AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಫೋಟಕ ಅಂಶ ಬಾಯ್ಬಿಟ್ಟ ಬಂಧಿತ ಆರೋಪಿ: ಉಗ್ರರ ಚಟುವಟಿಕೆಗಳಿಗೆ ಪ್ರಶಸ್ತ ತಾಣವಾಯಿತೇ ಹುಬ್ಬಳ್ಳಿ-ಧಾರವಾಡ?

ದೆಹಲಿಯಲ್ಲಿ ನಿನ್ನೆ ಬಂಧಿತರಾಗಿರುವ ಮೂವರು ಉಗ್ರರ ಪೈಕಿ ಓರ್ವ ಹುಬ್ಬಳ್ಳಿ-ಧಾರವಾಡದಲ್ಲಿ ಓಡಾಡಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಜೊತೆಗೆ ಬಂದೂಕು ಬಳಕೆ, ಬಾಂಬ್ ಸ್ಫೋಟದ ತರಬೇತಿಗೆ ಪ್ರಶಸ್ತ ತಾಣ ಎಂಬುವುದು ಬಂಧಿತ ಶಹನವಾಜ್‌ನಿಂದ ಸದ್ಯ ವಿಷಯ ಬಯಲಾಗಿದೆ. ಆ ಮೂಲಕ ಹುಬ್ಬಳ್ಳಿ-ಧಾರವಾಡ, ಪಶ್ಚಿಮಘಟ್ಟ ಪ್ರದೇಶ ಉಗ್ರರ ತಾಣವಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ಸ್ಫೋಟಕ ಅಂಶ ಬಾಯ್ಬಿಟ್ಟ ಬಂಧಿತ ಆರೋಪಿ: ಉಗ್ರರ ಚಟುವಟಿಕೆಗಳಿಗೆ ಪ್ರಶಸ್ತ ತಾಣವಾಯಿತೇ ಹುಬ್ಬಳ್ಳಿ-ಧಾರವಾಡ?
ಬಂಧಿತ ಉಗ್ರರು
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Oct 04, 2023 | 9:12 AM

Share

ಧಾರವಾಡ, ಅಕ್ಟೋಬರ್​ 04: ಶಾಂತಿಯ ತೋಟ ಎನ್ನುವ ಹೆಸರು ಹೊಂದಿರುವ ಜಿಲ್ಲೆಯಲ್ಲಿ ಕೆಲ ವರ್ಷಗಳ ಹಿಂದೆ ಸಿಮಿ ಉಗ್ರ ಸಂಘಟನೆ ಕಾರ್ಯಕರ್ತರು ಬಂಧಿತರಾಗಿದ್ದರು. ಅದಾದ ಬಳಿಕ ಐಸಿಸ್ ಉಗ್ರನೊಬ್ಬ ಧಾರವಾಡ (Dharwad) ದಲ್ಲಿ ಆರು ತಿಂಗಳ ಕಾಲ ನೆಲಸಿದ್ದ ಎನ್ನುವುದು ಕೂಡ ಬಹಿರಂಗವಾಗಿತ್ತು. ಇದೀಗ ಅಂಥದ್ದೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ದೆಹಲಿಯಲ್ಲಿ ನಿನ್ನೆ ಬಂಧಿತರಾಗಿರುವ ಮೂವರು ಉಗ್ರರ ಪೈಕಿ ಓರ್ವ ಹುಬ್ಬಳ್ಳಿ-ಧಾರವಾಡದಲ್ಲಿ ಓಡಾಡಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಜೊತೆಗೆ ಬಂದೂಕು ಬಳಕೆ, ಬಾಂಬ್ ಸ್ಫೋಟದ ತರಬೇತಿಗೆ ಪ್ರಶಸ್ತ ತಾಣ ಎಂಬುವುದು ಬಂಧಿತ ಶಹನವಾಜ್‌ನಿಂದ ಸದ್ಯ ವಿಷಯ ಬಯಲಾಗಿದೆ.

ಈ ಮುಂಚೆಯೂ ನಡೆದಿವೆ ಹಲವು ಉಗ್ರರ ಪ್ರಕರಣಗಳು

ಈ ಮುಂಚೆಯೂ ಹಲವು ಉಗ್ರರ ಪ್ರಕರಣಗಳು ಜಿಲ್ಲೆಯಲ್ಲಿ ನಡೆದಿವೆ. 2008ರಲ್ಲಿ ಸಿಮಿ ಸಂಘಟನೆ ಶಂಕಿತರು ಬಂಧಿತರಾಗಿದ್ದರು. ಸಿಮಿ ಉಗ್ರರೊಂದಿಗೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿತ್ತು. ಜೊತೆಗೆ ಜಿಲ್ಲೆಯ ಕಲಘಟಗಿಯಲ್ಲಿ ಉಗ್ರರು ತರಬೇತಿ ಪಡೆಯುತ್ತಿದ್ದರು. ಆ ಮೂಲಕ ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿ ಭಯೋತ್ಪಾದನಾ ನಿಗ್ರಹ ಪೊಲೀಸರಿಂದ 17 ಜನರ ಬಂಧನ ಮಾಡಲಾಗಿತ್ತು. ಈ ವೇಳೆ ಸ್ಫೋಟಕ ವಸ್ತುಗಳು ಮತ್ತು ಜಿಹಾದಿ ಸಾಹಿತ್ಯ ವಶಕ್ಕೆ ಪಡೆಯಲಾಗಿತ್ತು. ಸೂಕ್ತ ಸಾಕ್ಷಾಧಾರ ಇಲ್ಲದ ಹಿನ್ನೆಲೆ 2015ರಲ್ಲಿ ಆರೋಪ‌ಮುಕ್ತರಾಗಿದ್ದರು.

ಇದನ್ನೂ ಓದಿ: ಬಂಧಿತ ಉಗ್ರನಿಗಿದೆ ಧಾರವಾಡದ ನಂಟು, ದೆಹಲಿ ಪೊಲೀಸರ ಮಾಹಿತಿಯಿಂದ ಜನರಲ್ಲಿ ಆತಂಕ

ಇದೀಗ ದೆಹಲಿ ಪೊಲೀಸರಿಗೆ ಮೂವರು ಶಂಕಿತ ಉಗ್ರರು ಸೆರೆ ಸಿಕ್ಕಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೇರಿ ಪಶ್ಚಿಮಘಟ್ಟದ ಕಾಡನ್ನು ಉಗ್ರರು ತರಬೇತಿಗೆ ಬಳಸಿಕೊಳ್ಳುವ ಉದ್ದೇಶ ಹೊಂದಿದ್ದರು ಎನ್ನಲಾಗಿದೆ. ಎನ್ಐಎ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಶಂಕಿತ ಐಸಿಸ್‌ ಉಗ್ರ ಮೊಹಮ್ಮದ್ ಶಹನವಾಜ್​ ಈ ಭಾಗದಲ್ಲಿ ತರಬೇತಿ ಕ್ಯಾಂಪ್ ಮಾಡಲು ಓಡಾಡಿರುವ ಮಾಹಿತಿ ನೀಡಲಾಗಿದೆ. ಆ ಮೂಲಕ ಇದೀಗ ಮತ್ತೆ ಬಂಧಿತ ಉಗ್ರರಿಂದ ಅವಳಿ ನಗರದ ಬಗ್ಗೆ ಪ್ರಸ್ತಾಪ ಮಾಡಲಾಗಿದೆ.

ಇದನ್ನೂ ಓದಿ: ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಕಾಂಗ್ರೆಸ್ ಪಣ -ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಸಮಾಧಾನ

ಈ ಘಟನೆಯ ಬಳಿಕ ಜಿಲ್ಲೆಯಲ್ಲಿ ಸಾಕಷ್ಟು ಆತಂಕ ಸೃಷ್ಟಿಯಾಗಿದೆ. ಏಕೆಂದರೆ ಮೊದಲಿನಿಂದಲೂ ಧಾರವಾಡ ಶಾಂತಿಯ ಜಿಲ್ಲೆ. ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಉಗ್ರರು ಇಲ್ಲಿಯೇ ನೆಲೆಸಿ, ಉಗ್ರ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ. ಈ ಪ್ರಕರಣದ ಬಳಿಕ ಧಾರವಾಡದಲ್ಲಿರುವ ಸ್ಲೀಪಿಂಗ್ ಸೆಲ್​ಗಳ ಬಗ್ಗೆಯೂ ಅನುಮಾನ ಶುರುವಾಗಿದೆ. ಅಂಥ ಸ್ಲೀಪಿಂಗ್ ಸೆಲ್​ಗಳನ್ನು ಪತ್ತೆ ಹಚ್ಚಿ, ಬಯಲಿಗೆ ತರಬೇಕಾದ ಜವಾಬ್ದಾರಿ ಇದೀಗ ಪೊಲೀಸರ ಮೇಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ