AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಸಿದ್ಧವಾದ 12 ಲಕ್ಷ ಮೌಲ್ಯದ ಅಮೇರಿಕನ್ ಡೈಮಂಡ್ ಗಣಪತಿ: ಬೆಂಗಳೂರಿಗೆ ರವಾನೆ

ಗಣೇಶ ಮೂರ್ತಿ 5.7 ಅಡಿ ಎತ್ತರವಿದ್ದು, ಸುಮಾರು 150 ಕೆಜಿ ತೂಕ ಇದೆ. ಮುಖವೊಂದನ್ನು ಬಿಟ್ಟು ಇನ್ನುಳಿದ ಎಲ್ಲ ಭಾಗವನ್ನು ಅಮೆರಿಕನ್​​ ಡೈಮಂಡ್ ಹರಳು, ನವರತ್ನ ಹರಳುಗಳಿಂದ ತಯಾರಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಸಿದ್ಧವಾದ 12 ಲಕ್ಷ ಮೌಲ್ಯದ ಅಮೇರಿಕನ್ ಡೈಮಂಡ್ ಗಣಪತಿ: ಬೆಂಗಳೂರಿಗೆ ರವಾನೆ
ಅಮೆರಿಕನ್​ ಡೈಮಂಡ್​ ಗಣಪತಿ
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on: Sep 16, 2023 | 12:24 PM

Share

ಹುಬ್ಬಳ್ಳಿ ಸೆ.16: ವಾಣಿಜ್ಯನಗರಿ ಹುಬ್ಬಳ್ಳಿಯ (Hubballi) ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು 12 ಲಕ್ಷ ರೂ. ಮೌಲ್ಯದ ಅಮೆರಿಕನ್​​​ ಡೈಮಂಡ್​​ (American Diamond) ಹರಳುಗಳಿಂದ ಗಣಪತಿ ಮೂರ್ತಿಯನ್ನು (Lord Ganesha Statue) ನಿರ್ಮಿಸಿದ್ದಾರೆ. ಸದ್ಯ ಈ ಮೂರ್ತಿಯನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ (Bengaluru) ತರಲಾಗಿದೆ. ಈ ಅಮೆರಿಕನ್​​​ ಡೈಮಂಡ್​​ ಮೂರ್ತಿಯನ್ನು ಬೆಂಗಳೂರಿನ ರಾಜಾಜಿನಗರ 2ನೇ ಹಂತದ ಮಿಲ್ಕ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ ಯುವಕರ ಸಂಘ ಸೆ.18 ರಂದು ಪ್ರತಿಷ್ಠಾಪನೆ ಮಾಡುತ್ತದೆ.

ಗಣೇಶ ಮೂರ್ತಿ 5.7 ಅಡಿ ಎತ್ತರವಿದ್ದು, ಸುಮಾರು 150 ಕೆಜಿ ತೂಕ ಇದೆ. ಮುಖವೊಂದನ್ನು ಬಿಟ್ಟು ಇನ್ನುಳಿದ ಎಲ್ಲ ಭಾಗವನ್ನು ಅಮೆರಿಕನ್​​ ಡೈಮಂಡ್ ಹರಳು, ನವರತ್ನ ಹರಳುಗಳಿಂದ ತಯಾರಿಸಲಾಗಿದೆ. ಕಳೆದ ಹಲವಾರು ವರ್ಷಗಳಿಂದ ಬೆಂಗಳೂರಿನ ಸ್ವಸ್ತಿಕ ಯುವಕರ ಸಂಘ ಅಮೇರಿಕನ್ ಡೈಮಂಡ್ ಹರಳುಗಳಿಂದ ಗಣೇಶ ಮೂರ್ತಿಯನ್ನು ಹುಬ್ಬಳ್ಳಿಯಲ್ಲಿ ತಯಾರಿಸಿಕೊಂಡು, ರೈಲಿನ ಮೂಲಕ ಬೆಂಗಳೂರಿಗೆ ತೆಗೆದುಕೊಂಡು ಹೋಗಿ ಪ್ರತಿಷ್ಠಾಪನೆ ಮಾಡಿ ಏಳು ದಿನಗಳವರೆಗೆ ಅದ್ದೂರಿಯಾಗಿ ಗಣೇಶೋತ್ಸವ ಆಚರಣೆ ಮಾಡುತ್ತಾ ಬಂದಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಗಣೇಶೋತ್ಸವಕ್ಕೆ 18 ಷರತ್ತು, ಮಾರ್ಪಾಡು ಮಾಡುವಂತೆ ಮನವಿ ಮಾಡಿದ ಸಮಿತಿ

ಅದೇ ರೀತಿ ಈ ವರ್ಷವೂ ಸಹ ಸುಮಾರು 60 ಸಾವಿರ ಅಮೆರಿಕನ್​​ ಡೈಮಂಡ ಹಾಗೂ ನವರತ್ನ ಹರಳುಗಳಿಂದ ಐಶ್ವರ್ಯ ಗಣೇಶ ಮಾದರಿಯಲ್ಲಿ ಮೂರ್ತಿಯನ್ನು ನಿರ್ಮಿಸಲಾಗಿದೆ. ಶುಕ್ರವಾರ ನಗರದಿಂದ ರೈಲಿನ ಮೂಲಕ ಮೂರ್ತಿಯನ್ನು ತೆಗೆದುಕೊಂಡು ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?