AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರ್​ರಾಜ್ಯ ಡ್ರಗ್ ಪೆಡ್ಲರ್​ಗಳೊಂದಿಗೆ ನಂಟು; ಹುಬ್ಬಳ್ಳಿ ಮೂಲದ ಯುವಕನ ಬಂಧನ

ಅಂತರ್​ರಾಜ್ಯ ಡ್ರಗ್ ಪೆಡ್ಲರ್​ಗಳೊಂದಿಗೆ ನಂಟು ಹೊಂದಿದ್ದ ಹುಬ್ಬಳ್ಳಿ ಮೂಲದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೂರಜಗೌಡ ಕಾನಗೌಡರ ಬಂಧಿತ ಆರೋಪಿ. ಇತ ಕೆಲ ತಿಂಗಳಿನಿಂದ ಅಂತಾರಾಜ್ಯ ಡ್ರಗ್ ಪೆಡ್ಲರ್​​ಗಳೊಂದಿಗೆ ಸಂಬಂಧ ಇಟ್ಟುಕೊಂಡಿದ್ದನಂತೆ. ಈ ಹಿನ್ನಲೆ ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಅಂತರ್​ರಾಜ್ಯ ಡ್ರಗ್ ಪೆಡ್ಲರ್​ಗಳೊಂದಿಗೆ ನಂಟು; ಹುಬ್ಬಳ್ಳಿ ಮೂಲದ ಯುವಕನ ಬಂಧನ
ಆರೋಪಿ
ಶಿವಕುಮಾರ್ ಪತ್ತಾರ್
| Edited By: |

Updated on: Aug 08, 2023 | 12:39 PM

Share

ಹುಬ್ಬಳ್ಳಿ, ಆ.8: ಅಂತರ್​ರಾಜ್ಯ ಡ್ರಗ್ ಪೆಡ್ಲರ್(Drug Peddler)​ಗಳೊಂದಿಗೆ ನಂಟು ಹೊಂದಿದ್ದ ಹುಬ್ಬಳ್ಳಿ(Hubballi) ಮೂಲದ ಯುವಕನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೂರಜಗೌಡ ಕಾನಗೌಡರ ಬಂಧಿತ ಆರೋಪಿ. ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದವನಾದ ಇತ, ನಗರದ ಜನತಾ ಬಜಾರ್‌ನಲ್ಲಿ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಇನ್ನು ಆರೋಪಿ ಕಳೆದ ಹಲವು ತಿಂಗಳಿಂದ ಅಂತಾರಾಜ್ಯ ಡ್ರಗ್ ಪೆಡ್ಲರ್​​ಗಳೊಂದಿಗೆ ನಂಟು ಹೊಂದಿದ್ದ ಎಂಬುದು ತಮಿಳನಾಡಿನ ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ.

ಡ್ರಗ್​ ಜಾಲವನ್ನು NDPS ಆ್ಯಕ್ಟ್ ಅಡಿ ಭೇದಿಸಿದ್ದ ಪೀಲಮೆಡು ಪೊಲೀಸರು

ಆರೋಪಿ ಸೂರಜಗೌಡ ನಿರ್ಬಂಧಿತ ಮೆಡಿಷನ್ ಸಹ ಮಾರಾಟ ಮಾಡುತ್ತಿದ್ದ. ಇನ್ನು ಈ ಜಾಲವನ್ನು NDPS ಆ್ಯಕ್ಟ್ ಅಡಿ ತಮಿಳುನಾಡಿನ ಕೊಯಮತ್ತೂರಿನ ಪೀಲಮೆಡು ಠಾಣೆಯ ಪೊಲೀಸರು ಭೇದಿಸಿದ್ದರು. ಈ ವೇಳೆ ಅಲ್ಲಿನ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದ ಪೊಲೀಸರಿಗೆ ಹುಬ್ಬಳ್ಳಿ ಮೂಲದ ಸೂರಜ್‌ಗೌಡನ ಹೆಸರು ಹೊರಬಂದಿತ್ತು. ಈ ಪ್ರಕರಣ ಗಂಭೀರವಾಗಿ ಪರಿಗಣಿಸಿ, ತಮಿಳುನಾಡಿನ ಕೊಯಮತ್ತೂರು ಪೊಲೀಸರು ಜಾಲದ ಪತ್ತೆಗೆ ಹುಬ್ಬಳ್ಳಿಗೆ ಆಗಮಿಸಿದ್ದರು.

ಇದನ್ನೂ ಓದಿ:ಆಪರೇಶನ್​ಗೆ ಬಂದಿದ್ದ ನೈಜೀರಿಯಾದವ ಸೈಲೆಂಟ್​ ಆಗಿ ಡ್ರಗ್ ಪೆಡ್ಲರ್ ಆಗಿಬಿಟ್ಟಿದ್ದ, ಆದ್ರೆ ಆಪರೇಶನ್ ಮಾಡಿದ್ದು ಬೆಂಗಳೂರು ಪೊಲೀಸರು!

ನಿರ್ಬಂಧಿತ ಮೆಡಿಷನ್ ಖರೀದಿಸುವ ನೆಪದಲ್ಲಿ ಆಗಮಿಸಿ ವಿಚಾರಣೆ

ಇನ್ನು ಸೂರಜ್‌ಗೌಡನನ್ನು ಜನತಾ ಬಜಾರ್‌ಗೆ ಕರೆಯಿಸಿಕೊಂಡು ನಿರ್ಬಂಧಿತ ಮೆಡಿಷನ್ ಖರೀದಿಸುವ ನೆಪದಲ್ಲಿ ಆಗಮಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇನ್ನು ಸೂರಜಗೌಡ ಬಂಧನಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಹಾಗೂ ಉಪನಗರ ಪೊಲೀಸರಿಗೆ ಪೀಲಮೆಡು ಪೊಲೀಸರು ಮಾಹಿತಿ ನೀಡಿದ್ದರು. ಇದೀಗ ಆತನನ್ನು ಬಂಧಿಸಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ