AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bhart Express: ಉದ್ಘಾಟನೆಗೂ ಮುನ್ನವೇ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ಬಹುತೇಕ ಎಲ್ಲಾ ಸೀಟ್​ ಬುಕ್

Bengaluru-Dharwad Vande Bharat: ಇಂದು (ಜೂ.28) ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 10:30ಕ್ಕೆ ವರ್ಚುವಲ್​ ಮೂಲಕ ಚಾಲನೆ ನೀಡಲಿದ್ದಾರೆ. ಚಾಲನೆಗು ಮುನ್ನ ಬಹುತೇಕ​ ಸೀಟ್​ಗಳು ಬುಕ್​ ಆಗಿವೆ.

Vande Bhart Express: ಉದ್ಘಾಟನೆಗೂ ಮುನ್ನವೇ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ಬಹುತೇಕ ಎಲ್ಲಾ ಸೀಟ್​ ಬುಕ್
ವಂದೇ ಭಾರತ್ ಎಕ್ಸ್​​ಪ್ರೆಸ್
ವಿವೇಕ ಬಿರಾದಾರ
|

Updated on:Jun 27, 2023 | 9:45 AM

Share

ಧಾರವಾಡ: ಇಂದು (ಜೂ.28) ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್​ಗೆ (Bengaluru-Dharwad Vande Bharat) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 10:30 ವರ್ಚುವಲ್​ ಮೂಲಕ ಚಾಲನೆ ನೀಡಲಿದ್ದಾರೆ. ಚಾಲನೆ ಬಳಿಕ ಧಾರವಾಡ (Dharwad) ರೈಲ್ವೆ ನಿಲ್ದಾಣದಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯುತ್ತದೆ. ನಂತರ ಧಾರವಾಡದಿಂದ ಬೆಂಗಳೂರಿಗೆ (Bengaluru) ಹೊರಡುತ್ತದೆ. ಇದು ರಾಜ್ಯದೊಳಗೆ ಸಂಚರಿಸಲಿರುವ ಮೊದಲ ರೈಲಾಗಿದೆ. ಈ ರೈಲು ಸೇರಿದಂತೆ ಪ್ರಧಾನಿ ಮೋದಿಯವರು ಏಕಕಾಲಕ್ಕೆ ಐದು ವಂದೇ ಭಾರತ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಜೂ.28 ರ ಪ್ರಯಾಣಕ್ಕೆ ಬಹುತೇಕ ಸೀಟ್​ ಬುಕ್​​

ಜೂನ್.28ರ ಪ್ರಯಾಣಕ್ಕೆ ಸೀಟ್​​ ಬುಕ್ಕಿಂಗ್​ ಆರಂಭವಾಗಿದೆ. ಬುಕ್ಕಿಂಗ್​​ ಆರಂಭವಾದ ಕೆಲವೇ ನಿಮಿಷಗಳಲ್ಲಿ ಬಹುತೇಕ ಸೀಟ್​​​​ಗಳು ಬುಕ್​ ಆಗಿವೆ. ಜೂನ್ 28 ರಂದು ಬೆಂಗಳೂರಿನಿಂದ ಧಾರವಾಡಕ್ಕೆ ಹೊರಡುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೀಟ್​​​ ಬುಕ್ಕಿಂಗ್​ ಬೆಳಿಗ್ಗೆ 8 ಗಂಟೆಗೆ ಆರಂಭವಾಯಿತು. ಮೊದಲ 20 ನಿಮಿಷಗಳಲ್ಲೇ ಶೇ 85 ರಷ್ಟು ಸೀಟುಗಳು ಬುಕ್​ ಆಗಿವೆ. ಹಾಗೇ ಧಾರವಾಡದಿಂದ ಬೆಂಗಳೂರಿಗೆ ಹೊರಡುವ ವಂದೇ ಭಾರತ್ ರೈಲಿನ ಸೀಟ್​ಗಳು ಕೂಡ​​ ಬುಕ್ಕಿಂಗ್ ​ಆರಂಭವಾದ ಮೊದಲ 20 ನಿಮಿಷಗಳಲ್ಲೇ ಬಹುತೇಕ ಫುಲ್​ ಆಗಿವೆ.

ಈ ರೈಲು 8 ಬೋಗಿಗಳನ್ನು ಹೊಂದಿದ್ದು, 530 ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ. ಈ ರೈಲು ವಾರದಲ್ಲಿ 6 ದಿನ ಧಾರವಾಡ-ಬೆಂಗಳೂರು ಮಾರ್ಗದಲ್ಲಿ ಸಂಚಾರ ಮಾಡುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:39 am, Tue, 27 June 23

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು