AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಇಲ್ಲ: ಹವಾಮಾನ ತಜ್ಞ ಡಾ.ಆರ್.ಎಚ್.ಪಾಟೀಲ

ಉತ್ತರ ಕರ್ನಾಟಕದಲ್ಲಿ ನವೆಂಬರ್ 5, 6, 7ಕ್ಕೆ ಮಳೆಯಾಗುವ ಮುನ್ಸೂಚನೆ ಇತ್ತು. ಆದರೆ ಆ ಮಳೆ ರಾಜ್ಯದ ದಕ್ಷಿಣ ಭಾಗಕ್ಕೆ ಮಾತ್ರ ಸೀಮಿತ. ಉತ್ತರ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಅಷ್ಟೇ ಎಂದು ಧಾರವಾಡ ಕೃಷಿ ವಿವಿ ಹವಾಮಾನ ವಿಭಾಗದ ಮುಖ್ಯಸ್ಥ ಡಾ.ಆರ್.ಹೆಚ್.ಪಾಟೀಲ ಹೇಳಿದ್ದಾರೆ.

ಸದ್ಯ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಇಲ್ಲ: ಹವಾಮಾನ ತಜ್ಞ ಡಾ.ಆರ್.ಎಚ್.ಪಾಟೀಲ
ಹವಾಮಾನ ವಿಭಾಗದ ಮುಖ್ಯಸ್ಥ ಡಾ.ಆರ್.ಹೆಚ್.ಪಾಟೀಲ
TV9 Web
| Edited By: |

Updated on: Nov 05, 2021 | 12:05 PM

Share

ಧಾರವಾಡ: ಮತ್ತೆ ಮಳೆ ರಾಜ್ಯಾದ್ಯಂತ ಆವರಿಸಿಕೊಂಡಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಆದರೆ ಉತ್ತರ ಕರ್ನಾಟಕದಲ್ಲಿ ಮಾತ್ರ ಮಳೆ ಕಡಿಮೆ ಎಂದು ಹೇಳಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ನವೆಂಬರ್ 5, 6, 7ಕ್ಕೆ ಮಳೆಯಾಗುವ ಮುನ್ಸೂಚನೆ ಇತ್ತು. ಆದರೆ ಆ ಮಳೆ ರಾಜ್ಯದ ದಕ್ಷಿಣ ಭಾಗಕ್ಕೆ ಮಾತ್ರ ಸೀಮಿತ. ಉತ್ತರ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಅಷ್ಟೇ ಎಂದು ಧಾರವಾಡ ಕೃಷಿ ವಿವಿ ಹವಾಮಾನ ವಿಭಾಗದ ಮುಖ್ಯಸ್ಥ ಡಾ.ಆರ್.ಹೆಚ್.ಪಾಟೀಲ ಹೇಳಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಸಾಧ್ಯತೆ ಕಡಿಮೆ. ಆದರೆ ಅರಬ್ಬಿ ಸಮುದ್ರದಲ್ಲಿ ಮತ್ತೊಂದು ವಾಯುಭಾರ ಕುಸಿತ ಆಗುತ್ತಿದೆ. ಹೀಗಾಗಿ ನವೆಂಬರ್ 11ರ ಬಳಿಕ ಉತ್ತರ ಭಾಗದಲ್ಲಿ ಕೂಡ ಮಳೆಯಾಗಲಿದೆ ಎಂದು ಧಾರವಾಡ ಕೃಷಿ ವಿವಿ ಹವಾಮಾನ ವಿಭಾಗದ ಮುಖ್ಯಸ್ಥ ಡಾ.ಆರ್.ಹೆಚ್.ಪಾಟೀಲ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ ರಾಜ್ಯ ರಾಜಧಾನಿಯಲ್ಲಿ ಜನರಿಗೆ ಹಬ್ಬದ ಸಂಭ್ರಮಕ್ಕೆ ವರುಣ ತಣ್ಣೀರೆರಚಿದ್ದಾನೆ. ನಿನ್ನೆ (ಅಕ್ಟೋಬರ್ 04) ರಾತ್ರಿ ಸುರಿದ ಭಾರಿ ಮಳೆಗೆ, ರಸ್ತೆಗಳಲ್ಲಿ ನೀರು ಉಕ್ಕಿ ಹರಿದು, ವಾಹನಗಳೆಲ್ಲಾ ಜಲಾವೃತವಾಗಿ, ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಚಿಕ್ಕಪೇಟೆಯಲ್ಲಿ ಕಾರು, ಬೈಕ್‌ಗಳು ಮುಳುಗಡೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಸ್ಥಳೀಯರು ಪರದಾಟ ನಡೆಸಿದ್ದಾರೆ. ಕೆಂಗೇರಿ ಉಪನಗರದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು, ಚೈತನ್ಯ ಕಾಲೇಜು ಬಳಿಯ ಏರಿಯಾದಲ್ಲಿ ನೀರು ನಿಂತಿತ್ತು. ಬಳಿಕ ಸ್ಥಳೀಯರಿಂದ ನೀರಿನ ತೆರವು ಕಾರ್ಯ ನಡೆದಿದೆ. ಬೆಂಗಳೂರಿನ ಲಾಲ್‌ಬಾಗ್ ರೋಡ್ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಟ ನಡೆಸುವಂತಾಗಿದೆ.

ಕಸ್ತೂರಬಾನಗರದ 2ನೇ ಕ್ರಾಸ್‌ನಲ್ಲಿ ಒಳಚರಂಡಿಗಳು ಬ್ಲ್ಯಾಕ್ ಆಗಿರುವ ಕಾರಣ, ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯಲು ಆಗದೆ ಸಮಸ್ಯೆಯಾಗಿದೆ. ಇದರಿಂದ  ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಆಹಾರ ಪದಾರ್ಥಗಳು ನೀರುಪಾಲಾಗಿವೆ. ಮನೆಗಳಲ್ಲಿ ಮಂಡಿಯುದ್ದ ನೀರು ಸಂಗ್ರಹವಾಗಿತ್ತು. ಅದನ್ನು ಸ್ಥಳೀಯರು ರಾತ್ರಿಯಿಡೀ ನಿದ್ದೆ ಬಿಟ್ಟು ಪಂಪ್ ಮೂಲಕ ಹೊರಹಾಕಿದ್ದಾರೆ.

ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ವಾರ್ಡ್​​ ವಾರು ಇಲ್ಲಿದೆ ವಿ.ವಿ.ಪುರಂ ವ್ಯಾಪ್ತಿಯಲ್ಲಿ 137 ಮಿಲಿ ಮೀಟರ್ ಮಳೆ, ದೊಡ್ಡ ನೆಕ್ಕುಂದಿಯಲ್ಲಿ 127.5 ಮಿಲಿ ಮೀಟರ್, ಹಂಪಿನಗರ ವ್ಯಾಪ್ತಿಯಲ್ಲಿ 120.2 ಮಿಲಿ ಮೀಟರ್ , ನಾಗರಬಾವಿ ಸುತ್ತಮುತ್ತ 103.5 ಮಿಲಿ ಮೀಟರ್, ನಾಯಂಡಹಳ್ಳಿ ಭಾಗದಲ್ಲಿ 87.5 ಮಿಲಿ ಮೀಟರ್, ಸಂಪಗಿರಾಮನಗರ 63 ಮಿಲಿ ಮೀಟರ್, ಅಗ್ರಹಾರ ದಾಸರಹಳ್ಳಿ 40 ಮಿಲಿ ಮೀಟರ್ ಮಳೆಯಾಗಿದೆ.

ಒಟ್ಟಾರೆ ಬೆಂಗಳೂರು ನಗರದ ಎರಡು ವಲಯಗಳಲ್ಲಿ ಅತ್ಯಧಿಕ ಮಳೆಯಾಗಿದ್ದು, ಬೆಂಗಳೂರು ದಕ್ಷಿಣ ವಲಯದಲ್ಲಿ 126 ಮಿ.ಮೀ. ಹಾಗೂ ಮಹದೇವಪುರ ವಲಯದಲ್ಲಿ 125 ಮಿಲಿ ಮೀಟರ್ ಮಳೆಯಾಗಿದೆ.

ಇದನ್ನೂ ಓದಿ: Karnataka Weather Today: ಬೆಂಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆ

Bengaluru Rain: ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ