಮೆ ಪತ್ರದಲ್ಲಿ ತನ್ನ ಮೇಲಿನ ದೌರ್ಜನ್ಯದ ಬಗ್ಗೆ ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: KAS Officer Transfer: ಐಎಎಸ್, ಐಪಿಎಸ್ ಆಯ್ತು ಈಗ ಕೆಎಎಸ್ ಸರದಿ; 75 ಮಂದಿ ಅಧಿಕಾರಿಗಳ ವರ್ಗಾವಣೆ

ರಾಜೀನಾಮೆ ಪತ್ರದಲ್ಲಿ ಏನಿದೆ?

ಹೃದಯ ಸಂಬಂಧಿ ಖಾಯಿಲೆಯಿಂದ ನನ್ನ ತಂದೆ ಹಾಗೂ ರಕ್ತದೊತ್ತಡದಿಂದ ನನ್ನ ತಾಯಿ ಬಳಲುತ್ತಿದ್ದಾರೆ. ನಮ್ಮದು ಅವಿಭಕ್ತ ಕುಟುಂಬ. ಕುಟುಂಬದಲ್ಲಿ ನಾನೊಬ್ಬನೇ ಸರ್ಕಾರಿ ನೌಕರನಾಗಿದ್ದೇನೆ. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುವ ಜವಾಬ್ದಾರಿ ನನ್ನ ಮೇಲೆಯೇ ಇದೆ. ಕಿರಿಯ ನೌಕರರಾದ ನಾವು ತಮ್ಮ ಮುಂದೆ ಯಾವುದೇ ಪರಿಸ್ಥಿತಿಯಲ್ಲಿ ನಮ್ಮ ಕುಂದುಕೊರತೆಗಳನ್ನು ಹೇಳದಂತಹ ಸ್ಥಿತಿ ಇದೆ. ಕುಂದುಕೊರತೆಗಳನ್ನು ನಿಮ್ಮ ಮುಂದೆ ಹೇಳಲು ಬಂದಾಗ ತಾವು ಅಮಾನತು ಮಾಡುವ ಹಾಗೂ ಸೇವೆಯಿಂದ ವಜಾ ಮಾಡುವ ಮನೋಸ್ಥಿತಿ ಹೊಂದಿದ್ದರಿಂದ ಆ ಭಯಕ್ಕೆ ನಮ್ಮ ತೊಂದರೆಗಳನ್ನು ನಮ್ಮಲ್ಲಿಯೇ ಅನುಭವಿಸುತ್ತಾ ಸೇವೆ ಮಾಡಿಕೊಂಡು ಬಂದಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಬರೆಯಲಾಗಿದೆ.

ಇಂತಹ ಪರಿಸ್ಥಿತಿಯಲ್ಲೂ ತಾವು ನನಗೆ ವರ್ಗಾವಣೆ ಮಾಡುವ ಸಮಯದಲ್ಲಿ ತಮಗಿಂದ ಹಿರಿಯ ಅಧಿಕಾರಿಗಳಿಂದಲೂ ನನ್ನ ಕುಂದು ಕೊರತೆಯ ಬಗ್ಗೆ ತಿಳಿಸಿದರೂ ನನಗೆ ನನ್ನ ಕುಟುಂಬದ ಜೊತೆಗೆ ಇಲಾಖೆಯ ಕರ್ತವ್ಯ ನಿಭಾಯಿಸಲು ಅನುಕೂಲ ಮಾಡಿಕೊಡದೇ ಇಲಾಖೆಯ ಮೇಲೆಯೇ ಅಸಹ್ಯ ಪಡುವಂತೆ ಮಾನಸೀಕ ಹಿಂಸೆ ಕೊಟ್ಟಿದ್ದೂ ಇದೆ. ಹೀಗಿದ್ದರೂ ಡಿಸಿಆರ್​ಬಿ ವಿಭಾಗದಿಂದ ಅಳ್ನಾವರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಹೋಗಿ ನನ್ನ ಕರ್ತವ್ಯವನ್ನು ನಿಭಾಯಿಸಲು ಬಿಡದೇ ಮತ್ತೆ ಡಿಪಿಓಗೆ ಕೆಲವು ಪ್ರಕರಣಗಳ ಕರ್ತವ್ಯಕ್ಕೆ ಕರೆಸಿದ್ದರಿಂದ ಮತ್ತಷ್ಟು ಮಾನಸೀಕ ಹಿಂಸೆಯಾಗಿರುತ್ತದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ