AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಥ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹತ್ಯೆ ಹಿಂದೆ ಕೈ ನಾಯಕನ ಕೈವಾಡ!

ಯೂಥ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹತ್ಯೆ ಹಿಂದೆ ಕೈ ಮುಖಂಡನ ಪಾತ್ರವಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ತಲೆಮರೆಸಿಕೊಂಡಿರುವ ಕೈ ಮುಖಂಡನಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ನಾಲ್ಕು ತಂಡ ರಚಿಸಿ ಹುಡುಕುತ್ತಿದ್ದರೂ ಸಹ ಆತನ ಸುಳಿವು ಸಿಗುತ್ತಿಲ್ಲ. ಬಂಧನ ಭೀತಿಯಿಂದ ಕೈ ಮುಖಂಡ ವಿದೇಶಕ್ಕೆ ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಹಾಗಾದ್ರೆ, ಯಾರು ಆ ಕೈ ಮುಖಂಡ? ಸ್ವಪಕ್ಷದ ಯವಕನನ್ನ ಹತ್ಯೆ ಮಾಡುವ ದ್ವೇಷ ಏನಿತ್ತು ಎನ್ನುವ ಡಿಟೇಲ್ಸ್ ಇಲ್ಲಿದೆ.

ಯೂಥ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹತ್ಯೆ ಹಿಂದೆ ಕೈ ನಾಯಕನ ಕೈವಾಡ!
ಇಸ್ಮಾಯಿಲ್​ ತಮಾಟಗಾರ, ಫೈರೋಜ್​
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Apr 19, 2026 | 6:27 PM

Share

ಧಾರವಾಡ, (ಏಪ್ರಿಲ್ 19) : ಹಾಸ್ಮಿ ನಗರದಲ್ಲಿ ಏಪ್ರಿಲ್ 10ರ ರಾತ್ರಿ ನಡೆದಿದ್ದ ಹತ್ಯೆ ಇಡೀ ಧಾರವಾಡ (Dharwad) ಜಿಲ್ಲೆಯನ್ನೇ ಬೆಚ್ಚಿಬಿಳಿಸಿತ್ತು.ಇದೇ ಏಪ್ರಿಲ್ 24 ರಂದು ಹಸೆಮಣೆ ಏರಬೇಕಿದ್ದ ಯೂಥ್ ಕಾಂಗ್ರೆಸ್ (Youth Congress Leader) ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ನನ್ನು (fairoz Murder Case) ಮನೆಗೆ ನುಗ್ಗಿ ಹತ್ಯೆ ಮಾಡಲಾಗಿತ್ತು. ಘಟನೆ ಸಂಬಂಧ ಪೊಲೀಸರು ಈಗಾಗಲೇ ಕೊಲೆಯಾದ 36 ಗಂಟೆಯಲ್ಲಿ 9 ಜನ ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ನಂತರ ತನಿಖೆ ಮುಂದುವರೆಸಿದ ಪೊಲೀಸರಿಗೆ ಕೊಲೆಯ ಹಿಂದೆ ಹಲವು ಕೈಗಳ ಪಾತ್ರವಿರುದುವು ದೃಢವಾಗಿದ್ದು, ಕೆಲವರನ್ನು ಕರಸಿ ವಿಚಾರಣೆ ನಡೆಸಿದ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಆದ್ರೆ, ಇದೀಗ ಈ ಕೊಲೆ ಹಿಂದೆ ಕಾಂಗ್ರೆಸ್ ಮುಖಂಡನ ಕೈವಾಡ ಶಂಕೆ ವ್ಯಕ್ತವಾಗಿದೆ. ಹೌದು… ಕೈ ಮುಖಂಡ ಹಾಗೂ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಲಾಯಿಲ್ ತಮಟಗಾರ್ ( (ismail tamatgar) ಹೆಸರೂ ಕೇಳಿ ಬಂದಿದ್ದು, ಈತನ ಬಂಧನಕ್ಕೆ ಪೊಲೀಸರು ತಂಡಗಳು ಬಲೆ ಬೀಸಿವೆ.

ಕೊಲೆ ಪ್ರಕರಣದಲ್ಲಿ ಇಸ್ಮಾಯಿಲ್ ತಮಟಗಾರ್ ಪಾತ್ರವೂ ಇದೆ ಅನ್ನೋದಕ್ಕೆ ಹಲವಾರು ಆಡಿಯೋಗಳು ಸಾಕ್ಷಿಯಾಗಿವೆ ಎಂದು ಫೈರೋಜ್ ಕುಟುಂಬಸ್ಥರು ಆರೋಪಿಸಿದ್ದರು. ಅಲ್ಲದೇ ನೇರವಾಗಿ ಈ ಕೊಲೆಯ ಹಿಂದೆ ತಮಟಗಾರ್ ಇದ್ದಾನೆ ಅಂತಾನೂ ಹೇಳಿದ್ದರು. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿರೋ ಪೊಲೀಸರು ಇಸ್ಮಾಯಿಲ್ ತಮಟಗಾರ್ ಗಾಗಿ ತಲಾಶ್ ನಡೆಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಯುವ ಮುಖಂಡನ ಹತ್ಯೆ: 24 ಗಂಟೆಯೊಳಗೇ ಹಂತಕರು ಅರೆಸ್ಟ್, ಕೊಲೆ ರಹಸ್ಯ ಬಯಲು

ಪ್ರಮುಖ ಆರೋಪಿ ವಿದೇಶಕ್ಕೆ ಪರಾರಿ?

ಈ ಪ್ರಕರಣ ಸಂಬಂಧ ಪೊಲೀಸರು, ಕೆಲವರನ್ನು ಕರಸಿ ವಿಚಾರಣೆ ನಡೆಸಿದ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಮೈನುದ್ದೀನ್, ಸಾಗರ್, ಅಲ್ಲಾವುದ್ದೀನ್ ಎಂಬುವರನ್ನ ಬಂಧಿಸಿದ್ದಾರೆ. ಇನ್ನು ಇದೀಗ ಈ ಪ್ರಕರಣದಲ್ಲಿ ಕೈ ಮುಖಂಡ ಹಾಗೂ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಲಾಯಿಲ್ ತಮಟಗಾರ್ ನ ಹೆಸರೂ ಕೇಳಿ ಬಂದಿದ್ದು, ಆತನ ಬಂಧನಕ್ಕೆ ಪೊಲೀಸರು ಸರ್ಚ್ ವಾರೆಂಟ್ ಹೊರಡಿಸಿದ್ದಾರೆ. ಆದ್ರೆ, ಇಸ್ಲಾಯಿಲ್ ತಮಟಗಾರ್ ವಿಶೇಶಕ್ಕೆ ಪರಾರಿಯಾಗಿವ ಶಂಕೆ ವ್ಯಕ್ತವಾಗಿದೆ.

ಇಸ್ಮಾಯಿಲ್ ಮನೆ ಹಾಗೂ ಅಂಜುಮನ್ ಸಂಸ್ಥೆಗೆ ಸರ್ಚ್ ವಾರಂಟ್ ನೀಡಿದ್ದಾರೆ. ಸದ್ಯ ನೆರೆಯ ಗೋವಾ, ಹೈದ್ರಾಬಾದ್, ಮುಂಬೈನಲ್ಲಿ ಇಸ್ಮಾಯಿಲ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆದರೆ ಮನೆಗೆ ಸರ್ಚ್ ವಾರಂಟ್ ನೀಡುತ್ತಿದ್ದಂತೆಯೇ ಇಸ್ಮಾಯಿಲ್ ತಮಟಗಾರ್ ವಿದೇಶಕ್ಕೆ ಹಾರಿರುವ ಅನುಮಾನ ಮೂಡಿದೆ. ಸದ್ಯ ಪೊಲೀಸರು ವಿದೇಶಕ್ಕೂ ಒಂದು ತಂಡ ಕಳುಹಿಸಿ ಇಸ್ಮಾಯಿಲ್ ನನ್ನು ಬಂಧಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ ಫೈರೋಜ್ ಕೊಲೆ ಪ್ರಕರಣದ ತನಿಖೆ ಮುಂದುವರೆಸಿದಂತೆ ಆರೋಪಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಪೊಲೀಸರು ಪ್ರಕರಣದ ಪ್ರಮುಖ ಆರೋಪಿಗಾಗಿ ನಾಲ್ಕು ತಂಡ ರಚಿಸಿ ಹುಡುಕಾಟ ನಡೆಸಿದ್ದಾರೆ. ‌ಪ್ರಮುಖ ಆರೋಪಿ ಇಸ್ಮಾಯಿಲ್ ತಮಟಗಾರ್ ಬಂಧನದ ಬಳಿಕ ಕೊಲೆಯ ರಹಸ್ಯ ಬಯಲಾಗಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:23 pm, Sun, 19 April 26

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?