AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Annigeri: ಅಣ್ಣಿಗೇರಿ ಜನರ ಬಹು ದಿನಗಳ ಕುಡಿಯುವ ನೀರಿನ ಸಮಸ್ಯೆಗೆ ಸಿಕ್ತು ಶಾಶ್ವತ ಪರಿಹಾರ -ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Pralhad Joshi: ಸುಮಾರು 20 ವರ್ಷಗಳಿಂದ ಈ ಭಾಗದ ಜನರು ನೀರಿಗಾಗಿ ಹೋರಾಟ ಮಾಡಿದ್ದಾರೆ. ಬಸಾಪುರ ಕೆರೆ ನಿರ್ಮಾಣದ ಮೂಲಕ ಅಣ್ಣಿಗೇರಿ ಜನರ ಬಹುದಿನಗಳ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರೆತಿದೆ -ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Annigeri: ಅಣ್ಣಿಗೇರಿ ಜನರ ಬಹು ದಿನಗಳ ಕುಡಿಯುವ ನೀರಿನ ಸಮಸ್ಯೆಗೆ ಸಿಕ್ತು ಶಾಶ್ವತ ಪರಿಹಾರ -ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಣ್ಣಿಗೇರಿ ಜನರ ಬಹು ದಿನಗಳ ಕುಡಿಯುವ ನೀರಿನ ಸಮಸ್ಯೆಗೆ ಸಿಕ್ತು ಶಾಶ್ವತ ಪರಿಹಾರ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jan 14, 2023 | 5:06 PM

ಹುಬ್ಬಳ್ಳಿ: ಸುಮಾರು 20 ವರ್ಷಗಳಿಂದ ಈ ಭಾಗದ ಜನರು ನೀರಿಗಾಗಿ ಹೋರಾಟ ಮಾಡಿದ್ದಾರೆ. ಬಸಾಪುರ ಕೆರೆ ನಿರ್ಮಾಣದ ಮೂಲಕ ಅಣ್ಣಿಗೇರಿ (Annigeri) ಜನರ ಬಹುದಿನಗಳ ಕುಡಿಯುವ ನೀರಿನ (Drinking Water) ಸಮಸ್ಯೆಗೆ ಪರಿಹಾರ ದೊರೆತಂತಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು. ಬಸಾಪುರ ಗ್ರಾಮದ ಹತ್ತಿರ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಡಳಿತ, ಪುರಸಭೆ ಅಣ್ಣಿಗೇರಿ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಯೋಗದಲ್ಲಿ ಬಸಾಪುರ ಗ್ರಾಮದ ಹತ್ತಿರ 76 ಎಕರೆ ಪ್ರದೇಶದಲ್ಲಿ ಪುರಸಭೆ ಮಾಲೀಕತ್ವದ ಹೊಸದಾಗಿ ನಿರ್ಮಿಸಿರುವ 1750 ಮಿಲಿಯನ್ ಲೀಟರ್ ಸಾಮರ್ಥ್ಯದ ಕೆರೆಗೆ ಬಾಗಿನ ಅರ್ಪಣೆ ಹಾಗೂ ರೂ. 54 ಕೋಟಿ ವೆಚ್ಚದಲ್ಲಿ ಅಣ್ಣಿಗೇರಿ ಪಟ್ಟಣಕ್ಕೆ 24×7 ನಿರಂತರ ಕುಡಿಯುವ ನೀರಿನ ಯೋಜನೆ ಕಾಮಗಾರಿ ಲೋಕಾರ್ಪಣೆ ಮತ್ತು ಕೆರೆಗೆ ಭೂಮಿ ನೀಡಿದ ರೈತರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು (Hubballi)‌.

ಸತತ ಮತ್ತು ಸುದೀರ್ಘ ಹೋರಾಟದ ಫಲದಿಂದ ಅಣ್ಣಿಗೇರಿಗೆ ಕುಡಿಯುವ ನೀರು ಸಿಗುತ್ತಿದೆ. ಮಳೆ ಜಾಸ್ತಿಯಾಗಿದ್ದರಿಂದ ಈ ಭಾಗದ ರಸ್ತೆಗಳು ಹಾಳಾಗಿವೆ. ರಸ್ತೆಗಳನ್ನು ಶೀಘ್ರವೇ ದುರಸ್ತಿ ಮಾಡಲಾಗುವುದು. ಹಲವು ವರ್ಷಗಳ ಹೋರಾಟದ ಬಳಿಕ ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಬೆಳೆ ವಿಮೆ ಹಣವನ್ನು ರೈತರಿಗೆ ನೀಡಲಾಗುತ್ತಿದೆ. ಬೆಳೆ ಹಾನಿ ಪರಿಹಾರವನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ನಗರಾಭಿವೃದ್ಧಿ ಸಚಿವರಾದ ಬಿ.ಎ. ಬಸವರಾಜ ( ಭೈರತಿ) ಅವರು ಮಾತನಾಡಿ, ದಾಹ ಮುಕ್ತ ಕರ್ನಾಟಕ ಮಾಡಲು ಸಂಕಲ್ಪ ಮಾಡಲಾಗಿದೆ. ನದಿ ಮೂಲದಿಂದ ನೀರು ತರುವ ಕೆಲಸ ಮಾಡಲಾಗುತ್ತಿದೆ. ಅಣ್ಣಿಗೇರಿಗೆ ಶಾಶ್ವತ ಕುಡಿಯುವ ನೀರಿನ ಬೇಡಿಕೆ ಈಡೇರಲಿದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಮಾತನಾಡಿ, ಬಸಾಪುರ ಕೆರೆ ಈ ಭಾಗದ ಜನರ ಜೀವನಾಡಿಯಾಗಲಿದೆ. ಎಲ್ಲ ಮೂಲ ಸೌಕರ್ಯಗಳಿಗಿಂತ ಕುಡಿಯುವ ನೀರು ಹೆಚ್ಚು ಅವಶ್ಯಕ. ನಳಗಳ ಮೂಲಕ ಪ್ರತಿ ಮನೆಗೆ ಕುಡಿಯುವ ನೀರು ಒದಗಿಸಲಾಗುವುದು. ಕೇಂದ್ರ ಸರ್ಕಾರ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ನೀಡಿದೆ. ಇದರಿಂದ ಮಲಪ್ರಭೆಗೆ ಹೆಚ್ಚಿನ ನೀರು ಬರುತ್ತದೆ. ನರಗುಂದ, ನವಲಗುಂದ ರೈತರ ಹೋರಾಟದ ಫಲ ಸಫಲವಾಗಲಿದೆ. ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 43 ಹೊಸ ತಾಲೂಕುಗಳ ರಚನೆಗೆ ಅವಕಾಶ ನೀಡಿರುವೆ. ಈಗ ಅಣ್ಣಿಗೇರಿ ಮತ್ತು ಅಳ್ನಾವರ ತಾಲೂಕು ಕೇಂದ್ರಗಳಾಗಿವೆ. ರಾಣಿ ಚೆನ್ನಮ್ಮ ಆಡಳಿತ ನಡೆಸಿದ ಕಿತ್ತೂರನ್ನು ಸಹ ತಾಲೂಕಾಗಿ ಘೋಷಣೆ ಮಾಡಲಾಯಿತು ಎಂದು ಹೇಳಿದರು.

ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ ಮಾತನಾಡಿ, ಅಣ್ಣಿಗೇರಿ ಪಟ್ಟಣವು ಬಹಳ ವರ್ಷಗಳ ಕಾಲ ನೀರಿನ ಸಮಸ್ಯೆಯನ್ನು ಎದುರಿಸುತ್ತಿತ್ತು. ಅಣ್ಣಿಗೇರಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ದೃಢ ನಿರ್ಧಾರ ಮಾಡಿದೆ. ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿ ಆಗಿದ್ದಾಗ ಈ ಯೋಜನೆಗೆ ಅನುಮೋದನೆ ದೊರೆತಿತ್ತು. ಈ ಕೆರೆ ನಿರ್ಮಾಣದಿಂದ ಬರದ ನಾಡು ಎಂಬ ಹಣೆಪಟ್ಟಿಯನ್ನು ಕಿತ್ತೆಸೆಯಲಾಯಿತು. ಮಕರ ಸಂಕ್ರಾಂತಿ ಮುನ್ನಾದಿನ 21 ವಾರ್ಡ್ ಗಳಿಗೆ ಪೈಪಲೈನ್ ಅಳವಡಿಸಿ ನೀರು ಪೂರೈಕೆ ಮಾಡಲಾಗುವುದು.

ಬೆಂಗಳೂರು, ಹುಬ್ಬಳ್ಳಿ ಧಾರವಾಡ ನಗರಗಳಂತೆ ಅಣ್ಣಿಗೇರಿಗೆ 24×7 ನಿರಂತರ ಕುಡಿಯುವ ನೀರು ಒದಗಿಸಲಾಗುತ್ತದೆ. ಕಳಸಾ ಬಂಡೂರಿ ನೀರು ಮಲಪ್ರಭೆಯ ಒಡಲನ್ನು ಸೇರಬೇಕು. ಈ ಭಾಗದ ರೈತರು ಹಲವಾರು ವರ್ಷಗಳಿಂದ ಹೋರಾಟ ಮಾಡಿದ್ದಾರೆ. ಕೇಂದ್ರ ಸರ್ಕಾರ ಡಿಪಿಆರ್ ಗೆ ಒಪ್ಪಿಗೆ ಸೂಚಿಸಿದೆ. ಅಣ್ಣಿಗೇರಿ ತಾಲೂಕು ಆದ ಬಳಿಕ ತಾಲೂಕು ಪಂಚಾಯತ, ಖಜಾನೆ ಕಚೇರಿಯನ್ನು ಆರಂಭಿಸಲಾಗಿದೆ‌. ಅಣ್ಣಿಗೇರಿಯಲ್ಲಿ ರೂ. 5 ಕೋಟಿ ವೆಚ್ಚದಲ್ಲಿ ಕ್ರೀಡಾ ಪಾರ್ಕ್ ನಿರ್ಮಿಸಲಾಗುವುದು. 71 ಹಳ್ಳಿಗಳಿಗೆ ಜಲಧಾರೆ ಯೋಜನೆ ಮೂಲಕ ಮನೆ ಬಾಗಿಲಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ. ಬಸಾಪುರ ರೈತರು ಭೂಮಿ ಕೊಡದಿದ್ದರೆ ಈ ಯೋಜನೆ ಸಾಕಾರಗೊಳ್ಳುತ್ತಿರಲಿಲ್ಲ. ಬರ ಮುಕ್ತ ಅಣ್ಣಿಗೇರಿ ಮಾಡುವ ಕನಸು ಹೊತ್ತಿರುವೆ. ಜಿಲ್ಲೆಯಲ್ಲಿ 6 ಸಕ್ಕರೆ ಕಾರ್ಖಾನೆ ಮತ್ತು ಜವಳಿ ಪಾರ್ಕ್ ಸ್ಥಾಪಿಸಲಾಗುವುದು. ರೂ. 250 ಕೋಟಿ ವೆಚ್ಚದಲ್ಲಿ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಭರವಸೆ ನೀಡಿದರು.

ವರದಿ: ರಹಮತ್ ಕಂಚಗಾರ್, ಟಿವಿ9, ಹುಬ್ಬಳ್ಳಿ

ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು