AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಆಗ್ರಹ: ಆಯುಕ್ತರ ಜೊತೆ ಚರ್ಚಿಸಿ ನಿರ್ಧರಿಸುವೆ – ಹು-ಧಾ ಪಾಲಿಕೆ ಮೇಯರ್​

ಹುಬ್ಬಳ್ಳಿಯ ಈದ್ಗಾ ಮೈದಾನ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಬೇಕೆಂದು ಎಐಎಂಎಂ ಕಾರ್ಯಕರ್ತರು ಮತ್ತು ಸಮತಾ ಸೈನಿಕದಳ ಸಂಘಟನೆ ಇಂದು ಹು-ಧಾ ಮಹಾನಗರ ಪಾಲಿಕೆ ಮೇಯರ್​​​​​ ಈರೇಶ್ ಅಂಚಟಗೇರಿ ಅವರಿಗೆ ಮನವಿ ಸಲ್ಲಿಸಿದರು.

ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಆಗ್ರಹ: ಆಯುಕ್ತರ ಜೊತೆ ಚರ್ಚಿಸಿ ನಿರ್ಧರಿಸುವೆ - ಹು-ಧಾ ಪಾಲಿಕೆ ಮೇಯರ್​
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ
TV9 Web
| Edited By: |

Updated on:Nov 07, 2022 | 3:38 PM

Share

ಧಾರವಾಡ: ಹುಬ್ಬಳ್ಳಿಯ ಈದ್ಗಾ ಮೈದಾನ (Hubli Idgah Maidan) (ಕಿತ್ತೂರು ರಾಣಿ ಚೆನ್ನಮ್ಮಾ) ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಬೇಕೆಂದು ಎಐಎಂಎಂ (AIMM) ಕಾರ್ಯಕರ್ತರು ಮತ್ತು ಸಮತಾ ಸೈನಿಕದಳ ಸಂಘಟನೆ ಇಂದು (ನ. 7) ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubli-Dharwad Municipal Corporation) ಮೇಯರ್​​​​​ ಈರೇಶ್ ಅಂಚಟಗೇರಿ ಅವರಿಗೆ ಮನವಿ ಸಲ್ಲಿಸಿದರು. ಈ ಬಗ್ಗೆ ಮಾತನಾಡಿದ ಮೇಯರ್​​​​​ ಈರೇಶ್ ಅಂಚಟಗೇರಿಗೆ ಗಣೇಶನಿಗೂ, ಟಿಪ್ಪುಗೂ ಹೋಲಿಕೆ ಬೇಡ. ಈ ಬಗ್ಗೆ ಆಯುಕ್ತರ ಜತೆ ಚರ್ಚಿಸುವೆ ಎಂದು ಹೇಳಿದರು.

AIMIM ಹಾಗೂ ಸಮತಾ ಸೈನಿಕದಳ ಸಂಘಟಕರು ಮೇಯರ್ ಈರೇಶ್ ಅಂಚಟಗೇರಿ ಅವರಿಗೆ ಭೇಟಿ ಮಾಡಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು. ಗಣೇಶೋತ್ಸವ ಆಚರಣೆಗೆ ಅವಕಾಶ ಕೊಟ್ಟಿದ್ದೀರಿ, ಈಗ ನಮಗೂ ಅವಕಾಶ ಕೊಡಿ ಎಂದು ಸಂಘಟಕರು ಆಗ್ರಹಿಸಿದರು.

ಗಣೇಶೋತ್ಸವಕ್ಕೆ ಮೂರು ದಿನ ಕೊಟ್ಟಿದ್ದೀರಿ, ನಮಗೆ ಒಂದು ಗಂಟೆ ಅವಕಾಶ ಕೊಡಿ. ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್,​ ಗಣೇಶನಿಗೂ ಟಿಪ್ಪುಗೂ ಹೋಲಿಕೆ ಮಾಡಬೇಡಿ ಎಂದು ಹೇಳಿದರು.

ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಸೂಕ್ತ ನಿರ್ಧಾರ ಕೈಗೊಳ್ಳಲಿದೆ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರವಾಗಿ ಮಾತನಾಡಿದ ಅವರು ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಗಣೇಶ ಉತ್ಸವದ ಬಗ್ಗೆಯೂ ಅವರೇ ನಿರ್ಧಾರ ತೆಗೆದುಕೊಂಡಿದ್ದರು. ಎಲ್ಲರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಇದರಲ್ಲಿ ವೈಯಕ್ತಿಕ ನಿರ್ಧಾರ ಬರಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬಿಜೆಪಿಯ ಯಶಸ್ಸಿನಿಂದ ಕಾಂಗ್ರೆಸ್ ಭಯಭೀತವಾಗಿದೆ

ಕಾಂಗ್ರೆಸ್​​ನ ಜೋಡೋ ಯಾತ್ರೆ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಆದರೆ ಬಿಜೆಪಿಯ ಯಶಸ್ಸಿನಿಂದ ಕಾಂಗ್ರೆಸ್ ಭಯಭೀತವಾಗಿದೆ. ಹೀಗಾಗಿ ಬೀದಿಗೆ ಬಂದು ರಾಹುಲ್ ಗಾಂಧಿಯಿಂದ ಪಾದಯಾತ್ರೆ ಮಾಡಿಸಿದರು. ಸೋಲಾರ್ ಹಗರಣದ ಬಗ್ಗೆ ತನಿಖೆಯಾಗಿ ಸತ್ಯಾಂಶ ಹೊರಬರಲಿ ಎಂದು ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Mon, 7 November 22

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ