AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: 10 ಕೋಟಿ ಜನರಿಗೆ ಆಹ್ವಾನ, ಸಚಿವ ಜೋಶಿ ಸಾರಥ್ಯದಲ್ಲಿ ಧಾರವಾಡದಿಂದ ವಿಶೇಷ ರೈಲು

ಅಯೋಧ್ಯೆಗೆ ಧಾರವಾಡದಿಂದ ವಿಶೇಷ ರೈಲು ಬಿಡಲು ಈಗಾಗಲೇ ಜೋಶಿ ಆಪ್ತರು ರೈಲ್ವೆ ಇಲಾಖೆ ಸಂಪರ್ಕದಲ್ಲಿದ್ದಾರೆ. ಉದ್ಘಾಟನೆಯ ಎರಡು ದಿನ ಮುಂಚೆ ಅಯೋಧ್ಯೆ ತಲುಪುವಂತೆ ರೈಲು ಸೇವೆಗೆ ಮನವಿ ಇಟ್ಟಿದ್ದಾರೆ. ಉದ್ಘಾಟನೆಗೆ ಮುಂಚೆ ಭಕ್ತರು ಅಲ್ಲಿನ ಸುತ್ತಮುತ್ತಲಿನ ದೇವಸ್ಥಾನಗಳಿಗೆ ಭೇಟಿ ನೀಡಿ, ದೇವರ ದರ್ಶನ ಪಡೆಯಲಿದ್ದಾರೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: 10 ಕೋಟಿ ಜನರಿಗೆ ಆಹ್ವಾನ, ಸಚಿವ ಜೋಶಿ ಸಾರಥ್ಯದಲ್ಲಿ ಧಾರವಾಡದಿಂದ ವಿಶೇಷ ರೈಲು
ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಧಾರವಾಡದಿಂದ ವಿಶೇಷ ರೈಲು
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Nov 23, 2023 | 5:45 PM

Share

ಅಯೋಧ್ಯೆಯಲ್ಲಿ (Ayodhya) ಮುಂದಿನ ವರ್ಷ ನೂತನ ರಾಮ ಮಂದಿರದ (ram mandir) ಉದ್ಘಾಟನೆ ನಡೆಯಲಿದೆ. ಮಂದಿರ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಲಾಗಿದೆ. ಇದೇ ವೇಳೆ ದೇಶದಲ್ಲಿ ಹತ್ತು ಕೋಟಿ ಜನರಿಗೆ ಆಹ್ವಾನ ಪತ್ರಿಕೆ ಕಳಿಸಲಾಗುತ್ತಿದೆ. ಇದೇ ವೇಳೆ ಕೇಂದ್ರದಲ್ಲಿ ಪ್ರಭಾವಿ ಖಾತೆ ಹೊಂದಿರೋ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಿಕಟ ಸಂಪರ್ಕ ಹೊಂದಿರೋ ಧಾರವಾಡದ (dharwad) ಸಂಸದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad joshi) ತಮ್ಮ ಅಭಿಮಾನಿಗಳಿಗೆ ಗಿಫ್ಟ್ ಕೊಡಲು ನಿರ್ಧರಿಸಿದ್ದಾರೆ. ಏನದು? ಇಲ್ಲಿದೆ ನೋಡಿ…

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಈ ಭವ್ಯ ರಾಮ ಮಂದಿರ ನಿರ್ಮಾಣದ ಹಿಂದೆ ದೊಡ್ಡ ಇತಿಹಾಸವೇ ಇರೋದು ಎಲ್ಲರಿಗೂ ಗೊತ್ತಿರೋ ವಿಚಾರ. ಇಂಥ ರಾಮಮಂದಿರ ಉದ್ಘಾಟನೆಯನ್ನು ದೇಶದ ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಒಟ್ಟು 10 ಕೋಟಿ ಜನರಿಗೆ ಆಹ್ವಾನ ನೀಡಲಾಗುತ್ತಿದೆ.

ಇದೇ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಮ್ಮ ಲೋಕಸಭಾ ಕ್ಷೇತ್ರದಿಂದ ಅನೇಕರನ್ನು ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಬೇಕೆಂದು ತೀರ್ಮಾನಿಸಿದ್ದಾರೆ. ಇದೇ ಕಾರಣಕ್ಕೆ ವಿಶೇಷ ರೈಲೊಂದನ್ನು (special train) ಧಾರವಾಡದಿಂದ ಬಿಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಪಾಲಿಕೆ ಸದಸ್ಯ ಹಾಗೂ ಜೋಶಿ ಆಪ್ತ ಈರೇಶ ಅಂಚಟಗೇರಿ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: Ayodhya: ಅಯೋಧ್ಯೆಯಲ್ಲಿ ಶ್ರೀರಾಮ ಮಹಾಮಸ್ತಕಾಭಿಷೇಕದ ಸಮಯ ನಿಗದಿ

ಈ ಬಗ್ಗೆ ಈಗಾಗಲೇ ಜೋಶಿ ಆಪ್ತರು ರೈಲ್ವೆ ಇಲಾಖೆಯವರನ್ನು ಸಂಪರ್ಕಿಸಿದ್ದಾರೆ.‌ ಅಧಿಕಾರಿಗಳನ್ನು ಸಂಪರ್ಕಿಸಿರೋ ಜೋಶಿ ಆಪ್ತರು, ಉದ್ಘಾಟನೆಯ ಎರಡು ದಿನ ಮುಂಚೆ ಅಯೋಧ್ಯೆ ಮುಟ್ಟುವಂತೆ ರೈಲು ಸೇವೆಗೆ ಮನವಿ ಇಟ್ಟಿದ್ದಾರೆ. ಉದ್ಘಾಟನೆಗೆ ಎರಡು ದಿನ ಮುಂಚೆ ಹೋಗೋ ಭಕ್ತರು ಅಲ್ಲಿನ ಸುತ್ತಮುತ್ತಲಿನ ದೇವಸ್ಥಾನಗಳಿಗೆ ಭೇಟಿ ನೀಡಿ, ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ಜನವರಿ 22 ರಂದು ನಡೆಯೋ ಕಾರ್ಯಕ್ರಮದಲ್ಲಿ ಭಾಗಿಯಾಗೋ ಪ್ಲ್ಯಾನ್ ಹೊಂದಿದ್ದಾರೆ. ಒಂದು ವೇಳೆ ರೈಲ್ವೆ ಇಲಾಖೆ ಅಧಿಕಾರಿಗಳು ಈ ಮನವಿಗೆ ಸ್ಪಂದಿಸಿದರೆ ನಮಗೆ ಖುಷಿಯಾಗುತ್ತೆ ಅನ್ನುತ್ತಾರೆ ಜೋಶಿ ಅಭಿಮಾನಿಗಳು.

ಈಗಾಗಲೇ ಅನೇಕರು ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ. ತಮ್ಮ ಸ್ವಂತ ಖರ್ಚಿನಲ್ಲಿ ಹೋಗಲು ಸಾಧ್ಯವಾಗದ ಅನೇಕರಿಗೆ ಜೋಶಿ ಅವರ ಈ ಯೋಜನೆಯಿಂದ ಖುಷಿಯಾಗಿದ್ದಂತೂ ಸತ್ಯ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!