AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಅಧಿಕಾರ ತ್ಯಾಗ ಮಾಡಬೇಕಾದರೆ ಕಣ್ಣೀರು ಹಾಕಿದ್ದು ಯಾಕೆ ಅಂತ ನಮಗೆ ಗೊತ್ತಿದೆ; ಡಿ.ಕೆ.ಶಿವಕುಮಾರ್ ವಾಗ್ದಾಳಿ

ಭ್ರಷ್ಟಾಚಾರ ಬಗ್ಗೆ ಅವರ ಪಕ್ಷದ ಶಾಸಕ ಬೆಲ್ಲದ್ ಅವರೇ ಹೇಳಿದ್ದಾರೆ. ಅವರನ್ನ ನಂಬಲೇಬೇಕು ಅಲ್ವಾ? ಎಂದು ಪ್ರಶ್ನಿಸಿದ ಡಿ.ಕೆ.ಶಿವಕುಮಾರ್, ಅವರಿಗೆ ಅವರ ಪಕ್ಷದ ಆಂತರಿಕ ವಿಚಾರ ಗೊತ್ತಿರುತ್ತದೆ.

ಸಿಎಂ ಅಧಿಕಾರ ತ್ಯಾಗ ಮಾಡಬೇಕಾದರೆ ಕಣ್ಣೀರು ಹಾಕಿದ್ದು ಯಾಕೆ ಅಂತ ನಮಗೆ ಗೊತ್ತಿದೆ; ಡಿ.ಕೆ.ಶಿವಕುಮಾರ್ ವಾಗ್ದಾಳಿ
ಡಿ.ಕೆ.ಶಿವಕುಮಾರ್
TV9 Web
| Edited By: |

Updated on: Aug 29, 2021 | 11:59 AM

Share

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಗುಂಡಿಗಳ ನಗರ ಎಂದು ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar), ಅಡುಗೆ ಸಿಲಿಂಡರ್ ದರ 800-900 ರೂಪಾಯಿ ಆಗಿದೆ. ಬಿಜೆಪಿ ಹುಬ್ಬಳ್ಳಿ-ಧಾರವಾಡದಲ್ಲಿ ನೀಡಿದ್ದ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ಬಿಜೆಪಿ ಪ್ರಣಾಳಿಕೆ ಕೇವಲ ಕಮರ್ಷಿಯಲ್ ಆಗಿದೆ. ಬಿಜೆಪಿ ಮತದಾರರ ನಂಬಿಕೆ ಉಳಿಸಿಕೊಂಡಿಲ್ಲ. ಹುಬ್ಬಳ್ಳಿ ಅಭಿವೃದ್ಧಿಯಾಗಬೇಕು ಎಂಬುದು ನಮ್ಮ ಉದ್ದೇಶ ಅಂತ ಅಭಿಪ್ರಾಯಪಟ್ಟರು.

ಕೊರೊನಾ ಸಮಯದಲ್ಲಿ ಬೆಡ್ಗಳಿಗಾಗಿ ಜನರನ್ನು ಕ್ಯೂ ನಿಲ್ಲಿಸಿದ್ದರು. ಆ್ಯಂಬುಲೆನ್ಸ್​ಗೂ ಕ್ಯೂ ನಿಲ್ಲಿಸಿದ್ರು. ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ. ಅದಕ್ಕೆ ಸಿಎಂ ಬದಲಾವಣೆ ಆಯ್ತು. ಸಿಎಂ ಅಧಿಕಾರ ತ್ಯಾಗ ಮಾಡಬೇಕಾದರೆ ಕಣ್ಣೀರು ಹಾಕಿದ್ರು. ಅವರು ಯಾಕೆ ಕಣ್ಣೀರು ಹಾಕಿದ್ರು ಎನ್ನುವುದು ನಮಗೆ ಗೊತ್ತಿದೆ ಅಂತ ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರ ಬಗ್ಗೆ ಅವರ ಪಕ್ಷದ ಶಾಸಕ ಬೆಲ್ಲದ್ ಅವರೇ ಹೇಳಿದ್ದಾರೆ. ಅವರನ್ನ ನಂಬಲೇಬೇಕು ಅಲ್ವಾ? ಎಂದು ಪ್ರಶ್ನಿಸಿದ ಡಿ.ಕೆ.ಶಿವಕುಮಾರ್, ಅವರಿಗೆ ಅವರ ಪಕ್ಷದ ಆಂತರಿಕ ವಿಚಾರ ಗೊತ್ತಿರುತ್ತದೆ. ಸಿಎಂ ಆದ ಮೇಲೆ ಹುಬ್ಬಳ್ಳಿಯಲ್ಲಿ ಬೊಮ್ಮಾಯಿ ಮನೆ ಬೀದಿ ರಸ್ತೆ ರಿಪೇರಿ ನಡಿಯುತ್ತಿದೆ. ಅವರು 15 ವರ್ಷದಲ್ಲಿ ಪಾಲಿಕೆಯಲ್ಲಿ ಅಧಿಕಾರದಲ್ಲಿದ್ದರೂ ಏನು ಮಾಡಿಲ್ಲ ಎನ್ನುವುದಕ್ಕೆ ಇದೇ ಸ್ಪಷ್ಟ ಉದಾಹರಣೆ. ಕೇಂದ್ರ 20 ಲಕ್ಷ ಕೋಟಿ ಪ್ಯಾಕೆಜ್ ಬಿಡುಗಡೆ ಮಾಡಿದ್ದೀವಿ ಅಂತ ಹೇಳಿದ್ದರು. ಆ ಹಣ ಯಾರು ಯಾರಿಗೆ ತಲುಪಿದೆ ಎನ್ನುವ ಪಟ್ಟಿಯನ್ನು ಬಿಡುಗಡೆ ಮಾಡಲಿ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕೊವಿಡ್ ಹಿನ್ನೆಲೆ ನಾವು ಯಾವುದೇ ಬಹಿರಂಗ ಸಭೆ ಮಾಡುತ್ತಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರ ನುಡಿದಂತೆ ನಡೆದಿದೆ. ಕಳೆದ 15 ವರ್ಷಗಳಿಂದ ಪಾಲಿಕೆ ಆಡಳಿತ ನಡೆಸುತ್ತಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಏನು ಬದಲಾವಣೆ ತಂದಿದ್ದಾರೆ? ಬಿಜೆಪಿ ಕೇವಲ ಸುಳ್ಳಿನ ಸರಮಾಲೆಯನ್ನ ಕಟ್ಟಿದ್ದಾರೆ. ಮನೆಮನೆಗೆ ಗ್ಯಾಸ್ ಪೈಪ್ ಲೈನ್ ಅಳವಡಿಸುತ್ತೀವೆ ಎಂದಿದ್ದರು. ಆದರೆ ಈವರೆಗೂ ಆ ಯೋಜನೆ ಪೂರ್ಣಗೊಂಡಿಲ್ಲ ಅಂತ ಅಭಿಪ್ರಾಯಪಟ್ಟರು.

ಇದನ್ನೂ ಓದಿ

ಕೊರೊನಾ 3ನೇ ಅಲೆಯ ಭೀತಿ; ಮುಂಜಾಗ್ರತೆ ವಹಿಸಲು ಗೃಹ ಇಲಾಖೆಯಿಂದ ರಾಜ್ಯಗಳಿಗೆ ಪತ್ರ

ಕಾಬೂಲ್​ನಲ್ಲಿ ಮತ್ತೊಂದು ಭೀಕರ ದಾಳಿಗೆ ಸಜ್ಜಾದ ಉಗ್ರರು; ಡ್ರೋನ್​ ದಾಳಿ ಮುಗಿದಿಲ್ಲ, ಯಾರನ್ನೂ ಬಿಡುವುದಿಲ್ಲ ಎಂದ ಅಮೆರಿಕಾ

(BJP government has not fulfilled any of promises in Hubli Dharwad said DK Shivakumar)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?