AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಚಲಿಸುವ ರೈಲಿನಿಂದ ಪ್ಲಾಟ್​ಫಾರಂನಲ್ಲಿ ಇಳಿಯುವ ಯತ್ನ, ಬಿಬಿಎಂಪಿ ಎಂಜಿನಿಯರ್​ ಸ್ಥಳದಲ್ಲೇ ಸಾವು

ಬೆಂಗಳೂರಿನ ಬಿಬಿಎಂಪಿಯ ಕೆಆರ್​​ಐಡಿಎಲ್ ವಿಭಾಗದಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಂಗರಾಜು ಎಸ್.ಎ ಸಾವನ್ನಪ್ಪಿದ್ದಾರೆ. ಚಲಿಸುತ್ತಿರುವಾಗ ರೈಲಿನಿಂದ ಇಳಿಯುವ ಸಂದರ್ಭದಲ್ಲಿ ಪ್ಲಾಟ್​ಫಾರಂನಲ್ಲಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹುಬ್ಬಳ್ಳಿ: ಚಲಿಸುವ ರೈಲಿನಿಂದ ಪ್ಲಾಟ್​ಫಾರಂನಲ್ಲಿ ಇಳಿಯುವ ಯತ್ನ, ಬಿಬಿಎಂಪಿ ಎಂಜಿನಿಯರ್​ ಸ್ಥಳದಲ್ಲೇ ಸಾವು
ರಂಗರಾಜು ಎಸ್.ಎ (59)
TV9 Web
| Edited By: |

Updated on:Dec 20, 2021 | 9:28 AM

Share

ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಬಿದ್ದು, ಇಂಜಿನಿಯರ್ ಸಾವಿಗೀಡಾದ ದುರ್ಘಟನೆ ಹುಬ್ಬಳ್ಳಿಯ ರೇಲ್ವೆ ನಿಲ್ದಾಣದಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ರಂಗರಾಜು ಎಸ್.ಎ (59) ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ಹೋಗಬೇಕಾದ ರೈಲು ಹತ್ತುವ ಬದಲು ಬೆಳಗಾವಿಯ ರೈಲು (Train) ಹತ್ತಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸೂಪರಿಟೆಂಡೆಂಟ್ ಇಂಜಿನಿಯರ್ ತಕ್ಷಣವೇ ರೈಲಿನಿಂದ ಇಳಿಯಲು ಹೋಗಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಬಿಬಿಎಂಪಿಯ ಕೆಆರ್​​ಐಡಿಎಲ್ ವಿಭಾಗದಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಂಗರಾಜು ಎಸ್.ಎ ಸಾವನ್ನಪ್ಪಿದ್ದಾರೆ. ಚಲಿಸುತ್ತಿರುವಾಗ ರೈಲಿನಿಂದ ಇಳಿಯುವ ಸಂದರ್ಭದಲ್ಲಿ ಪ್ಲಾಟ್​ಫಾರಂನಲ್ಲಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಂಗರಾಜು, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹಾಸನ: ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆ ಜಿಲ್ಲೆಯ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಒಂದು ನಾಲ್ಕು ಬೈಕ್​ಗಳಿಗೆ ಡಿಕ್ಕಿ ಹೊಡೆದಿದೆ. ಎರಡು ಪುಟ್ಟ ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದರು. ಕುಡಿದ ಮತ್ತಿನಲ್ಲಿ ಲಾರಿ ಚಾಲಕ ಮನಬಂದಂತೆ ವಾಹನ ಚಲಾಯಿಸಿದ್ದಾನೆ. ಸುಮಾರು ಎರಡು ಕಿಲೋಮೀಟರ್ ಬೈಕ್ ಎಳೆದುಕೊಂಡು ಹೋಗಿರುವ ಲಾರಿಗೆ ಸಿಲುಕಿ ಪ್ರಣತಿ (3) ಪ್ರಣವ್ (3) ಎಂಬ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಹಾಸನದ ಗವೇನಹಳ್ಲಿಯ ಶಿವಾನಂದ್ ಪತ್ನಿ ಜ್ಯೋತಿಗೆ ಗಂಭೀರ ಗಾಯವಾಗಿತ್ತು. ಆದರೆ ಇಂದು ಜ್ಯೋತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಆ ಮೂಲಕ ಮೃತರ ಸಂಖ್ಯೆ 3ಕ್ಕೆ ಏರಿದೆ.  ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ (ಡಿಸೆಂಬರ್​ 19) ಘಟನೆ ನಡೆದಿದೆ.

ಹಾಸನ ಹೊರ ವಲಯದ ಬೂವನಹಳ್ಳಿ ಬಳಿ ಬೈಕ್​ಗೆ ಲಾರಿ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಲಾರಿ ನಿಲ್ಲಿಸದೆ ಲಾರಿ ಚಾಲಕ ಪರಾರಿ ಆಗಿದ್ದ. ಅಪಘಾತ ಸ್ಥಳದಿಂದ ಮೂರು ಕಿಲೋಮೀಟರ್ ಮುಂದೆ ಹೋಗುವಾಗ ಮತ್ತೆ ಮೂರು ಬೈಕ್​ಗಳಿಗೆ ಲಾರಿ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರ ರಿಂಗ್ ರಸ್ತೆಯ ಬೂವನಹಳ್ಳಿಯಿಂದ ಹೊಸಕೊಪ್ಪಲು ನಡುವೆ ಅದೇ ಲಾರಿ ನಾಲ್ಕು ಬೈಕ್​ಗಳಿಗೆ ಡಿಕ್ಕಿ ಆಗಿದೆ. ಲಾರಿ ಹಿಂಬಾಲಿಸಿದ ಜನರು ಮೈಸೂರು ರಸ್ತೆಯ ಹೊಸಕೊಪ್ಪಲು ಬಳಿ ಲಾರಿ ತಡೆದು ನಿಲ್ಲಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

ಹಾಸನ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; 4 ಬೈಕ್​​ಗಳಿಗೆ ಲಾರಿ ಡಿಕ್ಕಿ, ಇಬ್ಬರು ಮಕ್ಕಳು ಸಾವು

ರೈಲ್ವೆ ಹಳಿ ಮೇಲೆ ನಿಂತು ವಿಡಿಯೋಕ್ಕೆ ಪೋಸ್​ ಕೊಡುತ್ತಿದ್ದ ಯುವಕನ ದುರಂತ ಸಾವು; ಸರಕು ರೈಲು ಡಿಕ್ಕಿ

Published On - 8:50 am, Mon, 20 December 21

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು