AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah: ಅಮಿತ್ ಶಾ ಅವರಿಂದ ಫಾರೆನ್ಸಿಕ್ ಯೂನಿವರ್ಸಿಟಿ ಕ್ಯಾಂಪಸ್ ಗೆ ಇಂದು ಭೂಮಿ ಪೂಜೆ – ಸ್ಥಳ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Pralhad Joshi: ದೇಶದಲ್ಲಿ ಫಾರೆನ್ಸಿಕ್ ಯೂನಿವರ್ಸಿಟಿಯ 7 ಶಾಖೆಗಳಿದ್ದು, ಧಾರವಾಡದಲ್ಲಿ 8 ನೇ ಶಾಖೆ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಲಿದೆ. ಅಮಿತ್ ಶಾ ಭಾಗವಹಿಸುವ ಕಾರ್ಯಕ್ರಮದ ಸಿದ್ಧತೆಗಳನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪರಿಶೀಲಿಸಿದರು.

Amit Shah: ಅಮಿತ್ ಶಾ ಅವರಿಂದ ಫಾರೆನ್ಸಿಕ್ ಯೂನಿವರ್ಸಿಟಿ ಕ್ಯಾಂಪಸ್ ಗೆ ಇಂದು ಭೂಮಿ ಪೂಜೆ - ಸ್ಥಳ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಅಮಿತ್ ಶಾ ಅವರಿಂದ ಫಾರೆನ್ಸಿಕ್ ಯೂನಿವರ್ಸಿಟಿ ಕ್ಯಾಂಪಸ್ ಗೆ ಇಂದು ಭೂಮಿ ಪೂಜೆ
TV9 Web
| Edited By: |

Updated on:Jan 28, 2023 | 9:43 AM

Share

ಧಾರವಾಡದಲ್ಲಿ (Dharwad) ನೂತನವಾಗಿ ನಿರ್ಮಾಣವಾಗಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ (FSL University) ಶಾಖೆಯ ಭೂಮಿ ಪೂಜೆಯನ್ನು ಇಂದು ಶನಿವಾರ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ (Amit Shah) ಅವರು ನೆರವೇರಿಸಲಿದ್ದು, ಕಾರ್ಯಕ್ರಮ ತಯಾರಿ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಸ್ಥಳ ಪರಿಶೀಲನೆ ನಡೆಸಿದರು. ಗುಜರಾತ್‌ನಲ್ಲಿರುವ ಫಾರೆನ್ಸಿಕ್ ಯುನಿವರ್ಸಿಟಿಯ ಬ್ರ್ಯಾಂಚ್ ಕ್ಯಾಂಪಸ್ ಇದೇ ಮೊದಲು ಬಾರಿಗೆ ದಕ್ಷಿಣ ಭಾರತದಲ್ಲಿ ಆರಂಭ ಆಗುತ್ತಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಪ್ರಯತ್ನದ ಫಲವಾಗಿ ರಾಜ್ಯದ ಧಾರವಾಡದಲ್ಲಿ ನಿರ್ಮಾಣವಾಗುತ್ತಿದೆ. ಫಾರೆನ್ಸಿಕ್ ಕ್ಯಾಂಪಸ್‌ಗಾಗಿ ಕರ್ನಾಟಕ ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಸೈದಾಪುರ ಗ್ರಾಮದ ಒಟ್ಟು 50 ಎಕರೆ 39 ಗುಂಟೆ ಜಾಗದಲ್ಲಿ ಫಾರೆನ್ಸಿಕ್ ಕ್ಯಾಂಪಸ್ ನಿರ್ಮಾಣಕ್ಕೆ ಜಾಗವನ್ನ ಗುರುತಿಸಲಾಗಿದೆ.

ಸದ್ಯ ಇಡೀ ದೇಶದಲ್ಲಿ ಫಾರೆನ್ಸಿಕ್ ಯೂನಿವರ್ಸಿಟಿಯ 7 ಶಾಖೆಗಳಿದ್ದು, ಧಾರವಾಡದಲ್ಲಿ 8 ನೇ ಶಾಖೆ ನಿರ್ಮಾಣಕ್ಕೆ ನಾಳೆ ಶಂಕುಸ್ಥಾಪನೆ ನೆರವೇರಲಿದೆ. ಅಮಿತ್ ಶಾ ಅವರ ಕಾರ್ಯಕ್ರಮದ ಸಿದ್ಧತೆಗಳನ್ನ ವೀಕ್ಷಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕ್ಯಾಂಪಸ್ ಉದ್ಘಾಟನೆ ಬಳಿಕ ಕುಂದಗೋಳದಲ್ಲಿ ಅಮಿತ್ ಶಾ ಅವರ ರೋಡ್ ಶೋ, ಸಮಾವೇಶ ನಡೆಯಲಿದೆ ಎಂದರು.

ಮಾರ್ಚ್ ಮೊದಲ ವಾರದಲ್ಲಿ ಧಾರವಾಡ IIT ಮೋದಿ ಅವರಿಂದ ಉದ್ಘಾಟನೆ

ಇನ್ನು ಧಾರವಾಡ ಐಐಟಿ ಉದ್ಘಾಟನೆ ಮಾರ್ಚ್ ಮೊದಲ ವಾರದೊಳಗೆ ನೆರವೇರಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಫಾರೆನ್ಸಿಕ್ ಯೂನಿವರ್ಸಿಟಿ ಕ್ಯಾಂಪಸ್ ಸ್ಥಳ ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಫೆ. 15 ರ ನಂತರ ಯಾವಾಗ ಬೇಕಾದರು ಆಗಬಹುದು ಎಂದು ಪ್ರಧಾನಿ ಮೋದಿ ಅವರ ಕಚೇರಿಯಿಂದ ಮಾಹಿತಿ ಬಂದಿದೆ.

ನಾನು ಒಮ್ಮೆ ಐಐಟಿಗೆ ಭೇಟಿ ನೀಡಿ ಕಟ್ಟಡ ಪರಿಶೀಲಿಸುತ್ತೇನೆ. ಈ ಮೊದಲು ಫೆ. 6 ರಂದು ಧಾರವಾಡಕ್ಕೆ ಬರುವುದಾಗಿ ಪ್ರಧಾನಿ ಮೋದಿ ಹೇಳಿದ್ದರು. ಆದರೆ ಇತರೆ ಕಾರ್ಯಗಳಿಂದ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ. ಫೆಬ್ರುವರಿ 15 ರ ನಂತರ ಅಥವಾ ಮಾರ್ಚ್ ಮೊದಲ ವಾರದಲ್ಲಿ ಧಾರವಾಡ ಐಐಟಿ ಉದ್ಘಾಟನೆಗೊಳ್ಳಲಿದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು.

Published On - 9:42 am, Sat, 28 January 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್