ಅಂಗನವಾಡಿ ಶಿಕ್ಷಕಿಯರ 5 ತಿಂಗಳ ಗೌರವ ಧನ, ಮೊಟ್ಟೆ ಹಣ ಬಾಕಿ ಉಳಿಸಿಕೊಂಡ ಸರ್ಕಾರ; ಬಂದ್​ ಮಾಡಿ ಹೋರಾಟ ಮಾಡಲು ನಿರ್ಧಾರ

ಚುನಾವಣೆಗೂ ಮುನ್ನ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೇರಿದ ರಾಜ್ಯ ಕಾಂಗ್ರೆಸ್ ಸರ್ಕಾರ, ಗೃಹಲಕ್ಷ್ಮೀ ಹಣವನ್ನೇ ಮೂರು ತಿಂಗಳಿನಿಂದ ಬಾಕಿ ಇರಿಸಿಕೊಂಡಿದೆ. ಇದೀಗ ಅಂಗನವಾಡಿ ಶಿಕ್ಷಕಿಯರ ಗೌರವ ಧನವನ್ನೂ ಬಾಕಿ ಇರಿಸಿಕೊಂಡಿದೆ. ಅಷ್ಟೇ ಅಲ್ಲ, ಮಕ್ಕಳಿಗೆ ನೀಡುವ ಮೊಟ್ಟೆಯ ಹಣವನ್ನೂ ಕೊಟ್ಟಿಲ್ಲ. ಇದರಿಂದಾಗಿ ಅಂಗನವಾಡಿಗಳಲ್ಲಿ ಮಕ್ಕಳಿಗೆ ಸಿಗಬೇಕಾಗಿರೋ ಯಾವುದೇ ಆಹಾರ ಸರಿಯಾಗಿ ಸಿಗುತ್ತಿಲ್ಲ.

ಅಂಗನವಾಡಿ ಶಿಕ್ಷಕಿಯರ 5 ತಿಂಗಳ ಗೌರವ ಧನ, ಮೊಟ್ಟೆ ಹಣ ಬಾಕಿ ಉಳಿಸಿಕೊಂಡ ಸರ್ಕಾರ; ಬಂದ್​ ಮಾಡಿ ಹೋರಾಟ ಮಾಡಲು ನಿರ್ಧಾರ
ಧಾರವಾಡ: ಅಂಗನವಾಡಿ ಶಿಕ್ಷಕಿಯರ 5 ತಿಂಗಳ ಗೌರವ ಧನ, ಮೊಟ್ಟೆ ಹಣ ಬಾಕಿ
Follow us
| Updated By: ಆಯೇಷಾ ಬಾನು

Updated on: Aug 05, 2024 | 11:28 AM

ಧಾರವಾಡ, ಆಗಸ್ಟ್.05: ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಅಂಗನವಾಡಿ (Anganwadi) ಶಿಕ್ಷಕಿಯರಿಗೆ ಐದು ತಿಂಗಳಿನಿಂದ ಗೌರವ ಧನವೇ ಬಂದಿಲ್ಲ. ಅಂಗನವಾಡಿಯಿಂದ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೂರೈಕೆ ಮಾಡಲಾಗುವ ಮೊಟ್ಟೆಯನ್ನು (Egg) ಅಂಗನವಾಡಿ ಶಿಕ್ಷಕಿಯರೇ ತಮ್ಮ ಕೈಯಿಂದ ದುಡ್ಡು ಹಾಕಿ ಪೂರೈಕೆ ಮಾಡುತ್ತಿದ್ದಾರೆ. ಕಳೆದ ಐದು ತಿಂಗಳಿನಿಂದ ತಮ್ಮ ಕೈಯಿಂದ ದುಡ್ಡು ಹಾಕಿ ತೆಗೆದುಕೊಂಡು ಬಂದ ಮೊಟ್ಟೆಯ ಬಿಲ್‌ ಕೂಡ ಬಾಕಿ ಇದೆ. ಇದರಿಂದ ಅಂಗನವಾಡಿ ಶಿಕ್ಷಕಿಯರು ಸರ್ಕಾರಕ್ಕೆ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ಇನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 494 ಅಂಗನವಾಡಿ ಕೇಂದ್ರಗಳಿವೆ. ಅವುಗಳ ಬಾಡಿಗೆ ಕೂಡ ಕೊಡಲು ಸಾಧ್ಯವಾಗಿಲ್ಲ.‌ ಇಲಾಖೆಯ ನಿರ್ದೇಶಕರಿಗೆ ಕೇಳಿದರೆ, ಅವರು ಪ್ರತಿ‌ ತಿಂಗಳಿಗೆ ಎಷ್ಟು ಅನುದಾನ ಇದೆಯೋ, ಅದನ್ನು ಕೊಡುತ್ತಲೇ ಬಂದಿದ್ದೇವೆ ಅನ್ನುತ್ತಿದ್ದಾರೆ. ಹಾಗಾದರೆ ಅಂಗನವಾಡಿ ಶಿಕ್ಷಕಿಯರಿಗೆ ಏಕೆ ಹಣ ಮುಟ್ಟಿಲ್ಲ‌‌‌ ಅನ್ನೋ ಪ್ರಶ್ನೆ ಎದ್ದಿದೆ.‌ ಈ ಶಿಕ್ಷಕಿಯರು ಕೈಯಿಂದ ಹಣ ಹಾಕಿ ಮೊಟ್ಟೆ ತಂದು ಸುಸ್ತಾಗಿ‌ ಹೋಗಿದ್ದಾರೆ. ಇತ್ತ ಮೊಟ್ಟೆಗೆ ಹಣವನ್ನೂ ಕೊಡಬೇಕು, ಅತ್ತ ಗೌರವ ಧನ ಇಲ್ಲದೆ ಕೆಲಸ ಮಾಡಬೇಕು. ಹೀಗಾಗಿ ಬೇಗ ಹಣ ಬಿಡುಗಡೆ ಮಾಡದೇ ಇದ್ದರೆ, ಅಂಗನವಾಡಿ ಬಂದ್ ಮಾಡಿ ಹೋರಾಟ ಮಾಡೋ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ಕೊಡಗು: 104 ಕಡೆಗಳಲ್ಲಿ ಭೂಕುಸಿತದ ಭೀತಿ, 2,995 ಕುಟುಂಬಗಳ ಸ್ಥಳಾಂತರಕ್ಕೆ ನೋಟಿಸ್

ಧಾರವಾಡ ಜಿಲ್ಲೆಯಲ್ಲಿ ಬಹುತೇಕ ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲೇ ನಡೆಯುತ್ತಿವೆ. ಕಳೆದ ಎರಡು ತಿಂಗಳಿನಿಂದ ಆ ಕಟ್ಟಡ ಬಾಡಿಗೆಯನ್ನೂ ನೀಡಿಲ್ಲ. ಇದನ್ನೂ ಕೂಡ ಅಂಗನವಾಡಿ ಶಿಕ್ಷಕಿಯರೇ ಭರಿಸಿದ್ದಾರೆ. ಸದ್ಯ ಅಂಗನವಾಡಿ ಶಿಕ್ಷಕಿಯರ ಹಾಗೂ ಸಹಾಯಕಿಯರ ಗೌರವ ಧನವೇ 4.19 ಕೋಟಿ ರೂಪಾಯಿ ಬಾಕಿ ಇದೆ. ಇನ್ನು‌ ಮೊಟ್ಟೆಯ ಬಾಕಿ 1.58 ಕೋಟಿ ರೂಪಾಯಿ ಇದೆ. ಇದು ಯಾವಾಗ ಬರುತ್ತದೆಯೋ ಗೊತ್ತಿಲ್ಲ. ‌ಇನ್ನು ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ, ಒಂದನೇ ಹಂತದ ಅನುದಾನ ಬಿಡುಗಡೆಯಾಗಿದೆ. ಆದರೆ ಅದು ಕೆಲ ತಾಂತ್ರಿಕ ಸಮಸ್ಯೆಯಿಂದ ಬಂದಿಲ್ಲ. ಇಷ್ಟರಲ್ಲಿಯೇ ತಾಂತ್ರಿಕ ಸಮಸ್ಯೆಗೆ ಪರಿಹಾರ ಸಿಕ್ಕು, ಶೀಘ್ರದಲ್ಲಿಯೇ ಎಲ್ಲ ಹಣ ಪಾವತಿಯಾಗಲಿದೆ ಅನ್ನುತ್ತಾರೆ.

ಈ ಮುಂಚೆಯಿಂದಲೂ ಅಂಗನವಾಡಿ ಶಿಕ್ಷಕಿಯರಿಗೂ ಒಂದಿಲ್ಲ ಒಂದು ಸಮಸ್ಯೆಯಿಂದ ಬಳಲುತ್ತಲೇ ಇದ್ದಾರೆ. ಆದರೆ ಇದೀಗ ಅವರ ಗೌರವ ಧನಕ್ಕೂ ಈ ಸಮಸ್ಯೆ ಬಂದಿರೋದ್ರಿಂದ ಮುಂದೇನು ಮಾಡಬೇಕು ಅನ್ನೋದು ಗೊತ್ತಾಗದೇ ಪರದಾಡುತ್ತಿದ್ದಾರೆ. ಕೂಡಲೇ ಈ ಸಮಸ್ಯೆ ಬಗೆ ಹರಿಸಿ ಅವರ ಸಮಸ್ಯೆಗೆ ಸರಕಾರ ಇತಿಶ್ರೀ ಹಾಡಬೇಕಿದೆ. ಇಲ್ಲವಾದಲ್ಲಿ ಅಂಗನವಾಡಿ ಕೇಂದ್ರಗಳು ಬಾಗಿಲು ಮುಚ್ಚೋದು ಗ್ಯಾರಂಟಿ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು