AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಸಿದ್ಧವಾದ 12 ಲಕ್ಷ ಮೌಲ್ಯದ ಅಮೇರಿಕನ್ ಡೈಮಂಡ್ ಗಣಪತಿ: ಬೆಂಗಳೂರಿಗೆ ರವಾನೆ

ಗಣೇಶ ಮೂರ್ತಿ 5.7 ಅಡಿ ಎತ್ತರವಿದ್ದು, ಸುಮಾರು 150 ಕೆಜಿ ತೂಕ ಇದೆ. ಮುಖವೊಂದನ್ನು ಬಿಟ್ಟು ಇನ್ನುಳಿದ ಎಲ್ಲ ಭಾಗವನ್ನು ಅಮೆರಿಕನ್​​ ಡೈಮಂಡ್ ಹರಳು, ನವರತ್ನ ಹರಳುಗಳಿಂದ ತಯಾರಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಸಿದ್ಧವಾದ 12 ಲಕ್ಷ ಮೌಲ್ಯದ ಅಮೇರಿಕನ್ ಡೈಮಂಡ್ ಗಣಪತಿ: ಬೆಂಗಳೂರಿಗೆ ರವಾನೆ
ಅಮೆರಿಕನ್​ ಡೈಮಂಡ್​ ಗಣಪತಿ
ಶಿವಕುಮಾರ್ ಪತ್ತಾರ್
| Edited By: |

Updated on: Sep 16, 2023 | 12:24 PM

Share

ಹುಬ್ಬಳ್ಳಿ ಸೆ.16: ವಾಣಿಜ್ಯನಗರಿ ಹುಬ್ಬಳ್ಳಿಯ (Hubballi) ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು 12 ಲಕ್ಷ ರೂ. ಮೌಲ್ಯದ ಅಮೆರಿಕನ್​​​ ಡೈಮಂಡ್​​ (American Diamond) ಹರಳುಗಳಿಂದ ಗಣಪತಿ ಮೂರ್ತಿಯನ್ನು (Lord Ganesha Statue) ನಿರ್ಮಿಸಿದ್ದಾರೆ. ಸದ್ಯ ಈ ಮೂರ್ತಿಯನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ (Bengaluru) ತರಲಾಗಿದೆ. ಈ ಅಮೆರಿಕನ್​​​ ಡೈಮಂಡ್​​ ಮೂರ್ತಿಯನ್ನು ಬೆಂಗಳೂರಿನ ರಾಜಾಜಿನಗರ 2ನೇ ಹಂತದ ಮಿಲ್ಕ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ ಯುವಕರ ಸಂಘ ಸೆ.18 ರಂದು ಪ್ರತಿಷ್ಠಾಪನೆ ಮಾಡುತ್ತದೆ.

ಗಣೇಶ ಮೂರ್ತಿ 5.7 ಅಡಿ ಎತ್ತರವಿದ್ದು, ಸುಮಾರು 150 ಕೆಜಿ ತೂಕ ಇದೆ. ಮುಖವೊಂದನ್ನು ಬಿಟ್ಟು ಇನ್ನುಳಿದ ಎಲ್ಲ ಭಾಗವನ್ನು ಅಮೆರಿಕನ್​​ ಡೈಮಂಡ್ ಹರಳು, ನವರತ್ನ ಹರಳುಗಳಿಂದ ತಯಾರಿಸಲಾಗಿದೆ. ಕಳೆದ ಹಲವಾರು ವರ್ಷಗಳಿಂದ ಬೆಂಗಳೂರಿನ ಸ್ವಸ್ತಿಕ ಯುವಕರ ಸಂಘ ಅಮೇರಿಕನ್ ಡೈಮಂಡ್ ಹರಳುಗಳಿಂದ ಗಣೇಶ ಮೂರ್ತಿಯನ್ನು ಹುಬ್ಬಳ್ಳಿಯಲ್ಲಿ ತಯಾರಿಸಿಕೊಂಡು, ರೈಲಿನ ಮೂಲಕ ಬೆಂಗಳೂರಿಗೆ ತೆಗೆದುಕೊಂಡು ಹೋಗಿ ಪ್ರತಿಷ್ಠಾಪನೆ ಮಾಡಿ ಏಳು ದಿನಗಳವರೆಗೆ ಅದ್ದೂರಿಯಾಗಿ ಗಣೇಶೋತ್ಸವ ಆಚರಣೆ ಮಾಡುತ್ತಾ ಬಂದಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಗಣೇಶೋತ್ಸವಕ್ಕೆ 18 ಷರತ್ತು, ಮಾರ್ಪಾಡು ಮಾಡುವಂತೆ ಮನವಿ ಮಾಡಿದ ಸಮಿತಿ

ಅದೇ ರೀತಿ ಈ ವರ್ಷವೂ ಸಹ ಸುಮಾರು 60 ಸಾವಿರ ಅಮೆರಿಕನ್​​ ಡೈಮಂಡ ಹಾಗೂ ನವರತ್ನ ಹರಳುಗಳಿಂದ ಐಶ್ವರ್ಯ ಗಣೇಶ ಮಾದರಿಯಲ್ಲಿ ಮೂರ್ತಿಯನ್ನು ನಿರ್ಮಿಸಲಾಗಿದೆ. ಶುಕ್ರವಾರ ನಗರದಿಂದ ರೈಲಿನ ಮೂಲಕ ಮೂರ್ತಿಯನ್ನು ತೆಗೆದುಕೊಂಡು ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ