AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜಲಿ, ನೇಹಾ ಕೊಲೆ ಪ್ರಕರಣ; ಸಿಐಡಿ ವಿಚಾರಣೆ ಬಳಿಕ ನಿರಂಜನ​​ ಹೇಳಿದ್ದಿಷ್ಟು

ಹುಬ್ಬಳ್ಳಿಯನ್ನ ಬೆಚ್ಚಿಬೀಳಿಸಿದ್ದ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮೇ.26) ಮೃತ ನೇಹಾ ತಂದೆ ನಿರಂಜನ ಹಿರೇಮಠ ಅವರು ಸಿಐಡಿ ಅಧಿಕಾರಿಗಳನ್ನು ಭೇಟಿ ಆಗಿದ್ದಾರೆ. ಬಳಿಕ ಮಾತನಾಡಿದ ಅವರು, ‘‘ನಾನು ಇವತ್ತು ಸಿಐಡಿ(CID) ಅಧಿಕಾರಿಗಳ ಸಮಯ ಕೇಳಿದ್ದೆ. ಹೀಗಾಗಿ ಅಧಿಕಾರಿಗಳ ಭೇಟಿ ಮಾಡಲು ಬಂದಿದ್ದೆ ಎಂದಿದ್ದಾರೆ.

ಅಂಜಲಿ, ನೇಹಾ ಕೊಲೆ ಪ್ರಕರಣ; ಸಿಐಡಿ ವಿಚಾರಣೆ ಬಳಿಕ ನಿರಂಜನ​​ ಹೇಳಿದ್ದಿಷ್ಟು
ನಿರಂಜನ
ಶಿವಕುಮಾರ್ ಪತ್ತಾರ್
| Edited By: |

Updated on: May 26, 2024 | 9:01 PM

Share

ಹುಬ್ಬಳ್ಳಿ, ಮೇ.26: ‘ನಾನು ಇವತ್ತು ಸಿಐಡಿ(CID) ಅಧಿಕಾರಿಗಳ ಸಮಯ ಕೇಳಿದ್ದೆ. ಹೀಗಾಗಿ ಅಧಿಕಾರಿಗಳ ಭೇಟಿ ಮಾಡಲು ಬಂದಿದ್ದೆ ಎಂದು ನೇಹಾ ತಂದೆ ನಿರಂಜನ ಹಿರೇಮಠ ಹೇಳಿದ್ದಾರೆ. ಸಿಐಡಿ ವಿಚಾರಣೆ ಬಳಿಕ ಹುಬ್ಬಳ್ಳಿ(Hubballi)ಯಲ್ಲಿ ಮಾತನಾಡಿದ ಅವರು, ‘ ಅನೇಕ ದಿನಗಳಿಂದ ನಾನು ಭೇಟಿ ಮಾಡಲು ಆಗಿರಲಿಲ್ಲ. ಹಾಗಾಗಿ ಇವತ್ತು ಸಮಯ ಕೇಳಿದ್ದೆ. ನೇಹಾ ಕೊಲೆ ಕೇಸ್ ವಿಚಾರವಾಗಿ ಕೆಲವು ಮಾಹಿತಿ ಕೊಟ್ಟಿದ್ದೇನೆ. ಇದುವರೆಗೂ ನೇಹಾ ಕೇಸ್​ನಲ್ಲಿ ಒಬ್ಬರನ್ನ ಮಾತ್ರ ಅರೆಸ್ಟ್ ಮಾಡಿದ್ದಾರೆ. ಈ ಕುರಿತು ನಾನು  ಅಧಿಕಾರಿಗಳನ್ನ ಪ್ರಶ್ನೆ ಮಾಡಿದ್ದೇನೆ ಎಂದರು.

ಸಂಪೂರ್ಣವಾಗಿ ಅಂಜಲಿ ಪ್ರಕರಣ ಬೇಧಿಸಬೇಕು

ಅಧಿಕಾರಿಗಳು ನಿಮಗೆ ಅನುಮಾನ ಇದ್ರೆ, ಬರೆದು ಕೊಡಿ ಎಂದು ಹೇಳಿದ್ದಾರೆ. ನಾಳೆ(ಮೇ.27) ಹುಬ್ಬಳ್ಳಿಗೆ ಸಿಐಡಿ ಡಿಜಿ ಆಗಮಿಸಲಿದ್ದು, ನಮ್ಮ ಮನೆಗೂ ಅಧಿಕಾರಿಗಳು ಬರಲಿದ್ದಾರೆ. ಇನ್ನು ಹತ್ಯೆಯಾದ ಅಂಜಲಿ ಮನೆಯಲ್ಲಿ ತಂದೆ, ಸಹೋದರ ಯಾರೂ ಇಲ್ಲ. ನಾನು ಆ ವಾರ್ಡ್ ಸದಸ್ಯನಾಗಿ ಅವರ ಬೆಂಬಲಕ್ಕೆ ನಿಂತಿದ್ದೇನೆ. ಅಂಜಲಿ ಹತ್ಯೆ ಕೇಸ್ ಕೂಡ ಪಾಸ್ಟ್ ಟ್ರ್ಯಾಕ್ ಕೊಡಬೇಕು. ಸಂಪೂರ್ಣವಾಗಿ ಅಂಜಲಿ ಪ್ರಕರಣವನ್ನು ಬೇಧಿಸಬೇಕು ಎಂದು ಮನವಿ ಮಾಡಿದ್ದೇನೆ.

ಇದನ್ನೂ ಓದಿ:ನೇಹಾ ಕೊಲೆಯ ಬಳಿಕ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಶನರ್ ಟ್ರಾನ್ಸ್ ಫರ್ ಆಗಿದ್ದರೆ ಅಂಜಲಿ ಹತ್ಯೆ ನಡೆಯುತ್ತಿರಲಿಲ್ಲ: ನಿರಂಜನ್ ಹಿರೇಮಠ

ಇದಕ್ಕೆ ಉತ್ತರಿಸಿ, ‘ನಾವು ಯಾರ ಕೈಗೊಂಬೆ ಆಗಿ ಕೆಲಸ ಮಾಡಲ್ಲ ಅಂದಿದ್ದಾರೆ. ಹೀಗಾಗಿ ನಮಗೆ ನ್ಯಾಯ ಸಿಗುವ ಭರವಸೆ ಇದೆ. ನಾಳೆ(ಮೇ.27) ಸಿಐಡಿ ಡಿಜಿ ಬಂದು ನಮ್ಮ ಜೊತೆ ಮಾತಾಡಲಿದ್ದಾರೆ. ನೇಹಾ ಕೊಲೆ ಕೇಸ್ ವಿಚಾರವಾಗಿ ಡಿಜಿ ಅವರು ಚರ್ಚೆ ಮಾಡಲಿದ್ದಾರೆಂದು ಸಿಐಡಿ ಅಧಿಕಾರಿಗಳು ಹೇಳಿದ್ದಾರೆ. ನಾನು ನೇಹಾ ಕೊಲೆ ಕೇಸ್ ದಿಕ್ಕು ತಪ್ಪಿಸೋ ಕೆಲಸ ಆಗಬಾರದು ಎಂದು ಮನವಿ ಮಾಡಿದ್ದೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ