AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಐವರ ಬಂಧನ; ಮೂರು ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

ಇತ್ತೀಚೆಗೆ ಅವಳಿನಗರದಲ್ಲಿ ಗಾಂಜಾ ವಾಸನೆ ಜೋರಾಗಿದ್ದು, ನಶೆಯಲ್ಲಿ ಅಪರಾಧ ಕೃತ್ಯ ಎಸಗಲಾಗುತ್ತಿರುವ ಕುರಿತು ಸಾರ್ವಜನಿಕರು ಕಿಡಿಕಾರಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು(Bendigeri Police) ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಹೆಡೆಮುರಿ ಕಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಐವರ ಬಂಧನ; ಮೂರು ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ
ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಐವರ ಬಂಧನ
ಶಿವಕುಮಾರ್ ಪತ್ತಾರ್
| Edited By: |

Updated on: Jun 28, 2024 | 8:30 PM

Share

ಹುಬ್ಬಳ್ಳಿ, ಜೂ.28:  ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು(Bendigeri Police) ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಹೆಡೆಮುರಿ ಕಟ್ಟಿದ್ದಾರೆ. ಹುಬ್ಬಳ್ಳಿ(Hubli)ಯ ವೀರಾಪುರ ಓಣಿಯ ಮುಬಾರಕ್, ಕೇಶ್ವಾಪುರದ ಚಂದ್ರಶೇಖರ್​, ರಾಮಲಿಂಗೇಶ್ವರ ನಗರದ ತೌಶಿಪ್ ಸೇರಿದಂತೆ ಇನ್ನಿಬ್ಬರು ಆರೋಪಿಗಳು ಅರೆಸ್ಟ್ ಆಗಿದ್ದು, ಬಂಧಿತರಿಂದ ಮೂರು ಲಕ್ಷ ಮೌಲ್ಯದ ಮೂರು ಕೆಜಿ ಗಾಂಜಾ ಹಾಗೂ ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು

ಅಂತರಾಜ್ಯದಿಂದ ಗಾಂಜಾ ತಂದು ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಇನ್ಸೆಕ್ಟರ್ ಅಲಿಶೇಕ್, ಪಿಎಸ್‌ಐ ಶರಣ ದೇಸಾಯಿ ಹಾಗೂ ತಂಡದವರು, ದಕ್ಷಿಣ ವಿಭಾಗದ ಎಸಿಪಿ ಚಿಕ್ಕಮಠ ಮಾರ್ಗದರ್ಶನದಲ್ಲಿ ದಾಳಿ ನಡೆಸಿ, ನಗರದ ಮಂಟೂರ ರಸ್ತೆಯ ಬಳಿಯ ರೈಲ್ವೆ ಗೇಟ್ ಬಳಿ ಬಂಧಿಸಿದ್ದಾರೆ. ಐದು ಜನ ಆರೋಪಿಗಳ ಮೇಲೆ NDPS ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ರಿಮ್ಯಾಂಡ್ ಹೋಮ್ ಹಾಗೂ ಇನ್ನುಳಿದ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ:ರಾಡ್​ನಿಂದ ಹೊಡೆದು 17 ವರ್ಷದ ಯುವಕನ ಹತ್ಯೆ; ಕೊಲೆ ಹಿಂದೆ ಪ್ರೀತಿ, ಗಾಂಜಾ ಕರಿನೆರಳು

ಇತ್ತೀಚೆಗೆ ಅವಳಿನಗರದಲ್ಲಿ ನಡೆದ ಕೊಲೆ ಪ್ರಕರಣಗಳಲ್ಲಿ ಗಾಂಜಾ ಸೇವನೆ ಮಾಡಿ ಹತ್ಯೆ ಮಾಡಲಾಗಿದೆ ಎಂಬ ವಿಷಯ ತಿಳಿದು ಬಂದಿತ್ತು. ಅದರಂತೆ ಹುಬ್ಬಳ್ಳಿಯಲ್ಲಿ ಗಾಂಜಾ ವಾಸನೆ ಜೋರಾಗಿದ್ದು, ನಶೆಯಲ್ಲಿ ಅಪರಾಧ ಕೃತ್ಯ ಎಸಗಲಾಗುತ್ತಿರುವ ಕುರಿತು ಸಾರ್ವಜನಿಕರು ಕಿಡಿಕಾರಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಹುಬ್ಬಳ್ಳಿ ಪೊಲೀಸರು, ಇದೀಗ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್