AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ರೌಡಿಶೀಟರ್ ಫಜಲ್​ ಅಹ್ಮದ್​​​ ಗಡಿಪಾರು, ಇನ್ನುಳಿದವರೆಗೂ ಖಡಕ್ ಎಚ್ಚರಿಕೆ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಎಚ್ಚೆತ್ತ ಹುಬ್ಬಳ್ಳಿ ಪೊಲೀಸರು, ರೌಡಿಶೀಟರ್​ಗಳನ್ನು ಗಡಿಪಾರು ಮಾಡುವ ಮೂಲಕ ಖಡಕ್​ ಎಚ್ಚರಿಕೆ ಕೊಡುತ್ತಿದ್ದಾರೆ. ಅದರಂತೆ ಇಂದು ಬೆಂಡಿಗೇರಿ ಠಾಣಾ ವ್ಯಾಪ್ತಿಯ ರೌಡಿಶೀಟರ್​ ಆದ ಫಜಲ್​ ಅಹ್ಮದ್​ ಪುಣೆವಾಲೆ ಎಂಬುವವನನ್ನು​​ ಬೀದರ್​ ಜಿಲ್ಲೆಗೆ 6 ತಿಂಗಳ ಅವಧಿಗೆ​ ಗಡಿಪಾರು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತೆ ರೇಣುಕಾ ಸುಕುಮಾರ್ ಆದೇಶಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ರೌಡಿಶೀಟರ್ ಫಜಲ್​ ಅಹ್ಮದ್​​​ ಗಡಿಪಾರು, ಇನ್ನುಳಿದವರೆಗೂ ಖಡಕ್ ಎಚ್ಚರಿಕೆ
ರೌಡಿಶೀಟರ್ ಫಜಲ್​ ಅಹ್ಮದ್​​​ ಗಡಿಪಾರು
ಶಿವಕುಮಾರ್ ಪತ್ತಾರ್
| Edited By: |

Updated on:Feb 23, 2024 | 8:28 PM

Share

ಹುಬ್ಬಳ್ಳಿ, ಫೆ.23: ಇನ್ನೇನು ಲೋಕಸಭೆ ಚುನಾವಣೆ(Lok Sabha Elections) ಹತ್ತಿರ ಬರುತ್ತಿದೆ. ಈ ಹಿನ್ನಲೆ ಎಚ್ಚೆತ್ತ ಹುಬ್ಬಳ್ಳಿ ಪೊಲೀಸರು ಮತ್ತೊಬ್ಬ ರೌಡಿಶೀಟರ್(Rowdy Sheeter) ಫಜಲ್​ ಅಹ್ಮದ್​ ಪುಣೆವಾಲೆ ಎಂಬುವವನನ್ನು​​ ಗಡಿಪಾರು ಮಾಡಿದ್ದಾರೆ. ಬೆಂಡಿಗೇರಿ ಠಾಣಾ ವ್ಯಾಪ್ತಿಯ ರೌಡಿಶೀಟರ್​ ಆದ ಇತ, ಹುಬ್ಬಳ್ಳಿಯ ಮಂಟೂರು ರಸ್ತೆಯ ಮಿಲ್ಲತ್ ನಗರ ನಿವಾಸಿ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪ ಕೇಳಿಬಂದಿದೆ. ಇದರಿಂದ ಬೀದರ್​ ಜಿಲ್ಲೆಗೆ 6 ತಿಂಗಳ ಅವಧಿಗೆ​ ಗಡಿಪಾರು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತೆ ರೇಣುಕಾ ಸುಕುಮಾರ್ ಆದೇಶಿಸಿದ್ದಾರೆ.

ಆರು ತಿಂಗಳ ಅವಧಿಗೆ ಬೀದರ್​ ಜಿಲ್ಲೆಗೆ ಗಡಿಪಾರು

ಎಲೆಕ್ಟ್ರೀಷಿಯನ್ ಉದ್ಯೋಗ ಮಾಡುತ್ತಿರುವ ಫಜಲ್, ಬಡಜನರ ಮೇಲೆ ಹಲ್ಲೆ, ಕೂಲಿ, ಹಮಾಲಿ, ಸಣ್ಣಪುಟ್ಟ ವ್ಯಾಪಾರ ಮಾಡುವವರ ಮೇಲೆ ದೌರ್ಜನ್ಯ ಜೊತೆಗೆ ತನ್ನ ವಿರುದ್ಧ ಸಾಕ್ಷಿ ಹೇಳದಂತೆ ಬೆದರಿಸುತ್ತಿದ್ದ ಆರೋಪ ಬಂದಿದೆ. ಅಷ್ಟೇ ಅಲ್ಲ, ಅಕ್ರಮ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡು ತಿರುಗಾಡುತ್ತಾ ರೌಡಿಸಂ ತೋರಿಸುತ್ತಿದ್ದ. ಕೆಲವರ ಕೊಲೆಗೂ ಪ್ರಯತ್ನಿಸುವ ಜೊತೆಗೆ ಸಾರ್ವಜನಿಕರಲ್ಲಿ ಭಯದ ವಾತಾವರಣ ಹುಟ್ಟಿಸಿದ್ದ. ಇತನ ಮೇಲೆ ಬೆಂಡಿಗೇರಿ, ವಿದ್ಯಾನಗರ, ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದ ಹಿನ್ನಲೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ತೆರೆಯಲಾಗಿತ್ತು. ಆದರೂ ತನ್ನ ವರ್ತನೆ ಸುಧಾರಿಸಿಕೊಳ್ಳದ ಫಜಲ್, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡ ಆರೋಪ ಕೇಳಿಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಆರು ತಿಂಗಳ ಕಾಲ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:ಜೈಲಿನಿಂದ ಯುವತಿ ನಗ್ನ ಫೋಟೋ ಕಳಿಸಿ ಹಣಕ್ಕೆ ಬೇಡಿಕೆ; ರೌಡಿಶೀಟರ್, ಸಹಚರರ ಬಂಧಿಸಿದ ಸಿಸಿಬಿ

ಅಪರಾಧ ಕೃತ್ಯದಲ್ಲಿ ಭಾಗಿಯಾಗುವವರ ವಿರುದ್ದ ಕ್ರಮ

ಹುಬ್ಬಳ್ಳಿ ನಗರ ವ್ಯಾಪ್ತಿಯ ರೌಡಿಶೀಟರ್​ಗಳ ವಿರುದ್ಧ ಕ್ರಮದ ಕುರಿತು ಮಾತನಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತೆ ರೇಣುಕಾ ಸುಕುಮಾರ್, ‘ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಕಳೆದ ಎರಡು ತಿಂಗಳಲ್ಲಿ ನಾಲ್ವರು ರೌಡಿಶೀಟರ್​ಗಳ ಗಡಿಪಾರು ಮಾಡಿದ್ದೇವೆ. ಕಳೆದ ವರ್ಷ 24 ರೌಡಿಶೀಟರ್​ಗಳನ್ನು ಗಡಿಪಾರು ಮಾಡಲಾಗಿತ್ತು. ಈ ವರ್ಷ 1,500 ರೌಡಿಶೀಟರ್​ಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ.ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ರೌಡಿಶೀಟರ್​ಗಳನ್ನು ಗಡಿಪಾರು ಮಾಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:24 pm, Fri, 23 February 24

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ