AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್, ದೀಪಾವಳಿ ವೇಳೆ ಜೂಜಾಟ; 773 ಮಂದಿ ಅರೆಸ್ಟ್

ಭಾರತದಲ್ಲಿ ವಿಶ್ವಕಪ್ ಹವಾ ಹೇಗೆ ಜೋರಾಗಿದೆ. ಅಭಿಮಾನಿಗಳು ಈ ಬಾರಿ ಕಪ್ ನಮ್ದೇ ಎನ್ನುತ್ತಿದ್ದಾರೆ. ಆದರೆ, ಹುಬ್ಬಳ್ಳಿ ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಕಳೆದ 15 ದಿನಗಳಲ್ಲಿ 29 ಪ್ರಕರಣಗಳನ್ನು ದಾಖಲಿಸಿದ ಪೊಲೀಸರು, 42 ಮಂದಿಯನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ: ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್, ದೀಪಾವಳಿ ವೇಳೆ ಜೂಜಾಟ; 773 ಮಂದಿ ಅರೆಸ್ಟ್
ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ಆಡಿದ 42 ಮಂದಿ ಅರೆಸ್ಟ್, ದೀಪಾವಳಿ ವೇಳೆ ಜೂಜಾಡಿದ್ದ 731 ಮಂದಿ ಬಂಧಿಸಲಾಗಿದೆ ಎಂದ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು
ಶಿವಕುಮಾರ್ ಪತ್ತಾರ್
| Edited By: |

Updated on:Nov 16, 2023 | 2:06 PM

Share

ಹುಬ್ಬಳ್ಳಿ-ಧಾರವಾಡ, ನ.16: ಭಾರತದಲ್ಲಿ ವಿಶ್ವಕಪ್ ಹವಾ ಹೇಗೆ ಜೋರಾಗಿದೆ. ಅಭಿಮಾನಿಗಳು ಈ ಬಾರಿ ಕಪ್ ನಮ್ದೇ ಎನ್ನುತ್ತಿದ್ದಾರೆ. ಆದರೆ, ಹುಬ್ಬಳ್ಳಿ ಧಾರವಾಡ (Hubbali Dharwad) ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಕಳೆದ 15 ದಿನಗಳಲ್ಲಿ 29 ಪ್ರಕರಣಗಳನ್ನು ದಾಖಲಿಸಿದ ಪೊಲೀಸರು, 42 ಮಂದಿಯನ್ನು ಬಂಧಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಹುಬ್ಬಳ್ಳಿ ಧಾರವಾಡದ ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ, ಕಳೆದ ಹದಿನೈದು ದಿನದಲ್ಲಿ ಹುದಾ ಕಮಿಷನರೇಟ್ ವ್ಯಾಪ್ತಿಯಲ್ಲಿ ಬೆಟ್ಟಿಂಗ್ ಪ್ರಕರಣ ಸಂಬಂಧ 29 ಕೇಸ್ ದಾಖಲಿಸಿ 42 ಜನರನ್ನು ಅರೆಸ್ಟ್ ಮಾಡಿದ್ದಾರೆ. ಭಾರತ ಫೈನಲ್ ತಲುಪಿದೆ. ಹೀಗಾಗಿ ನಾವು ಮತ್ತಷ್ಟು ಎಚ್ಚರ ವಹಿಸಬೇಕಾಗಿದೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಜೋರಾದ ಕ್ರಿಕೆಟ್​ ಬೆಟ್ಟಿಂಗ್​: 11 ಅಡ್ಡೆಗಳ ಮೇಲೆ ದಾಳಿ, 13 ಜನರ ಬಂಧನ

ಕ್ರೀಕೆಟ್ ಬೆಟ್ಟಿಂಗ್ ಬಗ್ಗೆ ಜಾಸ್ತಿ ನಿಗಾವಹಿಸಲಾಗಿದೆ ಎಂದ ರೇಣುಕಾ ಸುಕುಮಾರ, ಸೈಬರ್ ಬೇಸ್ ಆಧಾರದ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ. ಆ್ಯಪ್​ಗಳ ಮೇಲೆ ನಾವು ನಿಗಾ ಇಟ್ಟಿದ್ದು, ಬೆಟ್ಟಿಂಗ್ ಆಡುವ ತರಹದಲ್ಲಿ ಪೊಲೀಸರು ಹೋಗಿ ಕೆಲವರನ್ನು ಅರೆಸ್ಟ್ ಮಾಡಿದ್ದಾರೆ ಎಂದರು.

ದೀಪಾವಳಿ ಹಿನ್ನೆಲೆ ಜೂಜಾಡುತ್ತಿದ್ದ 731 ಮಂದಿ ಅರೆಸ್ಟ್

ದೀಪಾವಳಿ ಹಬ್ಬ ಹಿನ್ನೆಲೆ ಪೊಲೀಸರು ಹದ್ದಿನ ಕಣ್ಣಿಟ್ಟು ಜೂಜಾಡುತ್ತಿರುವವರಿಗೆ ಬಿಸಿ ಮುಟ್ಟಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತರು, ದೀಪಾವಳಿ ಹಿನ್ನೆಲೆ ಜೂಜಾಟ ಆಡುತ್ತಿದ್ದ 731 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ 12 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸರು ಹದಿನೈದು ದಿನಗಳಲ್ಲಿ ಒಟ್ಟು 117 ಗ್ಯಾಂಬ್ಲಿಂಗ್ ಕೇಸ್ ದಾಖಲಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:06 pm, Thu, 16 November 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು