AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ವಕಾಲತ್ತು ಅರ್ಜಿ ಸಲ್ಲಿಸಲಿರೋ ವಕೀಲರು

ಧಾರವಾಡ: ಆ ಪೋಷಕರು ತಮ್ಮ ಮಕ್ಕಳು ಏನಾದ್ರು ಸಾಧನೆ ಮಾಡಲಿ ಅಂತಾ ಸಾವಿರಾರು ಕಿಲೋಮೀಟರ್ ದೂರದಿಂದ ನಮ್ಮ ರಾಜ್ಯಕ್ಕೆ ಕಳುಹಿಸಿದ್ರು. ಹೀಗೆ ವಿದ್ಯಾಭ್ಯಾಸಕ್ಕೆ ಅಂತಾ ಬಂದವರು ಸುಮ್ಮನೆ ಕಾಲೇಜ್ ಆಯ್ತು, ತಾವಾಯ್ತು ಅಂತಾ ಇರದೆ ವೈರಿ ರಾಷ್ಟ್ರದ ಪರ ಘೋಷಣೆ ಕೂಗಿದ್ದರು. ಹೀಗೆ ಬಹುದೊಡ್ಡ ತಪ್ಪು ಮಾಡಿದವರ ಪರವಾಗಿ ವಕೀಲರ ಬಲ ಕೂಡ ಸಿಗಲಿದ್ದು, ಬೆಂಗಳೂರಿನಿಂದ ವಕೀಲರ ತಂಡ ಹುಬ್ಬಳ್ಳಿಯತ್ತ ಹೊರಟಿದೆ. ಆವತ್ತು ಹುಬ್ಬಳ್ಳಿಯ ಜನರಿಗೆ ಶಾಕ್ ಕಾದಿತ್ತು. ಇದ್ದಕ್ಕಿದ್ದಂತೆ ಕಾಲೇಜು ವಿದ್ಯಾರ್ಥಿಗಳ ತಂಡವೊಂದು ಪಾಕ್ ಪರ […]

ಹುಬ್ಬಳ್ಳಿಯಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ವಕಾಲತ್ತು ಅರ್ಜಿ ಸಲ್ಲಿಸಲಿರೋ ವಕೀಲರು
ಸಾಧು ಶ್ರೀನಾಥ್​
|

Updated on:Feb 28, 2020 | 10:09 AM

Share

ಧಾರವಾಡ: ಆ ಪೋಷಕರು ತಮ್ಮ ಮಕ್ಕಳು ಏನಾದ್ರು ಸಾಧನೆ ಮಾಡಲಿ ಅಂತಾ ಸಾವಿರಾರು ಕಿಲೋಮೀಟರ್ ದೂರದಿಂದ ನಮ್ಮ ರಾಜ್ಯಕ್ಕೆ ಕಳುಹಿಸಿದ್ರು. ಹೀಗೆ ವಿದ್ಯಾಭ್ಯಾಸಕ್ಕೆ ಅಂತಾ ಬಂದವರು ಸುಮ್ಮನೆ ಕಾಲೇಜ್ ಆಯ್ತು, ತಾವಾಯ್ತು ಅಂತಾ ಇರದೆ ವೈರಿ ರಾಷ್ಟ್ರದ ಪರ ಘೋಷಣೆ ಕೂಗಿದ್ದರು. ಹೀಗೆ ಬಹುದೊಡ್ಡ ತಪ್ಪು ಮಾಡಿದವರ ಪರವಾಗಿ ವಕೀಲರ ಬಲ ಕೂಡ ಸಿಗಲಿದ್ದು, ಬೆಂಗಳೂರಿನಿಂದ ವಕೀಲರ ತಂಡ ಹುಬ್ಬಳ್ಳಿಯತ್ತ ಹೊರಟಿದೆ.

ಆವತ್ತು ಹುಬ್ಬಳ್ಳಿಯ ಜನರಿಗೆ ಶಾಕ್ ಕಾದಿತ್ತು. ಇದ್ದಕ್ಕಿದ್ದಂತೆ ಕಾಲೇಜು ವಿದ್ಯಾರ್ಥಿಗಳ ತಂಡವೊಂದು ಪಾಕ್ ಪರ ಘೋಷಣೆ ಕೂಗಿ ವಿಡಿಯೋ ಮಾಡಿತ್ತು. ಈ ವಿಡಿಯೋ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ, ಆರೋಪಿಗಳ ಪರ ವಕಾಲತ್ತು ವಹಿಸದಂತೆ ಹುಬ್ಬಳ್ಳಿ ವಕೀಲರ ಸಂಘ ತೀರ್ಮಾನಿಸಿತ್ತು. ಇಷ್ಟೇ ಅಲ್ಲ ಆರೋಪಿಗಳ ಪರವಾದಿಸಲು ಬಂದ ವಕೀಲರ ವಿರುದ್ಧ ವಿರೋಧ ವ್ಯಕ್ತವಾಗಿತ್ತು. ಆದ್ರೆ, ಇದನ್ನೆಲ್ಲಾ ಗಂಭೀರವಾಗಿ ಪರಿಗಣಿಸಿದ್ದ ಬೆಂಗಳೂರು ಹೈಕೋರ್ಟ್, ಕಾನೂನು ಉಲ್ಲಂಘನೆ ಮಾಡದಂತೆ ಹಾಗೂ ಸಂವಿಧಾನಕ್ಕೆ ಅಗೌರವ ತರದಂತೆ ಖಡಕ್ ಎಚ್ಚರಿಕೆ ನೀಡಿತ್ತು. ಹೀಗಾಗಿ, ಬೆಂಗಳೂರಿನಿಂದ ಆರೋಪಿಗಳ ಪರ ವಾದಿಸಲು ವಕೀಲರ ವಿಶೇಷ ತಂಡ ಎಂಟ್ರಿ ಕೊಡ್ತಿದೆ.

ವಕಾಲತ್ತು ಅರ್ಜಿ ಸಲ್ಲಿಸಲು ಆಗಮಿಸಲಿರುವ ವಕೀಲರು: ಅಂದಹಾಗೆ ಪಾಕ್ ಪರ ಘೋಷಣೆ ಕೂಗಿರುವ ಆರೋಪ ಹೊತ್ತಿರುವ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ವಕಾಲತ್ತಿಗೆ ಅರ್ಜಿ ಸಲ್ಲಿಸಲು ಇಂದು ವಕೀಲರ ತಂಡ ಹುಬ್ಬಳ್ಳಿಗೆ ಎಂಟ್ರಿ ಕೊಡಲಿದೆ. ಇಂದು ಬೆಳಗ್ಗೆ 11ಕ್ಕೆ ಜಿಲ್ಲಾ ಕೋರ್ಟ್​ಗೆ ಆಗಮಿಸುವ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ. ಹಾಗೇ ಈ ಮೊದಲು ಧಾರವಾಡ ವಕೀಲರ ಸಂಘದಿಂದ ವಿರೋಧ ವ್ಯಕ್ತವಾಗಿತ್ತು. ಆದ್ರೆ, ಬೆಂಗಳೂರು ಹೈಕೋರ್ಟ್ ಮೊರೆ ಹೋಗಿದ್ದವರಿಗೆ ಗೆಲುವು ಸಿಕ್ಕಂತಾಗಿದೆ.

‘ವಿಚಾರಣೆಗೆ ಅಡ್ಡಿಪಡಿಸುವವರ ಅಡ್ರೆಸ್ ಬರೆದಿಟ್ಟುಕೊಳ್ಳಿ..!’ ಇನ್ನು ಕೆಲದಿನಗಳ ಹಿಂದೆ ನಡೆದಿದ್ದ ಘಟನೆಯನ್ನ ಗಂಭೀರವಾಗಿ ಪರಿಗಣಿಸಿರುವ ಕೋರ್ಟ್, ಕರ್ತವ್ಯಕ್ಕೆ ಅಡ್ಡಿ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಪ್ರತಿಭಟನೆ ನಡೆಸುವ ವಕೀಲರ ಮಾಹಿತಿಯನ್ನ ಬರೆದು ಅದರ ಸಂಪೂರ್ಣ ವಿವರ ನೀಡಿ ಅಂತಾ ಆದೇಶ ನೀಡಲಾಗಿದೆ. ನಿನ್ನೆ ವಿಡಿಯೋ ಕಾನ್ಫರೆನ್ಸ್ ನಡೆದ ನಂತ್ರ ವಿಚಾರಣೆ ಮುಂದೂಡಿ ಆದೇಶ ಹೊರಡಿಸಲಾಯಿತು.

ಒಟ್ನಲ್ಲಿ ಅವಳಿ ನಗರದ ಜನತೆಯ ನಿದ್ದೆ ಹಾರಿ ಹೋಗಿದೆ. ಕಾಶ್ಮೀರಿ ಹುಡುಗರು ಮಾಡಿರುವ ಪ್ರಮಾದದಿಂದ ಸೂಕ್ಷ್ಮಪರಿಸ್ಥಿತಿ ಏರ್ಪಟ್ಟಿದ್ದು, ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಹಾಗೇ ಪಾಕ್ ಪರ ಘೋಷಣೆ ಕೂಗಿದ್ದ ಆರೋಪಿಗಳನ್ನ ರಿಪೇರಿ ಮಾಡಲಾಗುತ್ತಿದೆ.

Published On - 8:18 am, Fri, 28 February 20

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು