AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರ್​ರಾಜ್ಯ ಡ್ರಗ್ ಪೆಡ್ಲರ್​ಗಳೊಂದಿಗೆ ನಂಟು; ಹುಬ್ಬಳ್ಳಿ ಮೂಲದ ಯುವಕನ ಬಂಧನ

ಅಂತರ್​ರಾಜ್ಯ ಡ್ರಗ್ ಪೆಡ್ಲರ್​ಗಳೊಂದಿಗೆ ನಂಟು ಹೊಂದಿದ್ದ ಹುಬ್ಬಳ್ಳಿ ಮೂಲದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೂರಜಗೌಡ ಕಾನಗೌಡರ ಬಂಧಿತ ಆರೋಪಿ. ಇತ ಕೆಲ ತಿಂಗಳಿನಿಂದ ಅಂತಾರಾಜ್ಯ ಡ್ರಗ್ ಪೆಡ್ಲರ್​​ಗಳೊಂದಿಗೆ ಸಂಬಂಧ ಇಟ್ಟುಕೊಂಡಿದ್ದನಂತೆ. ಈ ಹಿನ್ನಲೆ ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಅಂತರ್​ರಾಜ್ಯ ಡ್ರಗ್ ಪೆಡ್ಲರ್​ಗಳೊಂದಿಗೆ ನಂಟು; ಹುಬ್ಬಳ್ಳಿ ಮೂಲದ ಯುವಕನ ಬಂಧನ
ಆರೋಪಿ
ಶಿವಕುಮಾರ್ ಪತ್ತಾರ್
| Edited By: |

Updated on: Aug 08, 2023 | 12:39 PM

Share

ಹುಬ್ಬಳ್ಳಿ, ಆ.8: ಅಂತರ್​ರಾಜ್ಯ ಡ್ರಗ್ ಪೆಡ್ಲರ್(Drug Peddler)​ಗಳೊಂದಿಗೆ ನಂಟು ಹೊಂದಿದ್ದ ಹುಬ್ಬಳ್ಳಿ(Hubballi) ಮೂಲದ ಯುವಕನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೂರಜಗೌಡ ಕಾನಗೌಡರ ಬಂಧಿತ ಆರೋಪಿ. ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದವನಾದ ಇತ, ನಗರದ ಜನತಾ ಬಜಾರ್‌ನಲ್ಲಿ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಇನ್ನು ಆರೋಪಿ ಕಳೆದ ಹಲವು ತಿಂಗಳಿಂದ ಅಂತಾರಾಜ್ಯ ಡ್ರಗ್ ಪೆಡ್ಲರ್​​ಗಳೊಂದಿಗೆ ನಂಟು ಹೊಂದಿದ್ದ ಎಂಬುದು ತಮಿಳನಾಡಿನ ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ.

ಡ್ರಗ್​ ಜಾಲವನ್ನು NDPS ಆ್ಯಕ್ಟ್ ಅಡಿ ಭೇದಿಸಿದ್ದ ಪೀಲಮೆಡು ಪೊಲೀಸರು

ಆರೋಪಿ ಸೂರಜಗೌಡ ನಿರ್ಬಂಧಿತ ಮೆಡಿಷನ್ ಸಹ ಮಾರಾಟ ಮಾಡುತ್ತಿದ್ದ. ಇನ್ನು ಈ ಜಾಲವನ್ನು NDPS ಆ್ಯಕ್ಟ್ ಅಡಿ ತಮಿಳುನಾಡಿನ ಕೊಯಮತ್ತೂರಿನ ಪೀಲಮೆಡು ಠಾಣೆಯ ಪೊಲೀಸರು ಭೇದಿಸಿದ್ದರು. ಈ ವೇಳೆ ಅಲ್ಲಿನ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದ ಪೊಲೀಸರಿಗೆ ಹುಬ್ಬಳ್ಳಿ ಮೂಲದ ಸೂರಜ್‌ಗೌಡನ ಹೆಸರು ಹೊರಬಂದಿತ್ತು. ಈ ಪ್ರಕರಣ ಗಂಭೀರವಾಗಿ ಪರಿಗಣಿಸಿ, ತಮಿಳುನಾಡಿನ ಕೊಯಮತ್ತೂರು ಪೊಲೀಸರು ಜಾಲದ ಪತ್ತೆಗೆ ಹುಬ್ಬಳ್ಳಿಗೆ ಆಗಮಿಸಿದ್ದರು.

ಇದನ್ನೂ ಓದಿ:ಆಪರೇಶನ್​ಗೆ ಬಂದಿದ್ದ ನೈಜೀರಿಯಾದವ ಸೈಲೆಂಟ್​ ಆಗಿ ಡ್ರಗ್ ಪೆಡ್ಲರ್ ಆಗಿಬಿಟ್ಟಿದ್ದ, ಆದ್ರೆ ಆಪರೇಶನ್ ಮಾಡಿದ್ದು ಬೆಂಗಳೂರು ಪೊಲೀಸರು!

ನಿರ್ಬಂಧಿತ ಮೆಡಿಷನ್ ಖರೀದಿಸುವ ನೆಪದಲ್ಲಿ ಆಗಮಿಸಿ ವಿಚಾರಣೆ

ಇನ್ನು ಸೂರಜ್‌ಗೌಡನನ್ನು ಜನತಾ ಬಜಾರ್‌ಗೆ ಕರೆಯಿಸಿಕೊಂಡು ನಿರ್ಬಂಧಿತ ಮೆಡಿಷನ್ ಖರೀದಿಸುವ ನೆಪದಲ್ಲಿ ಆಗಮಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇನ್ನು ಸೂರಜಗೌಡ ಬಂಧನಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಹಾಗೂ ಉಪನಗರ ಪೊಲೀಸರಿಗೆ ಪೀಲಮೆಡು ಪೊಲೀಸರು ಮಾಹಿತಿ ನೀಡಿದ್ದರು. ಇದೀಗ ಆತನನ್ನು ಬಂಧಿಸಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ