AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್, ದೀಪಾವಳಿ ವೇಳೆ ಜೂಜಾಟ; 773 ಮಂದಿ ಅರೆಸ್ಟ್

ಭಾರತದಲ್ಲಿ ವಿಶ್ವಕಪ್ ಹವಾ ಹೇಗೆ ಜೋರಾಗಿದೆ. ಅಭಿಮಾನಿಗಳು ಈ ಬಾರಿ ಕಪ್ ನಮ್ದೇ ಎನ್ನುತ್ತಿದ್ದಾರೆ. ಆದರೆ, ಹುಬ್ಬಳ್ಳಿ ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಕಳೆದ 15 ದಿನಗಳಲ್ಲಿ 29 ಪ್ರಕರಣಗಳನ್ನು ದಾಖಲಿಸಿದ ಪೊಲೀಸರು, 42 ಮಂದಿಯನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ: ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್, ದೀಪಾವಳಿ ವೇಳೆ ಜೂಜಾಟ; 773 ಮಂದಿ ಅರೆಸ್ಟ್
ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ಆಡಿದ 42 ಮಂದಿ ಅರೆಸ್ಟ್, ದೀಪಾವಳಿ ವೇಳೆ ಜೂಜಾಡಿದ್ದ 731 ಮಂದಿ ಬಂಧಿಸಲಾಗಿದೆ ಎಂದ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು
ಶಿವಕುಮಾರ್ ಪತ್ತಾರ್
| Updated By: Rakesh Nayak Manchi|

Updated on:Nov 16, 2023 | 2:06 PM

Share

ಹುಬ್ಬಳ್ಳಿ-ಧಾರವಾಡ, ನ.16: ಭಾರತದಲ್ಲಿ ವಿಶ್ವಕಪ್ ಹವಾ ಹೇಗೆ ಜೋರಾಗಿದೆ. ಅಭಿಮಾನಿಗಳು ಈ ಬಾರಿ ಕಪ್ ನಮ್ದೇ ಎನ್ನುತ್ತಿದ್ದಾರೆ. ಆದರೆ, ಹುಬ್ಬಳ್ಳಿ ಧಾರವಾಡ (Hubbali Dharwad) ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಕಳೆದ 15 ದಿನಗಳಲ್ಲಿ 29 ಪ್ರಕರಣಗಳನ್ನು ದಾಖಲಿಸಿದ ಪೊಲೀಸರು, 42 ಮಂದಿಯನ್ನು ಬಂಧಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಹುಬ್ಬಳ್ಳಿ ಧಾರವಾಡದ ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ, ಕಳೆದ ಹದಿನೈದು ದಿನದಲ್ಲಿ ಹುದಾ ಕಮಿಷನರೇಟ್ ವ್ಯಾಪ್ತಿಯಲ್ಲಿ ಬೆಟ್ಟಿಂಗ್ ಪ್ರಕರಣ ಸಂಬಂಧ 29 ಕೇಸ್ ದಾಖಲಿಸಿ 42 ಜನರನ್ನು ಅರೆಸ್ಟ್ ಮಾಡಿದ್ದಾರೆ. ಭಾರತ ಫೈನಲ್ ತಲುಪಿದೆ. ಹೀಗಾಗಿ ನಾವು ಮತ್ತಷ್ಟು ಎಚ್ಚರ ವಹಿಸಬೇಕಾಗಿದೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಜೋರಾದ ಕ್ರಿಕೆಟ್​ ಬೆಟ್ಟಿಂಗ್​: 11 ಅಡ್ಡೆಗಳ ಮೇಲೆ ದಾಳಿ, 13 ಜನರ ಬಂಧನ

ಕ್ರೀಕೆಟ್ ಬೆಟ್ಟಿಂಗ್ ಬಗ್ಗೆ ಜಾಸ್ತಿ ನಿಗಾವಹಿಸಲಾಗಿದೆ ಎಂದ ರೇಣುಕಾ ಸುಕುಮಾರ, ಸೈಬರ್ ಬೇಸ್ ಆಧಾರದ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ. ಆ್ಯಪ್​ಗಳ ಮೇಲೆ ನಾವು ನಿಗಾ ಇಟ್ಟಿದ್ದು, ಬೆಟ್ಟಿಂಗ್ ಆಡುವ ತರಹದಲ್ಲಿ ಪೊಲೀಸರು ಹೋಗಿ ಕೆಲವರನ್ನು ಅರೆಸ್ಟ್ ಮಾಡಿದ್ದಾರೆ ಎಂದರು.

ದೀಪಾವಳಿ ಹಿನ್ನೆಲೆ ಜೂಜಾಡುತ್ತಿದ್ದ 731 ಮಂದಿ ಅರೆಸ್ಟ್

ದೀಪಾವಳಿ ಹಬ್ಬ ಹಿನ್ನೆಲೆ ಪೊಲೀಸರು ಹದ್ದಿನ ಕಣ್ಣಿಟ್ಟು ಜೂಜಾಡುತ್ತಿರುವವರಿಗೆ ಬಿಸಿ ಮುಟ್ಟಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತರು, ದೀಪಾವಳಿ ಹಿನ್ನೆಲೆ ಜೂಜಾಟ ಆಡುತ್ತಿದ್ದ 731 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ 12 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸರು ಹದಿನೈದು ದಿನಗಳಲ್ಲಿ ಒಟ್ಟು 117 ಗ್ಯಾಂಬ್ಲಿಂಗ್ ಕೇಸ್ ದಾಖಲಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:06 pm, Thu, 16 November 23

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು