Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದಾಯಿ ಯೋಜನೆಗೆ ಮೊದಲ ಪ್ರಾಶಸ್ತ್ಯ; ಏನು ಮಾಡಬೇಕು ಎಂದು ನನಗೆ ಬಹಳ ಸ್ಪಷ್ಟತೆ ಇದೆ: ಸಿಎಂ ಬಸವರಾಜ ಬೊಮ್ಮಾಯಿ

ಇಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿದ್ದಾರೆ. ಜಗದೀಶ್ ಶೆಟ್ಟರ್, ಇನ್ನೂ ಹಲವು ಶಾಸಕರು ಕೂಡ ಇದ್ದಾರೆ. ಎಲ್ಲರ ಜತೆ ಚರ್ಚಿಸಿ ಸಲಹೆ ಸ್ವೀಕರಿಸುತ್ತೇನೆ. ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಆದ್ಯತೆ ಕೊಡುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಹದಾಯಿ ಯೋಜನೆಗೆ ಮೊದಲ ಪ್ರಾಶಸ್ತ್ಯ; ಏನು ಮಾಡಬೇಕು ಎಂದು ನನಗೆ ಬಹಳ ಸ್ಪಷ್ಟತೆ ಇದೆ: ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
Follow us
TV9 Web
| Updated By: sandhya thejappa

Updated on: Jul 29, 2021 | 11:11 AM

ಹುಬ್ಬಳ್ಳಿ: ನಾನು ಹುಬ್ಬಳ್ಳಿಯಲ್ಲೇ ಹುಟ್ಟಿ ಬೆಳೆದವನು. ಹುಬ್ಬಳ್ಳಿಯಲ್ಲಿ ನನಗೆ ದೊಡ್ಡ ಸ್ನೇಹಿತರ ಬಳಗವೇ ಇದೆ. ಇದು ನನಗೆ ಅತ್ಯಂತ ಪ್ರೀತಿಯ ಊರು. ಸಿಎಂ ಆಗಿ ಹುಬ್ಬಳ್ಳಿಗೆ ಬರುತ್ತೇನೆಂದು ಅಂದುಕೊಂಡಿರಲಿಲ್ಲ. ಮೋದಿ, ಅಮಿತ್ ಶಾ, ನಡ್ಡಾ ನಿರ್ಣಯದಿಂದ ಮುಖ್ಯಮಂತ್ರಿ ಆದೆ ಎಂದು ಹೇಳಿಕೆ ನೀಡಿದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ನಾಯಕರು ನನಗೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಎಲ್ಲರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ. ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಅಗತ್ಯ ಪ್ರಾಶಸ್ತ್ಯ ಕೊಡುತ್ತೇನೆ ಎಂದು ಹೇಳಿದ್ದಾರೆ.

ಇಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿದ್ದಾರೆ. ಜಗದೀಶ್ ಶೆಟ್ಟರ್, ಇನ್ನೂ ಹಲವು ಶಾಸಕರು ಕೂಡ ಇದ್ದಾರೆ. ಎಲ್ಲರ ಜತೆ ಚರ್ಚಿಸಿ ಸಲಹೆ ಸ್ವೀಕರಿಸುತ್ತೇನೆ. ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಆದ್ಯತೆ ಕೊಡುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ನಾಳೆ ಕೇಂದ್ರ ನಾಯಕರ ಭೇಟಿಗೆ ಹೋಗುತ್ತಿದ್ದೇನೆ. ಮೊದಲಿಗೆ ಅವರ ಆಶೀರ್ವಾದವನ್ನು ಪಡೆಯುತ್ತೇನೆ. ಕೇಂದ್ರ ನಾಯಕರ ಜತೆ ಸಚಿವ ಸಂಪುಟದ ಬಗ್ಗೆ ಚರ್ಚೆ ಮಾಡುತ್ತೇನೆ. ನಿನ್ನೆಯೇ ಜಗದೀಶ್ ಶೆಟ್ಟರ್ ಅವರ ಜತೆ ಮಾತಾಡಿದ್ದೇನೆ. ಶೆಟ್ಟರ್ ವೈಯಕ್ತಿವಾಗಿ ಬಂದು ಚರ್ಚಿಸುವುದಾಗಿ ಹೇಳಿದ್ದಾರೆ. ಶೆಟ್ಟರ್ ನನಗೆ ಬಹಳ ಆತ್ಮೀಯ ಸ್ನೇಹಿತರಿದ್ದಾರೆ. ಶೆಟ್ಟರ್ ಜತೆ ಚರ್ಚಿಸಿ ಅವರ ಸಮಸ್ಯೆ ತಿಳಿದುಕೊಳ್ಳುತ್ತೇನೆ. ಬಳಿಕ ವರಿಷ್ಠರ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದರು.

ಈ ವೇಳೆ ಮಾತನಾಡಿದ ರಾಜ್ಯದ ಮುಖ್ಯಮಂತ್ರಿ, ಮಹದಾಯಿ ಯೋಜನೆಗೆ ಮೊದಲ ಪ್ರಾಶಸ್ತ್ಯ ನೀಡುತ್ತೇನೆ, ಏನು ಮಾಡಬೇಕು ಎಂದು ನನಗೆ ಬಹಳ ಸ್ಪಷ್ಟತೆ ಇದೆ. ಗೆಜೆಟ್ ನೋಟಿಫಿಕೇಷನ್ ಸಿಕ್ಕ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

ಸಿಎಂ ಬಸವರಾಜ ಬೊಮ್ಮಾಯಿ ನನ್ನನ್ನು ಬಿಟ್ಟು ಸಂಪುಟ ರಚಿಸಲ್ಲವೆಂಬ ನಂಬಿಕೆ ಇದೆ -ದೆಹಲಿಯಲ್ಲಿ ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆ

ನಿರೀಕ್ಷಿತ ಪ್ರಮಾಣದಲ್ಲಿ ನಡೆಯದ ಲಸಿಕೆ ಅಭಿಯಾನ; ಖಾಸಗಿ ಆಸ್ಪತ್ರೆಗಳ ಶೇ. 25 ರಷ್ಟು ಲಸಿಕೆ ಕೋಟಾ ತಗ್ಗಿಸುವ ಸಾಧ್ಯತೆ

(Basavaraja Bommai said I will give priority to the Mahadayi Project in Hubli)

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ