AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ಹುಬ್ಬಳ್ಳಿ ವಿಮಾನ ನಿಲ್ದಾಣ ಉನ್ನತೀಕರಣ ವಿಷಯವಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮಹತ್ವದ ಸಭೆ

Hubballi international airport: ಕೇಂದ್ರ ಸಚಿವ ಜೋಶಿಯವರೊಂದಿಗೆ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಕುಮಾರ್ ಠಾಕ್ರೆ ಮತ್ತು ಇತರ ಅಧಿಕಾರಿಗಳು, ವಿಮಾನ ನಿಲ್ದಾಣ ಸಲಹಾ ಸಮಿತಿ ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Pralhad Joshi: ಹುಬ್ಬಳ್ಳಿ ವಿಮಾನ ನಿಲ್ದಾಣ ಉನ್ನತೀಕರಣ ವಿಷಯವಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮಹತ್ವದ ಸಭೆ
ಹುಬ್ಬಳ್ಳಿ ವಿಮಾನ ನಿಲ್ದಾಣ ಉನ್ನತೀಕರಣ ವಿಷಯವಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮಹತ್ವದ ಸಭೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 03, 2023 | 9:32 PM

Share

ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸೌಲಭ್ಯಗಳ ಬೃಹತ್ ಸುಧಾರಣೆ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಪ್ರಸ್ತಾವನೆಗೆ ಕೇಂದ್ರ ಸರಕಾರ ಸ್ಪಂದಿಸಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಬೆನ್ನಲ್ಲೇ, ಹುಬ್ಬಳ್ಳಿಯ ವಿಮಾನ ನಿಲ್ದಾಣ ಮತ್ತಷ್ಟು ಮೇಲ್ದರ್ಜೆಗೆ ಏರಲಿದೆ (Hubballi international airport) ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ತಿಳಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ರಾಜ್ಯದ 2ನೇ ಅತೀ ದೊಡ್ಡ ನಗರವಾಗಿದ್ದು ಹಾಗೂ ಧಾರವಾಡದಲ್ಲಿ ಭಾರತೀಯ ತಾಂತ್ರಿಕ ಸಂಸ್ಥೆ (IIIT) ಹಾಗೂ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಂತಹ ಬೃಹತ್ ಸಂಸ್ಥೆಗಳ ಕಾರ್ಯಾರಂಭ ಹಾಗೂ ಹೆಚ್ಚುತ್ತಿರುವ ವಿಮಾನ ಪ್ರಯಾಣಿಕರ ಸಂಖ್ಯೆ ಹಿನ್ನೆಲೆಯಲ್ಲಿ ಸಚಿವರು ಈಗಿರುವ ಟರ್ಮಿನಲ್ ಕಟ್ಟಡದ ವಿಸ್ತೀರ್ಣ, ರನ್‌ವೇ ವಿಸ್ತೀರ್ಣ, ಆಪಾನ್ ವಿಸ್ತೀರ್ಣ ಹಾಗೂ ಕಾರ್ಗೋ ನಿರ್ವಹಣೆ ಸುಧಾರಣೆ ಮುಂತಾದ ಕಾರ್ಯ ಕೈಗೊಳ್ಳಲು ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಕಳೆದ ತಿಂಗಳಷ್ಟೇ ಬರೆದ ಪತ್ರಕ್ಕೆ ಉತ್ತರವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಎಲ್ಲಾ ಸುಧಾರಣಾ ಕಾರ್ಯದ ಪ್ರಸ್ತಾವನೆ ತೀವ್ರ ಪರಿಶೀಲನೆ ನಡೆಸಿ ಈ ಒಂದು ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ.

ನೂತನ ಯೋಜನೆಯಂತೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ 20,000 ಚ.ಮೀ. ವಿಸ್ತರಣೆಗೊಳ್ಳಲಿದ್ದು, ಏಕಕಾಲಕ್ಕೆ 1400ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ ಎಂದೂ ತಿಳಿಸಿದ್ದಾರೆ. ಕೇಂದ್ರ ಸಚಿವ ಜೋಶಿಯವರೊಂದಿಗೆ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಕುಮಾರ್ ಠಾಕ್ರೆ ಮತ್ತು ಇತರ ಅಧಿಕಾರಿಗಳು, ವಿಮಾನ ನಿಲ್ದಾಣ ಸಲಹಾ ಸಮಿತಿ ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ದಿನಗಳಲ್ಲಿ ಕೈಗೊಂಡ ಅಭಿವೃದ್ಧಿ ಚಟುವಟಿಕೆಗಳಿಂದಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣ ಅಗಾಧ ಬೆಳವಣಿಗೆ ಕಂಡಿದೆ. ಈ ಬಗ್ಗೆ ಹಲವಾರು ವಿಷಯಗಳನ್ನು ಚರ್ಚಿಸಲಾಯಿತು. ಒಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಿಮಾನ ನಿಲ್ದಾಣ ಸಾಕಷ್ಟು ನವೀಕರಣ ಕಾಣಲಿದ್ದು, ಇದು ಪ್ರಯಾಣಿಕರಿಗೆ ಅದ್ಭುತ ಅನುಭವವನ್ನು ನೀಡಲಿದೆ ಮತ್ತು ಕಾರ್ಗೋ ವಿಭಾಗದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಸಾಧನೆ ಮತ್ತಷ್ಟು ವಿಸ್ತರಿಸಲಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು