AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದಾಯಿ ಯೋಜನೆಗೆ ಮೊದಲ ಪ್ರಾಶಸ್ತ್ಯ; ಏನು ಮಾಡಬೇಕು ಎಂದು ನನಗೆ ಬಹಳ ಸ್ಪಷ್ಟತೆ ಇದೆ: ಸಿಎಂ ಬಸವರಾಜ ಬೊಮ್ಮಾಯಿ

ಇಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿದ್ದಾರೆ. ಜಗದೀಶ್ ಶೆಟ್ಟರ್, ಇನ್ನೂ ಹಲವು ಶಾಸಕರು ಕೂಡ ಇದ್ದಾರೆ. ಎಲ್ಲರ ಜತೆ ಚರ್ಚಿಸಿ ಸಲಹೆ ಸ್ವೀಕರಿಸುತ್ತೇನೆ. ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಆದ್ಯತೆ ಕೊಡುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಹದಾಯಿ ಯೋಜನೆಗೆ ಮೊದಲ ಪ್ರಾಶಸ್ತ್ಯ; ಏನು ಮಾಡಬೇಕು ಎಂದು ನನಗೆ ಬಹಳ ಸ್ಪಷ್ಟತೆ ಇದೆ: ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
TV9 Web
| Edited By: |

Updated on: Jul 29, 2021 | 11:11 AM

Share

ಹುಬ್ಬಳ್ಳಿ: ನಾನು ಹುಬ್ಬಳ್ಳಿಯಲ್ಲೇ ಹುಟ್ಟಿ ಬೆಳೆದವನು. ಹುಬ್ಬಳ್ಳಿಯಲ್ಲಿ ನನಗೆ ದೊಡ್ಡ ಸ್ನೇಹಿತರ ಬಳಗವೇ ಇದೆ. ಇದು ನನಗೆ ಅತ್ಯಂತ ಪ್ರೀತಿಯ ಊರು. ಸಿಎಂ ಆಗಿ ಹುಬ್ಬಳ್ಳಿಗೆ ಬರುತ್ತೇನೆಂದು ಅಂದುಕೊಂಡಿರಲಿಲ್ಲ. ಮೋದಿ, ಅಮಿತ್ ಶಾ, ನಡ್ಡಾ ನಿರ್ಣಯದಿಂದ ಮುಖ್ಯಮಂತ್ರಿ ಆದೆ ಎಂದು ಹೇಳಿಕೆ ನೀಡಿದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ನಾಯಕರು ನನಗೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಎಲ್ಲರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ. ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಅಗತ್ಯ ಪ್ರಾಶಸ್ತ್ಯ ಕೊಡುತ್ತೇನೆ ಎಂದು ಹೇಳಿದ್ದಾರೆ.

ಇಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿದ್ದಾರೆ. ಜಗದೀಶ್ ಶೆಟ್ಟರ್, ಇನ್ನೂ ಹಲವು ಶಾಸಕರು ಕೂಡ ಇದ್ದಾರೆ. ಎಲ್ಲರ ಜತೆ ಚರ್ಚಿಸಿ ಸಲಹೆ ಸ್ವೀಕರಿಸುತ್ತೇನೆ. ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಆದ್ಯತೆ ಕೊಡುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ನಾಳೆ ಕೇಂದ್ರ ನಾಯಕರ ಭೇಟಿಗೆ ಹೋಗುತ್ತಿದ್ದೇನೆ. ಮೊದಲಿಗೆ ಅವರ ಆಶೀರ್ವಾದವನ್ನು ಪಡೆಯುತ್ತೇನೆ. ಕೇಂದ್ರ ನಾಯಕರ ಜತೆ ಸಚಿವ ಸಂಪುಟದ ಬಗ್ಗೆ ಚರ್ಚೆ ಮಾಡುತ್ತೇನೆ. ನಿನ್ನೆಯೇ ಜಗದೀಶ್ ಶೆಟ್ಟರ್ ಅವರ ಜತೆ ಮಾತಾಡಿದ್ದೇನೆ. ಶೆಟ್ಟರ್ ವೈಯಕ್ತಿವಾಗಿ ಬಂದು ಚರ್ಚಿಸುವುದಾಗಿ ಹೇಳಿದ್ದಾರೆ. ಶೆಟ್ಟರ್ ನನಗೆ ಬಹಳ ಆತ್ಮೀಯ ಸ್ನೇಹಿತರಿದ್ದಾರೆ. ಶೆಟ್ಟರ್ ಜತೆ ಚರ್ಚಿಸಿ ಅವರ ಸಮಸ್ಯೆ ತಿಳಿದುಕೊಳ್ಳುತ್ತೇನೆ. ಬಳಿಕ ವರಿಷ್ಠರ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದರು.

ಈ ವೇಳೆ ಮಾತನಾಡಿದ ರಾಜ್ಯದ ಮುಖ್ಯಮಂತ್ರಿ, ಮಹದಾಯಿ ಯೋಜನೆಗೆ ಮೊದಲ ಪ್ರಾಶಸ್ತ್ಯ ನೀಡುತ್ತೇನೆ, ಏನು ಮಾಡಬೇಕು ಎಂದು ನನಗೆ ಬಹಳ ಸ್ಪಷ್ಟತೆ ಇದೆ. ಗೆಜೆಟ್ ನೋಟಿಫಿಕೇಷನ್ ಸಿಕ್ಕ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

ಸಿಎಂ ಬಸವರಾಜ ಬೊಮ್ಮಾಯಿ ನನ್ನನ್ನು ಬಿಟ್ಟು ಸಂಪುಟ ರಚಿಸಲ್ಲವೆಂಬ ನಂಬಿಕೆ ಇದೆ -ದೆಹಲಿಯಲ್ಲಿ ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆ

ನಿರೀಕ್ಷಿತ ಪ್ರಮಾಣದಲ್ಲಿ ನಡೆಯದ ಲಸಿಕೆ ಅಭಿಯಾನ; ಖಾಸಗಿ ಆಸ್ಪತ್ರೆಗಳ ಶೇ. 25 ರಷ್ಟು ಲಸಿಕೆ ಕೋಟಾ ತಗ್ಗಿಸುವ ಸಾಧ್ಯತೆ

(Basavaraja Bommai said I will give priority to the Mahadayi Project in Hubli)

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?