AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad News: ಕಳಪೆ ಬಿತ್ತನೆ ಬೀಜ ನೀಡಿ ರೈತರಿಗೆ ಮೋಸ; ಕೂಡಲೇ ಕಂಪನಿ ವಿರುದ್ದ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ

ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಸುರಿದ ಮಳೆಗೆ ರೈತರು ಹೈರಾಣಾಗಿದ್ದು, ಬರ ಮತ್ತು ಮಳೆಗೆ ರೈತ ಸಮೂಹ ಕಂಗಾಲಾಗಿದೆ. ಈ ಮದ್ಯೆ ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಮತ್ತೊಂದು ಸಮಸ್ಯೆ ತಲೆದೋರಿದೆ. ಹೌದು ಅಲ್ಪ ಸ್ವಲ್ಪ ಮಳೆಯಾದ ಕಾರಣ, ರೈತರು ಬಿತ್ತನೆ ಮಾಡಿದ್ದರು. ಆದ್ರೆ, ಬಿತ್ತನೆ ಮಾಡಿದ ಬೀಜ ಮೊಳಕೆ ಒಡೆದಿಲ್ಲ.

Dharwad News: ಕಳಪೆ ಬಿತ್ತನೆ ಬೀಜ ನೀಡಿ ರೈತರಿಗೆ ಮೋಸ; ಕೂಡಲೇ ಕಂಪನಿ ವಿರುದ್ದ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ
ಕಳಪೆ ಬಿತ್ತನೆ ಬೀಜ ಪಡೆದು ಮೋಸ ಹೋದ ರೈತರು
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 30, 2023 | 11:22 AM

Share

ಧಾರವಾಡ, ಜು.30: ಜಿಲ್ಲೆಯ ಕುಂದಗೋಳ(Kundgol) ತಾಲೂಕಿನಲ್ಲಿ ರೈತರು ಕಳಪೆ ಬೀಜದಿಂದ ಕಂಗಾಲಾಗಿದ್ದಾರೆ. ತಾಲೂಕಿನ ಚಾಕಲಬ್ಬಿ, ಸಂಶಿ, ಹೊಸಳ್ಳಿ ಭಾಗದಲ್ಲಿ ರೈತರು‌‌ ಮಳೆಯಾದ ಕಾರಣ ಹತ್ತಿ ಬಿತ್ತನೆ ಮಾಡಿದ್ದರು. ಹೌದು, ಮೂಲತಃ ಔರಂಗಾಬಾದ್​ನಲ್ಲಿರುವ ಆರ್​.ಜೆ ಬಯೋಟೆಕ್ ಲಿಮಿಟೆಡ್​ನ ಆರ್.​.ಜೆ.ಎಚ್.ಎಚ್.11 ಬಿಜಿ ತುಕಾರಂ ಎಂಬ ಹೆಸರಿನ ಹತ್ತಿ ಬಿತ್ತನೆ ಮಾಡಿದ್ದರು. ಆದ್ರೆ, ಹತ್ತಿ ಬೀಜ ಇನ್ನೂ ಮೊಳಕೆ‌ ಒಡೆದಿಲ್ಲ. ಭೂಮಿಯಲ್ಲಿಯೇ ಕಮರಿ ಹೋಗಿದೆ. ನೂರಾರು ಎಕರೆ ಜಮೀನಿನಲ್ಲಿ ಭಿತ್ತನೆ ಮಾಡಿದ ಬೀಜಗಳು‌‌ ಮೊಳಕೆ ಒಡೆಯದೆ ಜಮೀನು ಖಾಲಿ ಬಿದ್ದಿದೆ.

ಇನ್ನು ಕಳೆದ ತಿಂಗಳು ಅಲ್ಪ ಸ್ವಲ್ಪ ಮಳೆಯಾದ ಕಾರಣ ರೈತರು ಬಿತ್ತಿದ ಬಿತ್ತನೆ ಬೀಜ ಮೂಳಕೆ ಬರುತ್ತೆ ಎಂದು ರೈತರು ಕಾಯುತ್ತಿದ್ದರು. ಆದ್ರೆ, ಮಳೆಯಾದರೂ ಇನ್ನೂ ಬೀಜ ಮೊಳಕೆ ಒಡೆದಿಲ್ಲ. ಸುಮಾರು 400 ರಿಂದ 500 ಜನ ರೈತರು ಇದೇ ಕಂಪನಿಯ ಹತ್ತಿ ಬೀಜ ಖರೀದಿ ಮಾಡಿ ಬಿತ್ತನೆ ಮಾಡಿದ್ರು. ಇದೀಗ ಬೀಜ ಮೊಳಕೆ ಒಡೆಯದೇ ಇರುವುದರಿಂದ ಕಂಪನಿ ವಿರುದ್ದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಬೀಜ ನೀಡಿದ ಕಂಪನಿ ವಿರುದ್ಧ ಕ್ರಮ‌ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸೂಚನೆ

850 ರೂನಂತೆ ಬಿತ್ತನೆ ಬೀಜದ ಪಾಕೇಟ್​ ಖರೀದಿ

ಕುಂದಗೋಳ ಭಾಗದಲ್ಲಿ ಅನೇಕ ರೈತರು ತುಕಾರಂ‌ ಕಂಪನಿಯ ಬೀಜ ಬಿತ್ತನೆ ಮಾಡಿದ್ದಾರೆ. ನೂರಾರು ಎಕರೆಯಲ್ಲಿ ಶೇಕಡಾ 50 ರಷ್ಟು ಮೊಳಕೆ ಒಡೆದಿಲ್ಲ. ಸುಮಾರು 850 ರೂ ನಂತೆ ಒಂದು ಪಾಕೇಟ್ ಖರೀದಿ ಮಾಡಿದ್ದರು. ಚಾಕಲಬ್ಬಿ ಗ್ರಾಮದಲ್ಲಿಯೇ ಸುಮಾರು 60 ಎಕರೆ ಭಿತ್ತನೆ ಮಾಡಿದ್ದಾರೆ. ಇನ್ನು ಹೊಸ ಬೀಜದ ಕಂಪನಿ ಎಂದು ರೈತರಿಗೆ ನಂಬಿಸಿದ್ದರಂತೆ. ಹೀಗಾಗಿ ರೈತರು ತುಕಾರಂ ಕಂಪನಿಯ ಬೀಜ ಖರೀದಿ ಮಾಡಿ ಬಿತ್ತನೆ ಮಾಡಿದ್ದರು. ಇದೀಗ ಅನ್ನದಾತ ಇತ್ತ ಬೆಳೆಯೂ ಇಲ್ಲ, ಹಣವೂ ಹೋಯಿತು. ನಮಗೆ ಹಣ ಕೊಡಿಸಿ ಎಂದು ಕಂಪನಿಯವರ ಬಳಿ ಅಲೆದಾಡುತ್ತಿದ್ದಾರೆ. ಕಂಪನಿಯವರು ನಿಮಗೆ ವಾಪಸ್ ಬೀಜ ಕೊಡ್ತೀನಿ ಎಂದು ಹಾರಿಕೆಯ ಉತ್ತರ ಕೊಟ್ಟಿದ್ದಾರೆ.

ಆದರೆ, ಇದುವರೆಗೂ ವಾಪಸ್ ಕಂಪನಿಯವರು ರೈತರ ಬಳಿ ಬಂದಿಲ್ಲ. ನಮಗೆ ಬೀಜ ಬೇಡ ನಮ್ಮ ಹಣ ನಮಗೆ ಕೊಡಿಸಿ ಎಂದು ರೈತರು ಕೃಷಿ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್​ಗೆ ಮನವಿ ಕೊಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ರೈತರಿಗೆ ಮೋಸ ಮಾಡಿದ್ರೆ, ಅವರ ಮೇಲೆ ಕ್ರಿಮಿನಲ್ ಕೇಸ್ ಹಾಕ್ತೀವಿ ಎಂದಿದ್ದಾರೆ. ಒಟ್ಟಾರೆ ಬರ ಮತ್ತು‌ ಮಳೆಯಿಂದ ಕಂಗಾಲಾದ ರೈತ ಇದೀಗ ಮತ್ತೊಂದು ಸಮಸ್ಯೆ ಎದುರಿಸುತ್ತಿದ್ದಾನೆ. ಸಾಲ ಸೋಲ ಮಾಡಿ ಬಿತ್ತನೆ ಮಾಡಿದ ಬೀಜ, ಮಣ್ಣಲ್ಲಿ ಕಮರಿ ಹೋಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!