AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Annigeri: ಅಣ್ಣಿಗೇರಿ ಜನರ ಬಹು ದಿನಗಳ ಕುಡಿಯುವ ನೀರಿನ ಸಮಸ್ಯೆಗೆ ಸಿಕ್ತು ಶಾಶ್ವತ ಪರಿಹಾರ -ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Pralhad Joshi: ಸುಮಾರು 20 ವರ್ಷಗಳಿಂದ ಈ ಭಾಗದ ಜನರು ನೀರಿಗಾಗಿ ಹೋರಾಟ ಮಾಡಿದ್ದಾರೆ. ಬಸಾಪುರ ಕೆರೆ ನಿರ್ಮಾಣದ ಮೂಲಕ ಅಣ್ಣಿಗೇರಿ ಜನರ ಬಹುದಿನಗಳ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರೆತಿದೆ -ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Annigeri: ಅಣ್ಣಿಗೇರಿ ಜನರ ಬಹು ದಿನಗಳ ಕುಡಿಯುವ ನೀರಿನ ಸಮಸ್ಯೆಗೆ ಸಿಕ್ತು ಶಾಶ್ವತ ಪರಿಹಾರ -ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಣ್ಣಿಗೇರಿ ಜನರ ಬಹು ದಿನಗಳ ಕುಡಿಯುವ ನೀರಿನ ಸಮಸ್ಯೆಗೆ ಸಿಕ್ತು ಶಾಶ್ವತ ಪರಿಹಾರ
TV9 Web
| Edited By: |

Updated on: Jan 14, 2023 | 5:06 PM

Share

ಹುಬ್ಬಳ್ಳಿ: ಸುಮಾರು 20 ವರ್ಷಗಳಿಂದ ಈ ಭಾಗದ ಜನರು ನೀರಿಗಾಗಿ ಹೋರಾಟ ಮಾಡಿದ್ದಾರೆ. ಬಸಾಪುರ ಕೆರೆ ನಿರ್ಮಾಣದ ಮೂಲಕ ಅಣ್ಣಿಗೇರಿ (Annigeri) ಜನರ ಬಹುದಿನಗಳ ಕುಡಿಯುವ ನೀರಿನ (Drinking Water) ಸಮಸ್ಯೆಗೆ ಪರಿಹಾರ ದೊರೆತಂತಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು. ಬಸಾಪುರ ಗ್ರಾಮದ ಹತ್ತಿರ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಡಳಿತ, ಪುರಸಭೆ ಅಣ್ಣಿಗೇರಿ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಯೋಗದಲ್ಲಿ ಬಸಾಪುರ ಗ್ರಾಮದ ಹತ್ತಿರ 76 ಎಕರೆ ಪ್ರದೇಶದಲ್ಲಿ ಪುರಸಭೆ ಮಾಲೀಕತ್ವದ ಹೊಸದಾಗಿ ನಿರ್ಮಿಸಿರುವ 1750 ಮಿಲಿಯನ್ ಲೀಟರ್ ಸಾಮರ್ಥ್ಯದ ಕೆರೆಗೆ ಬಾಗಿನ ಅರ್ಪಣೆ ಹಾಗೂ ರೂ. 54 ಕೋಟಿ ವೆಚ್ಚದಲ್ಲಿ ಅಣ್ಣಿಗೇರಿ ಪಟ್ಟಣಕ್ಕೆ 24×7 ನಿರಂತರ ಕುಡಿಯುವ ನೀರಿನ ಯೋಜನೆ ಕಾಮಗಾರಿ ಲೋಕಾರ್ಪಣೆ ಮತ್ತು ಕೆರೆಗೆ ಭೂಮಿ ನೀಡಿದ ರೈತರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು (Hubballi)‌.

ಸತತ ಮತ್ತು ಸುದೀರ್ಘ ಹೋರಾಟದ ಫಲದಿಂದ ಅಣ್ಣಿಗೇರಿಗೆ ಕುಡಿಯುವ ನೀರು ಸಿಗುತ್ತಿದೆ. ಮಳೆ ಜಾಸ್ತಿಯಾಗಿದ್ದರಿಂದ ಈ ಭಾಗದ ರಸ್ತೆಗಳು ಹಾಳಾಗಿವೆ. ರಸ್ತೆಗಳನ್ನು ಶೀಘ್ರವೇ ದುರಸ್ತಿ ಮಾಡಲಾಗುವುದು. ಹಲವು ವರ್ಷಗಳ ಹೋರಾಟದ ಬಳಿಕ ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಬೆಳೆ ವಿಮೆ ಹಣವನ್ನು ರೈತರಿಗೆ ನೀಡಲಾಗುತ್ತಿದೆ. ಬೆಳೆ ಹಾನಿ ಪರಿಹಾರವನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ನಗರಾಭಿವೃದ್ಧಿ ಸಚಿವರಾದ ಬಿ.ಎ. ಬಸವರಾಜ ( ಭೈರತಿ) ಅವರು ಮಾತನಾಡಿ, ದಾಹ ಮುಕ್ತ ಕರ್ನಾಟಕ ಮಾಡಲು ಸಂಕಲ್ಪ ಮಾಡಲಾಗಿದೆ. ನದಿ ಮೂಲದಿಂದ ನೀರು ತರುವ ಕೆಲಸ ಮಾಡಲಾಗುತ್ತಿದೆ. ಅಣ್ಣಿಗೇರಿಗೆ ಶಾಶ್ವತ ಕುಡಿಯುವ ನೀರಿನ ಬೇಡಿಕೆ ಈಡೇರಲಿದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಮಾತನಾಡಿ, ಬಸಾಪುರ ಕೆರೆ ಈ ಭಾಗದ ಜನರ ಜೀವನಾಡಿಯಾಗಲಿದೆ. ಎಲ್ಲ ಮೂಲ ಸೌಕರ್ಯಗಳಿಗಿಂತ ಕುಡಿಯುವ ನೀರು ಹೆಚ್ಚು ಅವಶ್ಯಕ. ನಳಗಳ ಮೂಲಕ ಪ್ರತಿ ಮನೆಗೆ ಕುಡಿಯುವ ನೀರು ಒದಗಿಸಲಾಗುವುದು. ಕೇಂದ್ರ ಸರ್ಕಾರ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ನೀಡಿದೆ. ಇದರಿಂದ ಮಲಪ್ರಭೆಗೆ ಹೆಚ್ಚಿನ ನೀರು ಬರುತ್ತದೆ. ನರಗುಂದ, ನವಲಗುಂದ ರೈತರ ಹೋರಾಟದ ಫಲ ಸಫಲವಾಗಲಿದೆ. ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 43 ಹೊಸ ತಾಲೂಕುಗಳ ರಚನೆಗೆ ಅವಕಾಶ ನೀಡಿರುವೆ. ಈಗ ಅಣ್ಣಿಗೇರಿ ಮತ್ತು ಅಳ್ನಾವರ ತಾಲೂಕು ಕೇಂದ್ರಗಳಾಗಿವೆ. ರಾಣಿ ಚೆನ್ನಮ್ಮ ಆಡಳಿತ ನಡೆಸಿದ ಕಿತ್ತೂರನ್ನು ಸಹ ತಾಲೂಕಾಗಿ ಘೋಷಣೆ ಮಾಡಲಾಯಿತು ಎಂದು ಹೇಳಿದರು.

ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ ಮಾತನಾಡಿ, ಅಣ್ಣಿಗೇರಿ ಪಟ್ಟಣವು ಬಹಳ ವರ್ಷಗಳ ಕಾಲ ನೀರಿನ ಸಮಸ್ಯೆಯನ್ನು ಎದುರಿಸುತ್ತಿತ್ತು. ಅಣ್ಣಿಗೇರಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ದೃಢ ನಿರ್ಧಾರ ಮಾಡಿದೆ. ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿ ಆಗಿದ್ದಾಗ ಈ ಯೋಜನೆಗೆ ಅನುಮೋದನೆ ದೊರೆತಿತ್ತು. ಈ ಕೆರೆ ನಿರ್ಮಾಣದಿಂದ ಬರದ ನಾಡು ಎಂಬ ಹಣೆಪಟ್ಟಿಯನ್ನು ಕಿತ್ತೆಸೆಯಲಾಯಿತು. ಮಕರ ಸಂಕ್ರಾಂತಿ ಮುನ್ನಾದಿನ 21 ವಾರ್ಡ್ ಗಳಿಗೆ ಪೈಪಲೈನ್ ಅಳವಡಿಸಿ ನೀರು ಪೂರೈಕೆ ಮಾಡಲಾಗುವುದು.

ಬೆಂಗಳೂರು, ಹುಬ್ಬಳ್ಳಿ ಧಾರವಾಡ ನಗರಗಳಂತೆ ಅಣ್ಣಿಗೇರಿಗೆ 24×7 ನಿರಂತರ ಕುಡಿಯುವ ನೀರು ಒದಗಿಸಲಾಗುತ್ತದೆ. ಕಳಸಾ ಬಂಡೂರಿ ನೀರು ಮಲಪ್ರಭೆಯ ಒಡಲನ್ನು ಸೇರಬೇಕು. ಈ ಭಾಗದ ರೈತರು ಹಲವಾರು ವರ್ಷಗಳಿಂದ ಹೋರಾಟ ಮಾಡಿದ್ದಾರೆ. ಕೇಂದ್ರ ಸರ್ಕಾರ ಡಿಪಿಆರ್ ಗೆ ಒಪ್ಪಿಗೆ ಸೂಚಿಸಿದೆ. ಅಣ್ಣಿಗೇರಿ ತಾಲೂಕು ಆದ ಬಳಿಕ ತಾಲೂಕು ಪಂಚಾಯತ, ಖಜಾನೆ ಕಚೇರಿಯನ್ನು ಆರಂಭಿಸಲಾಗಿದೆ‌. ಅಣ್ಣಿಗೇರಿಯಲ್ಲಿ ರೂ. 5 ಕೋಟಿ ವೆಚ್ಚದಲ್ಲಿ ಕ್ರೀಡಾ ಪಾರ್ಕ್ ನಿರ್ಮಿಸಲಾಗುವುದು. 71 ಹಳ್ಳಿಗಳಿಗೆ ಜಲಧಾರೆ ಯೋಜನೆ ಮೂಲಕ ಮನೆ ಬಾಗಿಲಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ. ಬಸಾಪುರ ರೈತರು ಭೂಮಿ ಕೊಡದಿದ್ದರೆ ಈ ಯೋಜನೆ ಸಾಕಾರಗೊಳ್ಳುತ್ತಿರಲಿಲ್ಲ. ಬರ ಮುಕ್ತ ಅಣ್ಣಿಗೇರಿ ಮಾಡುವ ಕನಸು ಹೊತ್ತಿರುವೆ. ಜಿಲ್ಲೆಯಲ್ಲಿ 6 ಸಕ್ಕರೆ ಕಾರ್ಖಾನೆ ಮತ್ತು ಜವಳಿ ಪಾರ್ಕ್ ಸ್ಥಾಪಿಸಲಾಗುವುದು. ರೂ. 250 ಕೋಟಿ ವೆಚ್ಚದಲ್ಲಿ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಭರವಸೆ ನೀಡಿದರು.

ವರದಿ: ರಹಮತ್ ಕಂಚಗಾರ್, ಟಿವಿ9, ಹುಬ್ಬಳ್ಳಿ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ