AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿ ಶಿಕ್ಷಕಿಯರ 5 ತಿಂಗಳ ಗೌರವ ಧನ, ಮೊಟ್ಟೆ ಹಣ ಬಾಕಿ ಉಳಿಸಿಕೊಂಡ ಸರ್ಕಾರ; ಬಂದ್​ ಮಾಡಿ ಹೋರಾಟ ಮಾಡಲು ನಿರ್ಧಾರ

ಚುನಾವಣೆಗೂ ಮುನ್ನ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೇರಿದ ರಾಜ್ಯ ಕಾಂಗ್ರೆಸ್ ಸರ್ಕಾರ, ಗೃಹಲಕ್ಷ್ಮೀ ಹಣವನ್ನೇ ಮೂರು ತಿಂಗಳಿನಿಂದ ಬಾಕಿ ಇರಿಸಿಕೊಂಡಿದೆ. ಇದೀಗ ಅಂಗನವಾಡಿ ಶಿಕ್ಷಕಿಯರ ಗೌರವ ಧನವನ್ನೂ ಬಾಕಿ ಇರಿಸಿಕೊಂಡಿದೆ. ಅಷ್ಟೇ ಅಲ್ಲ, ಮಕ್ಕಳಿಗೆ ನೀಡುವ ಮೊಟ್ಟೆಯ ಹಣವನ್ನೂ ಕೊಟ್ಟಿಲ್ಲ. ಇದರಿಂದಾಗಿ ಅಂಗನವಾಡಿಗಳಲ್ಲಿ ಮಕ್ಕಳಿಗೆ ಸಿಗಬೇಕಾಗಿರೋ ಯಾವುದೇ ಆಹಾರ ಸರಿಯಾಗಿ ಸಿಗುತ್ತಿಲ್ಲ.

ಅಂಗನವಾಡಿ ಶಿಕ್ಷಕಿಯರ 5 ತಿಂಗಳ ಗೌರವ ಧನ, ಮೊಟ್ಟೆ ಹಣ ಬಾಕಿ ಉಳಿಸಿಕೊಂಡ ಸರ್ಕಾರ; ಬಂದ್​ ಮಾಡಿ ಹೋರಾಟ ಮಾಡಲು ನಿರ್ಧಾರ
ಧಾರವಾಡ: ಅಂಗನವಾಡಿ ಶಿಕ್ಷಕಿಯರ 5 ತಿಂಗಳ ಗೌರವ ಧನ, ಮೊಟ್ಟೆ ಹಣ ಬಾಕಿ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Aug 05, 2024 | 11:28 AM

Share

ಧಾರವಾಡ, ಆಗಸ್ಟ್.05: ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಅಂಗನವಾಡಿ (Anganwadi) ಶಿಕ್ಷಕಿಯರಿಗೆ ಐದು ತಿಂಗಳಿನಿಂದ ಗೌರವ ಧನವೇ ಬಂದಿಲ್ಲ. ಅಂಗನವಾಡಿಯಿಂದ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೂರೈಕೆ ಮಾಡಲಾಗುವ ಮೊಟ್ಟೆಯನ್ನು (Egg) ಅಂಗನವಾಡಿ ಶಿಕ್ಷಕಿಯರೇ ತಮ್ಮ ಕೈಯಿಂದ ದುಡ್ಡು ಹಾಕಿ ಪೂರೈಕೆ ಮಾಡುತ್ತಿದ್ದಾರೆ. ಕಳೆದ ಐದು ತಿಂಗಳಿನಿಂದ ತಮ್ಮ ಕೈಯಿಂದ ದುಡ್ಡು ಹಾಕಿ ತೆಗೆದುಕೊಂಡು ಬಂದ ಮೊಟ್ಟೆಯ ಬಿಲ್‌ ಕೂಡ ಬಾಕಿ ಇದೆ. ಇದರಿಂದ ಅಂಗನವಾಡಿ ಶಿಕ್ಷಕಿಯರು ಸರ್ಕಾರಕ್ಕೆ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ಇನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 494 ಅಂಗನವಾಡಿ ಕೇಂದ್ರಗಳಿವೆ. ಅವುಗಳ ಬಾಡಿಗೆ ಕೂಡ ಕೊಡಲು ಸಾಧ್ಯವಾಗಿಲ್ಲ.‌ ಇಲಾಖೆಯ ನಿರ್ದೇಶಕರಿಗೆ ಕೇಳಿದರೆ, ಅವರು ಪ್ರತಿ‌ ತಿಂಗಳಿಗೆ ಎಷ್ಟು ಅನುದಾನ ಇದೆಯೋ, ಅದನ್ನು ಕೊಡುತ್ತಲೇ ಬಂದಿದ್ದೇವೆ ಅನ್ನುತ್ತಿದ್ದಾರೆ. ಹಾಗಾದರೆ ಅಂಗನವಾಡಿ ಶಿಕ್ಷಕಿಯರಿಗೆ ಏಕೆ ಹಣ ಮುಟ್ಟಿಲ್ಲ‌‌‌ ಅನ್ನೋ ಪ್ರಶ್ನೆ ಎದ್ದಿದೆ.‌ ಈ ಶಿಕ್ಷಕಿಯರು ಕೈಯಿಂದ ಹಣ ಹಾಕಿ ಮೊಟ್ಟೆ ತಂದು ಸುಸ್ತಾಗಿ‌ ಹೋಗಿದ್ದಾರೆ. ಇತ್ತ ಮೊಟ್ಟೆಗೆ ಹಣವನ್ನೂ ಕೊಡಬೇಕು, ಅತ್ತ ಗೌರವ ಧನ ಇಲ್ಲದೆ ಕೆಲಸ ಮಾಡಬೇಕು. ಹೀಗಾಗಿ ಬೇಗ ಹಣ ಬಿಡುಗಡೆ ಮಾಡದೇ ಇದ್ದರೆ, ಅಂಗನವಾಡಿ ಬಂದ್ ಮಾಡಿ ಹೋರಾಟ ಮಾಡೋ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ಕೊಡಗು: 104 ಕಡೆಗಳಲ್ಲಿ ಭೂಕುಸಿತದ ಭೀತಿ, 2,995 ಕುಟುಂಬಗಳ ಸ್ಥಳಾಂತರಕ್ಕೆ ನೋಟಿಸ್

ಧಾರವಾಡ ಜಿಲ್ಲೆಯಲ್ಲಿ ಬಹುತೇಕ ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲೇ ನಡೆಯುತ್ತಿವೆ. ಕಳೆದ ಎರಡು ತಿಂಗಳಿನಿಂದ ಆ ಕಟ್ಟಡ ಬಾಡಿಗೆಯನ್ನೂ ನೀಡಿಲ್ಲ. ಇದನ್ನೂ ಕೂಡ ಅಂಗನವಾಡಿ ಶಿಕ್ಷಕಿಯರೇ ಭರಿಸಿದ್ದಾರೆ. ಸದ್ಯ ಅಂಗನವಾಡಿ ಶಿಕ್ಷಕಿಯರ ಹಾಗೂ ಸಹಾಯಕಿಯರ ಗೌರವ ಧನವೇ 4.19 ಕೋಟಿ ರೂಪಾಯಿ ಬಾಕಿ ಇದೆ. ಇನ್ನು‌ ಮೊಟ್ಟೆಯ ಬಾಕಿ 1.58 ಕೋಟಿ ರೂಪಾಯಿ ಇದೆ. ಇದು ಯಾವಾಗ ಬರುತ್ತದೆಯೋ ಗೊತ್ತಿಲ್ಲ. ‌ಇನ್ನು ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ, ಒಂದನೇ ಹಂತದ ಅನುದಾನ ಬಿಡುಗಡೆಯಾಗಿದೆ. ಆದರೆ ಅದು ಕೆಲ ತಾಂತ್ರಿಕ ಸಮಸ್ಯೆಯಿಂದ ಬಂದಿಲ್ಲ. ಇಷ್ಟರಲ್ಲಿಯೇ ತಾಂತ್ರಿಕ ಸಮಸ್ಯೆಗೆ ಪರಿಹಾರ ಸಿಕ್ಕು, ಶೀಘ್ರದಲ್ಲಿಯೇ ಎಲ್ಲ ಹಣ ಪಾವತಿಯಾಗಲಿದೆ ಅನ್ನುತ್ತಾರೆ.

ಈ ಮುಂಚೆಯಿಂದಲೂ ಅಂಗನವಾಡಿ ಶಿಕ್ಷಕಿಯರಿಗೂ ಒಂದಿಲ್ಲ ಒಂದು ಸಮಸ್ಯೆಯಿಂದ ಬಳಲುತ್ತಲೇ ಇದ್ದಾರೆ. ಆದರೆ ಇದೀಗ ಅವರ ಗೌರವ ಧನಕ್ಕೂ ಈ ಸಮಸ್ಯೆ ಬಂದಿರೋದ್ರಿಂದ ಮುಂದೇನು ಮಾಡಬೇಕು ಅನ್ನೋದು ಗೊತ್ತಾಗದೇ ಪರದಾಡುತ್ತಿದ್ದಾರೆ. ಕೂಡಲೇ ಈ ಸಮಸ್ಯೆ ಬಗೆ ಹರಿಸಿ ಅವರ ಸಮಸ್ಯೆಗೆ ಸರಕಾರ ಇತಿಶ್ರೀ ಹಾಡಬೇಕಿದೆ. ಇಲ್ಲವಾದಲ್ಲಿ ಅಂಗನವಾಡಿ ಕೇಂದ್ರಗಳು ಬಾಗಿಲು ಮುಚ್ಚೋದು ಗ್ಯಾರಂಟಿ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ