Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾನಗಲ್​ ಅತ್ಯಾಚಾರ ಸಂತ್ರಸ್ತೆಗೆ ಹಣ ನೀಡಿ ಕೇಸ್​ ಹಿಂಪಡೆಯುವಂತೆ ಹೇಳಿದ್ದರು: ಬೊಮ್ಮಾಯಿ

ಹಾವೇರಿ ಜಿಲ್ಲೆ ಹಾನಗಲ್​​ನಲ್ಲಿ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಮುಚ್ಚಿ ಹಾಕುವ ಪೊಲೀಸರ ಪ್ರಯತ್ನ ವಿಫಲವಾಗಿದೆ. ಸಂತ್ರಸ್ತೆಗೆ ಹಣ ಕೊಟ್ಟು ಪ್ರಕರಣವನ್ನು ಹಿಂಪಡೆಯುವಂತೆ ಹೇಳಿದ್ದರು. ಇದೀಗ ಪ್ರಕರಣ ವಾಪಸ್ ತೆಗೆದುಕೊಳ್ಳುವಂತೆ ಹೇಳಿದ್ದು ಬಹಿರಂಗವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಾನಗಲ್​ ಅತ್ಯಾಚಾರ ಸಂತ್ರಸ್ತೆಗೆ ಹಣ ನೀಡಿ ಕೇಸ್​ ಹಿಂಪಡೆಯುವಂತೆ ಹೇಳಿದ್ದರು: ಬೊಮ್ಮಾಯಿ
ಮಾಜಿ‌ ಸಿಎಂ ಬಸವರಾಜ್ ಬೊಮ್ಮಾಯಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on: Jan 14, 2024 | 11:24 AM

ಹುಬ್ಬಳ್ಳಿ, ಜನವರಿ 14: ಹಾವೇರಿ (Haveri) ಜಿಲ್ಲೆ ಹಾನಗಲ್​​ನಲ್ಲಿ (Hangal) ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಮುಚ್ಚಿ ಹಾಕುವ ಪೊಲೀಸರ ಪ್ರಯತ್ನ ವಿಫಲವಾಗಿದೆ. ಸಂತ್ರಸ್ತೆಗೆ ಹಣ ಕೊಟ್ಟು ಪ್ರಕರಣವನ್ನು ಹಿಂಪಡೆಯುವಂತೆ ಹೇಳಿದ್ದರು. ಇದೀಗ ಸಂತ್ರಸ್ತೆ ಪ್ರಕರಣ ವಾಪಸ್ ತೆಗೆದುಕೊಳ್ಳುವಂತೆ ಹೇಳಿದ್ದು ಬಹಿರಂಗವಾಗಿದೆ. ಪ್ರಕರಣವನ್ನು ಸ್ಥಳೀಯ ಪೊಲೀಸರು ಮುಚ್ಚಿ ಹಾಕುತ್ತಾರೆ. ಪ್ರಕರಣದ ತನಿಖೆಗೆ SIT ರಚನೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳು ಹಾವೇರಿಗೆ ಬಂದಾಗ ಎಸ್​ಐಟಿಗೆ ವಹಿಸುವ ನಿರೀಕ್ಷೆ ಇದೆ. ಪೊಲೀಸರಿಂದ ನಾವೇನು ನಿರೀಕ್ಷೆ ಮಾಡಲು ಆಗಲ್ಲ. ತನಿಖೆ ನೆಪದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.

ಇದನ್ನೂ ಓದಿ: ಹಾನಗಲ್​​ ಗ್ಯಾಂಗ್​ ರೇಪ್​ ಕೇಸ್​ SIT ತನಿಕೆಗೆ ಬೊಮ್ಮಾಯಿ ಆಗ್ರಹ

ಇನ್ನೂ ಜನವರಿ 22ರ ನಂತರ ರಾಮಮಂದಿರಕ್ಕೆ ಹೋಗುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ರಾಮಮಂದಿರ ವಿಚಾರವಾಗಿ ಸಿದ್ದರಾಮಯ್ಯ ಗೊಂದಲ‌ದಲ್ಲಿದ್ದಾರೆ. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ. ರಾಜಕೀಯಕ್ಕಾಗಿ ಅವರ ಹೆಸರಲ್ಲಿರುವ ರಾಮನನ್ನೇ ಕಡೆಗಣಿಸಿದರು. ಅಧಿಕಾರದ ರಾಜಕಾರಣಕ್ಕಾಗಿ ರಾಮನನ್ನು ಕಡೆಗಣನೆ ಮಾಡಿದ್ದಾರೆ. ತಡವಾದರೂ ಸಿದ್ದರಾಮಯ್ಯ ಅವರಿಗೆ ಜ್ಞಾನೋದಯ ಆಗಿದೆ. ಜನವರಿ 22ರ ನಂತರ ನಾನ ಹೋಗುತ್ತೇನೆ ಅಂತಾರೆ, ಮತ್ತೆ ಇಲ್ಲ ಅಂತಾರೆ. ಅವರ ಆತ್ಮಸಾಕ್ಷಿ ಅಯೋಧ್ಯೆಗೆ ಹೋಗಬೇಕು ಅಂತಿದೆ. ಆದರೆ ವರಿಷ್ಠರು ಬೇಡಾ ಅಂತಾರೆ. ಹೀಗಾಗಿ ಸಿದ್ದರಾಮಯ್ಯ ಗೊಂದಲದಲ್ಲಿದಾರೆ ಎಂದರು.

6 ಆರೋಪಿಗಳ ಬಂಧನ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಮತ್ತಿಬ್ಬರು ಆರೋಪಿಗಳನ್ನು ಹಾನಗಲ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಇದುವರೆಗೆ 6 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ