AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಹನ ಲಿಂಬಿಕಾಯಿಯಷ್ಟು ರಾಜಕೀಯ ಜ್ಞಾನ ನನಗೆ ಇಲ್ಲ; ಮೋಹನ ಲಿಂಬಿಕಾಯಿಗೆ ಬಸವರಾಜ್ ಹೊರಟ್ಟಿ ತಿರುಗೇಟು

ಧಾರವಾಡದಲ್ಲಿ ಮಾತನಾಡಿದ ಸಭಾಪತಿ ಹೊರಟ್ಟಿ, ಮೋಹನ ಲಿಂಬಿಕಾಯಿಯಷ್ಟು ರಾಜಕೀಯ ಜ್ಞಾನ ನನಗೆ ಇಲ್ಲ. ಆ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ಯಾರು ಕರೆದಿದ್ದಾರೆ, ಯಾರು ಬಿಟ್ಟಿದ್ದಾರೆ ಅನ್ನೋದು ಈಗ ಯಾಕೆ? ಚುನಾವಣೆ ಬರಲಿ, ಬಂದಾಗ ಎಲ್ಲವೂ ಗೊತ್ತಾಗುತ್ತೆ ಎಂದರು.

ಮೋಹನ ಲಿಂಬಿಕಾಯಿಯಷ್ಟು ರಾಜಕೀಯ ಜ್ಞಾನ ನನಗೆ ಇಲ್ಲ; ಮೋಹನ ಲಿಂಬಿಕಾಯಿಗೆ ಬಸವರಾಜ್ ಹೊರಟ್ಟಿ ತಿರುಗೇಟು
ಬಸವರಾಜ್ ಹೊರಟ್ಟಿ
TV9 Web
| Edited By: |

Updated on: Apr 27, 2022 | 1:38 PM

Share

ಧಾರವಾಡ: ಸಭಾಪತಿ ಹೊರಟ್ಟಿ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿ ಎಂಎಲ್‌ಸಿ ಆಕಾಂಕ್ಷಿಗಳ ಮಧ್ಯೆ ವಾಕ್ ಸಮರ ಮುಂದುವರೆದಿದೆ. ಬಿಜೆಪಿ ಎಂಎಲ್‌ಸಿ ಆಕಾಂಕ್ಷಿ ಮೋಹನ ಲಿಂಬಿಕಾಯಿ ಹೇಳಿಕೆಗೆ ಬಸವರಾಜ್ ಹೊರಟ್ಟಿ ತಿರುಗೇಟು ಕೊಟ್ಟಿದ್ದಾರೆ. ಹೊರಟ್ಟಿಯವರನ್ನು ಬಿಜೆಪಿಗೆ ಕರದೇ ಇಲ್ಲವೆಂದು ಲಿಂಬಿಕಾಯಿ ಹೇಳಿಕೆ ನೀಡಿದ್ದರು. ಸದ್ಯ ಈ ಹೇಳಿಕೆಗೆ ಹೊರಟ್ಟಿ ಪ್ರತಿಕ್ರಿಯಿಸಿದ್ದು ಮೋಹನ ಲಿಂಬಿಕಾಯಿಯಷ್ಟು ರಾಜಕೀಯ ಜ್ಞಾನ ನನಗೆ ಇಲ್ಲ. ಆ ಬಗ್ಗೆ ನಾನು ಏನು ಮಾತನಾಡುವುದಿಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಸಭಾಪತಿ ಹೊರಟ್ಟಿ, ಮೋಹನ ಲಿಂಬಿಕಾಯಿಯಷ್ಟು ರಾಜಕೀಯ ಜ್ಞಾನ ನನಗೆ ಇಲ್ಲ. ಆ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ಯಾರು ಕರೆದಿದ್ದಾರೆ, ಯಾರು ಬಿಟ್ಟಿದ್ದಾರೆ ಅನ್ನೋದು ಈಗ ಯಾಕೆ? ಚುನಾವಣೆ ಬರಲಿ, ಬಂದಾಗ ಎಲ್ಲವೂ ಗೊತ್ತಾಗುತ್ತೆ. ಕರೆದವರು ಸುಮ್ಮನೆ ಕುಳಿತಿದ್ದೇಕೆ? ನನಗೂ ಗೊತ್ತಿಲ್ಲ. ಬೇರೆ ವಿಷಯ ಇದ್ದರೆ ಹೇಳಿ? ಆ ವಿಷಯ ಯಾಕೆ? ಎಂದರು.

ಇನ್ನು ಇದೇ ವೇಳೆ ಮಾತನಾಡಿದ ಹೊರಟ್ಟಿ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಪ್ರಕರಣದಲ್ಲಿ ಕರ್ನಾಟಕ ವಿವಿ ಕುಲಸಚಿವ ನಾಗರಾಜ್ ವಿಚಾರಣೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈಗ ಅವರನ್ನು ಕರೆಸಿದ್ದಾರೆ. ಆ ವಿಚಾರಣೆಯ ಫಲಿತಾಂಶ ಬರಲಿ. ಫಲಿತಾಂಶ ಬರೋವರೆಗೂ ಏನೂ ಹೇಳೋಕೆ ಆಗೋದಿಲ್ಲ. ಮೇಲ್ನೋಟಕ್ಕೆ ತಪ್ಪು ಕಂಡಾಗ ವಿಚಾರಣೆಗೆ ಕರೆದಿರುತ್ತಾರೆ ಎಂದರು. ರಾಜ್ಯದಲ್ಲಿ ನಡೆದಿರೋ ಅಕ್ರಮ ಪ್ರಕರಣಗಳ ಈಗಲಾದರೂ ಸತ್ಯ ಹೊರಬರುತ್ತೆಂಬ ಆಶಾಭಾವನೆ ಬಂದಿದೆ. ಇಂಥವೆಲ್ಲ ಬಹಳ ದಿನಗಳಿಂದ ನಡೆದಿದ್ದವು. ಇನ್ನು ಮುಂದೆ ನಡೆಯಬಾರದು. ಸರ್ಕಾರ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು.

ನಂಬಿಕೆ ಎನ್ನುವುದು ಮುಖ್ಯ. ಸರಿಯಾದ ರೀತಿಯ ತನಿಖೆ ಮಾಡಬೇಕು. ಇಲ್ಲದೇ ಹೋದಲ್ಲಿ ನಾಳೆ ಅವರ ಮೇಲೂ ಬರುತ್ತೆ. ಪರೀಕ್ಷೆ ಎಂದರೆ ಎಷ್ಟೋ ಜನ ಜೀವ ತ್ಯಾಗ ಮಾಡಿ ಓದಿರುತ್ತಾರೆ. ಅಂಥವರಿಗೆ ಏನೂ ಮಾಡಬಾರದು. ತಪ್ಪು ಮಾಡಿದವರು ಒಂದಿಲ್ಲ ಒಂದು ದಿನ ಸಿಗ್ತಾರೆ. ಯಾವುದೇ ವ್ಯಕ್ತಿ ಇರಲಿ. ನಂಬಿಕೆ ಎನ್ನುವುದು ಮುಖ್ಯ. ಆ ನಂಬಿಕೆಗೆ ದ್ರೋಹ ಮಾಡುವುದು ಸರಿಯಲ್ಲ. ಅಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೊರಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ: ಗಾಂಧಿ ಬಜಾರ್​​ನಲ್ಲಿ ಕೋ ಅಪರೇಟಿವ್ ಬ್ಯಾಂಕಿನಿಂದ ಗ್ರಾಹಕರಿಗೆ 18 ಕೋಟಿ ರೂ ವಂಚನೆ ಆರೋಪ; ಬ್ಯಾಂಕ್ ನೀಡಿದ ಭರವಸೆಯೇನು?

‘ಕೆಜಿಎಫ್​ 2’ ಮಾತ್ರವಲ್ಲ, ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಟಾಪ್​ 10 ಸಿನಿಮಾಗಳ ಲಿಸ್ಟ್​ ಇಲ್ಲಿದೆ..

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!