AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಕಾಂತ್​ಗೆ ಜಾಮೀನು: ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಪ್ರತಿಭಟನೆ ಕೈಬಿಟ್ಟ ಬಿಜೆಪಿ

ರಾಮಜನ್ಮಭೂಮಿ ಹೋರಾಟದ ಕೇಸ್​ನಲ್ಲಿ ಆರೋಪಿಯಾಗಿರುವ ಕರಸೇವಕ ಆರೋಪಿ ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು ಹಿನ್ನಲೆ ಜ.9 ರಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ(BY vijayendra)ನೇತೃತ್ವದಲ್ಲಿ ನಿಗದಿಯಾಗಿದ್ದ ಪ್ರತಿಭಟನೆಯನ್ನು ರಾಜ್ಯ ಬಿಜೆಪಿ ಘಟಕ ಕೈಬಿಟ್ಟಿದೆ.

ಶ್ರೀಕಾಂತ್​ಗೆ ಜಾಮೀನು: ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಪ್ರತಿಭಟನೆ ಕೈಬಿಟ್ಟ ಬಿಜೆಪಿ
ಶ್ರೀಕಾಂತ್​ಗೆ ಜಾಮೀನು: ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಪ್ರತಿಭಟನೆ ಕೈಬಿಟ್ಟ ಬಿಜೆಪಿ
ಕಿರಣ್​ ಹನಿಯಡ್ಕ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 05, 2024 | 7:31 PM

Share

ಬೆಂಗಳೂರು, ಜ.05: ರಾಮಜನ್ಮಭೂಮಿ ಹೋರಾಟದ ಕೇಸ್​ನಲ್ಲಿ ಆರೋಪಿಯಾಗಿರುವ ಕರಸೇವಕ ಆರೋಪಿ ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು ಹಿನ್ನಲೆ ಜ.9 ರಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ(BY vijayendra)ನೇತೃತ್ವದಲ್ಲಿ ನಿಗದಿಯಾಗಿದ್ದ ಪ್ರತಿಭಟನೆಯನ್ನು ರಾಜ್ಯ ಬಿಜೆಪಿ ಘಟಕ ಕೈಬಿಟ್ಟಿದೆ. ಶ್ರೀಕಾಂತ್​ ಬಿಡುಗಡೆಗೆ ಆಗ್ರಹಿಸಿ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧರಿಸಿತ್ತು. ಆದರೀಗ ಜಾಮೀನು ಮಂಜೂರಾದ ಹಿನ್ನೆಲೆ ಠಾಣೆಗೆ ಮುತ್ತಿಗೆ ಹಾಕುವುದನ್ನು ರದ್ದುಪಡಿಸಿದೆ.

ಶ್ರೀಕಾಂತ್ ಪೂಜಾರಿ​ಗೆ ಷರತ್ತುಬದ್ದ ಜಾಮೀನು

ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಆರೋಪಿ ಶ್ರೀಕಾಂತ್​ ಪೂಜಾರಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಲಾಗಿದೆ. ಆದರೆ, 1 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಬಂದ ನಂತರ ದಾಖಲೆಗಳನ್ನು 5 ಮತ್ತು 3ನೇ ಜೆಎಮ್ಎಫ್‌ಸಿ ನ್ಯಾಯಾಲಕ್ಕೆ ನೀಡಬೇಕು. ಬಳಿಕ ಆ ತೀರ್ಪು ಆದೇಶವನ್ನ ಈ ಎರಡೂ ಕೋರ್ಟ್‌ಗಳಿಗೆ ತಲುಪಿಸಬೇಕು. ನಂತರ ಸಂಜೆ 6 ಗಂಟೆಯೊಳಗೆ ತೀರ್ಪಿನ ಆದೇಶ ಜೈಲು ಅಧಿಕಾರಿಗಳ ಕೈ ಸೇರಬೇಕು. ಸಮಯದ ಅಭಾವದಿಂದ ತೀರ್ಪು ಆದೇಶ ಕೈ ಸೇರುವುದು ತಡವಾದರೆ ಶ್ರೀಕಾಂತಗೆ ಇಂದು ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ:ಶ್ರೀಕಾಂತ್ ಪೂಜಾರಿ ಬಿಡುಗಡೆ ಮಾಡುವವರೆಗೂ ಬಿಜೆಪಿ ಸುಮ್ಮನಿರಲ್ಲ: ಬಿವೈ ವಿಜಯೇಂದ್ರ

ಷರತ್ತುಗಳೇನು

ಇನ್ನು ಶ್ರೀಕಾಂತ್ ಪೂಜಾರಿ​ಗೆ ವಿಧಿಸಿದ ಷರತ್ತುಗಳು  1) ಇಬ್ಬರು ಜಾಮೀನುದಾರರ ಭದ್ರತೆ ನೀಡಬೇಕು. 2) ಒಂದು ಲಕ್ಷ ರೂಪಾಯಿ 2 ಬಾಂಡ್ ನೀಡಬೇಕು.3) ನ್ಯಾಯಾಲಯದ ಪ್ರತಿ ವಿಚಾರಣೆಗೂ ಹಾಜರಾಗಬೇಕು.4)ನ್ಯಾಯಾಲಯದ ಪರವಾನಿಗೆ ಇಲ್ಲದೇ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಬಾರದು.5) ಸಾಕ್ಷ್ಯ ನಾಶಪಡಿಸುವಂತಿಲ್ಲ. 6) ಕೋರ್ಟ್ ವ್ಯಾಪ್ತಿ ಬಿಟ್ಟು ಹೋಗುವಂತಿಲ್ಲ. 7) ಒಂದು ವೇಳೆ ಕೋರ್ಟ್ ವ್ಯಾಪ್ತಿ ಬಿಟ್ಟು ಹೋಗುವುದಾದರೆ ಅನುಮತಿ ಕಡ್ಡಾಯ.8) ಪ್ರತಿ ಮುದ್ದಾತ್ತಿಗೂ ಕಡ್ಡಾಯವಾಗಿ ಹಾಜರಿರಬೇಕು.9) ಇನ್ನುಳಿದಂತೆ ಇಬ್ಬರು ವ್ಯಕ್ತಿಗಳಿಂದ ತಲಾ 2 ಲಕ್ಷ ರೂ. ಭದ್ರತಾ ಬಾಂಡ್ ಶೂರಿಟಿ ಕೊಡಲು ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ