AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ, ಬೆಂಗಳೂರು ಬಳಿಕ ಈಗ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಭಾರತ್ ಅಕ್ಕಿ ವಿತರಣೆ

ಕೇಂದ್ರ ಸರ್ಕಾರದ ಭಾರತ್ ಬ್ರ್ಯಾಂಡ್ ಯೋಜನೆಯಡಿ ಹುಬ್ಬಳ್ಳಿಯಲ್ಲಿ ಅಗ್ಗದ ದರದಲ್ಲಿ ಆಹಾರ ಉತ್ಪನ್ನಗಳ ವಿತರಣೆ ಇಂದಿನಿಂದ ಆರಂಭವಾಗುತ್ತಿದೆ. ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಈ ಯೋಜನೆ ಪ್ರಾರಂಭಿಸಲಾಗಿದೆ. ಹುಬ್ಬಳ್ಳಿಯಲ್ಲಿ ಮೂರುಸಾವಿರ ಮಠದ ಶಾಲಾ ಆವರಣದಲ್ಲಿ ಈ ವಿತರಣೆ ಕಾರ್ಯ ನಡೆಯುತ್ತಿದೆ.

ದೆಹಲಿ, ಬೆಂಗಳೂರು ಬಳಿಕ ಈಗ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಭಾರತ್ ಅಕ್ಕಿ ವಿತರಣೆ
ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಭಾರತ್ ಅಕ್ಕಿ ವಿತರಣೆ
TV9 Web
| Edited By: |

Updated on: Nov 11, 2024 | 10:32 AM

Share

ಹುಬ್ಬಳ್ಳಿ, ನವೆಂಬರ್ 11: ಬೆಲೆ ಏರಿಕೆ ಹಿನ್ನೆಲೆಯಲ್ಲಿ ಜನಸಾಮಾನ್ಯರ ನೆರವಿಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ನೇರ ಆಹಾರ ಉತ್ಪನ್ನ ಪೂರೈಕೆ, ಈಗ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತವರು ಕ್ಷೇತ್ರದಲ್ಲಿ ಆರಂಭಗೊಂಡಿದೆ. ಅಗತ್ಯ ಆಹಾರೋತ್ಪನ್ನಗಳ ಬೆಲೆ ನಿಯಂತ್ರಣಕ್ಕೆ ಮುಂದಾದ ಕೇಂದ್ರ ಸರ್ಕಾರ ಮೊದಲಿಗೆ ದೆಹಲಿಯಲ್ಲಿ 29 ರೂ. ದರದಲ್ಲಿ 10 ಕೆಜಿ ಪ್ಯಾಕೆಟ್ ಭಾರತ್ ಅಕ್ಕಿ ಬಿಡುಗಡೆ ಮಾಡಿತ್ತು. ನಂತರ ಮೊಬೈಲ್ ವಾಹನಗಳ ಮೂಲಕ ದೇಶಾದ್ಯಂತ ಹಂಚಿತು.

ಕ್ರಮೇಣ, ಭಾರತ್ ಅಕ್ಕಿ ಜತೆಗೆ ಆಯಾ ರಾಜ್ಯ ಮತ್ತು ಪ್ರದೇಶವಾರು ಬೇಡಿಕೆಗೆ ತಕ್ಕಂತೆ ಕಡಿಮೆ ಬೆಲೆಯಲ್ಲಿ ಭಾರತ್ ಬೇಳೆ, ಭಾರತ್ ಗೋಧಿ, ಭಾರತ್ ಹಿಟ್ಟು ವಿತರಣೆ ಆರಂಭಿಸಿದೆ.

ದೇಶದ ಪ್ರಮುಖ ನಗರಗಳು ಹಾಗೂ ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆ ಗಗನಮುಖಿ ಆಗುತ್ತಿದ್ದಂತೆಯೇ ಕೆಜಿಗೆ 35 ರೂ. ದರದಲ್ಲಿ ಈರುಳ್ಳಿ ಪೂರೈಸಿ ಗ್ರಾಹಕರ ಕೈಗಿಟ್ಟಿತು. ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬದ ದಿನಗಳಲ್ಲಿ ದೆಹಲಿ, ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ಈರುಳ್ಳಿ ಜತೆಗೆ “ಭಾರತ್ ಬ್ರ್ಯಾಂಡ್” ಅಡಿ ಕಡಿಮೆ ಬೆಲೆಗೆ ಆಹಾರೋತ್ಪನ್ನ ಪೂರೈಸಲಾಗಿತ್ತು.

ಭಾರತ್ ಬ್ರ್ಯಾಂಡ್ ಅಡಿ ಕಡಿಮೆ ಬೆಲೆಗೆ ವಿವಿಧ ಉತ್ಪನ್ನ

ಭಾರತ್ ಅಕ್ಕಿ, ಭಾರತ್ ಬೇಳೆ, ಭಾರತ್ ಗೋಧಿ ಹಿಟ್ಟು, ಅಕ್ಕಿ ಹಿಟ್ಟು ಹೀಗೆ ಅಗತ್ಯ ಆಹಾರ ಉತ್ಪನ್ನಗಳನ್ನು ಅತ್ಯಂತ ಕಡಿಮೆ ಬೆಲೆಗೆ ಮೊಬೈಲ್ ವಾಹನಗಳಲ್ಲಿ ವಿತರಿಸಲಾಗುತ್ತಿದೆ.

ರಾಜ್ಯದಲ್ಲಿ ಬೆಂಗಳೂರು ಬಳಿಕ ಈಗ ಚೋಟಾ ಮುಂಬೈ ಎಂದೇ ಖ್ಯಾತಿಯಾದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸಹ ಭಾರತ್ ಬ್ರ್ಯಾಂಡ್ ಅಡಿ ನೇರ ಗ್ರಾಹಕರಿಗೆ ಆಹಾರೋತ್ಪನ್ನ ವಿತರಿಸಲು ಕೇಂದ್ರ ಆಹಾರ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಕ್ರಮ ಕೈಗೊಂಡಿದ್ದಾರೆ.

ಭಾರತ್ ಬ್ರ್ಯಾಂಡ್ ಅಕ್ಕಿ ಮಾರಾಟ ಎಲ್ಲಿ?

ಹುಬ್ಬಳ್ಳಿ ಮೂರುಸಾವಿರ ಮಠದ ಶಾಲಾ ಆವರಣದಲ್ಲಿ ಇಂದು ಬೆಳಗ್ಗೆ ಕಡಿಮೆ ಬೆಲೆಯಲ್ಲಿ ಪೂರೈಸುವ “ಭಾರತ್ ಬ್ರ್ಯಾಂಡ್” ಆಹಾರ ಉತ್ಪನ್ನಗಳ ವಿತರಣೆಗೆ ಚಾಲನೆ ನೀಡಲಾಗುತ್ತಿದ್ದು, ಜನಸಾಮಾನ್ಯರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಚಿವ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಭಾರತ್ ಅಕ್ಕಿಗಾಗಿ ಮುಗಿಬಿದ್ದ ಜನ: ಕೆಲವೇ ಕ್ಷಣಗಳಲ್ಲಿ ಒಂದು ಲಾರಿ ಲೋಡ್ ಖಾಲಿ

ಕೆಲವು ದಿನಗಳ ಹಿಂದಷ್ಟೇ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಡಿ ಅಗತ್ಯವಸ್ತುಗಳನ್ನು ಮಾರಾಟ ಮಾಡಲಾಗಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್