AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bhart Express: ಉದ್ಘಾಟನೆಗೂ ಮುನ್ನವೇ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ಬಹುತೇಕ ಎಲ್ಲಾ ಸೀಟ್​ ಬುಕ್

Bengaluru-Dharwad Vande Bharat: ಇಂದು (ಜೂ.28) ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 10:30ಕ್ಕೆ ವರ್ಚುವಲ್​ ಮೂಲಕ ಚಾಲನೆ ನೀಡಲಿದ್ದಾರೆ. ಚಾಲನೆಗು ಮುನ್ನ ಬಹುತೇಕ​ ಸೀಟ್​ಗಳು ಬುಕ್​ ಆಗಿವೆ.

Vande Bhart Express: ಉದ್ಘಾಟನೆಗೂ ಮುನ್ನವೇ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ಬಹುತೇಕ ಎಲ್ಲಾ ಸೀಟ್​ ಬುಕ್
ವಂದೇ ಭಾರತ್ ಎಕ್ಸ್​​ಪ್ರೆಸ್
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 27, 2023 | 9:45 AM

Share

ಧಾರವಾಡ: ಇಂದು (ಜೂ.28) ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್​ಗೆ (Bengaluru-Dharwad Vande Bharat) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 10:30 ವರ್ಚುವಲ್​ ಮೂಲಕ ಚಾಲನೆ ನೀಡಲಿದ್ದಾರೆ. ಚಾಲನೆ ಬಳಿಕ ಧಾರವಾಡ (Dharwad) ರೈಲ್ವೆ ನಿಲ್ದಾಣದಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯುತ್ತದೆ. ನಂತರ ಧಾರವಾಡದಿಂದ ಬೆಂಗಳೂರಿಗೆ (Bengaluru) ಹೊರಡುತ್ತದೆ. ಇದು ರಾಜ್ಯದೊಳಗೆ ಸಂಚರಿಸಲಿರುವ ಮೊದಲ ರೈಲಾಗಿದೆ. ಈ ರೈಲು ಸೇರಿದಂತೆ ಪ್ರಧಾನಿ ಮೋದಿಯವರು ಏಕಕಾಲಕ್ಕೆ ಐದು ವಂದೇ ಭಾರತ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಜೂ.28 ರ ಪ್ರಯಾಣಕ್ಕೆ ಬಹುತೇಕ ಸೀಟ್​ ಬುಕ್​​

ಜೂನ್.28ರ ಪ್ರಯಾಣಕ್ಕೆ ಸೀಟ್​​ ಬುಕ್ಕಿಂಗ್​ ಆರಂಭವಾಗಿದೆ. ಬುಕ್ಕಿಂಗ್​​ ಆರಂಭವಾದ ಕೆಲವೇ ನಿಮಿಷಗಳಲ್ಲಿ ಬಹುತೇಕ ಸೀಟ್​​​​ಗಳು ಬುಕ್​ ಆಗಿವೆ. ಜೂನ್ 28 ರಂದು ಬೆಂಗಳೂರಿನಿಂದ ಧಾರವಾಡಕ್ಕೆ ಹೊರಡುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೀಟ್​​​ ಬುಕ್ಕಿಂಗ್​ ಬೆಳಿಗ್ಗೆ 8 ಗಂಟೆಗೆ ಆರಂಭವಾಯಿತು. ಮೊದಲ 20 ನಿಮಿಷಗಳಲ್ಲೇ ಶೇ 85 ರಷ್ಟು ಸೀಟುಗಳು ಬುಕ್​ ಆಗಿವೆ. ಹಾಗೇ ಧಾರವಾಡದಿಂದ ಬೆಂಗಳೂರಿಗೆ ಹೊರಡುವ ವಂದೇ ಭಾರತ್ ರೈಲಿನ ಸೀಟ್​ಗಳು ಕೂಡ​​ ಬುಕ್ಕಿಂಗ್ ​ಆರಂಭವಾದ ಮೊದಲ 20 ನಿಮಿಷಗಳಲ್ಲೇ ಬಹುತೇಕ ಫುಲ್​ ಆಗಿವೆ.

ಈ ರೈಲು 8 ಬೋಗಿಗಳನ್ನು ಹೊಂದಿದ್ದು, 530 ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ. ಈ ರೈಲು ವಾರದಲ್ಲಿ 6 ದಿನ ಧಾರವಾಡ-ಬೆಂಗಳೂರು ಮಾರ್ಗದಲ್ಲಿ ಸಂಚಾರ ಮಾಡುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:39 am, Tue, 27 June 23

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು