AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಅಧಿಕಾರ ತ್ಯಾಗ ಮಾಡಬೇಕಾದರೆ ಕಣ್ಣೀರು ಹಾಕಿದ್ದು ಯಾಕೆ ಅಂತ ನಮಗೆ ಗೊತ್ತಿದೆ; ಡಿ.ಕೆ.ಶಿವಕುಮಾರ್ ವಾಗ್ದಾಳಿ

ಭ್ರಷ್ಟಾಚಾರ ಬಗ್ಗೆ ಅವರ ಪಕ್ಷದ ಶಾಸಕ ಬೆಲ್ಲದ್ ಅವರೇ ಹೇಳಿದ್ದಾರೆ. ಅವರನ್ನ ನಂಬಲೇಬೇಕು ಅಲ್ವಾ? ಎಂದು ಪ್ರಶ್ನಿಸಿದ ಡಿ.ಕೆ.ಶಿವಕುಮಾರ್, ಅವರಿಗೆ ಅವರ ಪಕ್ಷದ ಆಂತರಿಕ ವಿಚಾರ ಗೊತ್ತಿರುತ್ತದೆ.

ಸಿಎಂ ಅಧಿಕಾರ ತ್ಯಾಗ ಮಾಡಬೇಕಾದರೆ ಕಣ್ಣೀರು ಹಾಕಿದ್ದು ಯಾಕೆ ಅಂತ ನಮಗೆ ಗೊತ್ತಿದೆ; ಡಿ.ಕೆ.ಶಿವಕುಮಾರ್ ವಾಗ್ದಾಳಿ
ಡಿ.ಕೆ.ಶಿವಕುಮಾರ್
TV9 Web
| Updated By: sandhya thejappa|

Updated on: Aug 29, 2021 | 11:59 AM

Share

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಗುಂಡಿಗಳ ನಗರ ಎಂದು ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar), ಅಡುಗೆ ಸಿಲಿಂಡರ್ ದರ 800-900 ರೂಪಾಯಿ ಆಗಿದೆ. ಬಿಜೆಪಿ ಹುಬ್ಬಳ್ಳಿ-ಧಾರವಾಡದಲ್ಲಿ ನೀಡಿದ್ದ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ಬಿಜೆಪಿ ಪ್ರಣಾಳಿಕೆ ಕೇವಲ ಕಮರ್ಷಿಯಲ್ ಆಗಿದೆ. ಬಿಜೆಪಿ ಮತದಾರರ ನಂಬಿಕೆ ಉಳಿಸಿಕೊಂಡಿಲ್ಲ. ಹುಬ್ಬಳ್ಳಿ ಅಭಿವೃದ್ಧಿಯಾಗಬೇಕು ಎಂಬುದು ನಮ್ಮ ಉದ್ದೇಶ ಅಂತ ಅಭಿಪ್ರಾಯಪಟ್ಟರು.

ಕೊರೊನಾ ಸಮಯದಲ್ಲಿ ಬೆಡ್ಗಳಿಗಾಗಿ ಜನರನ್ನು ಕ್ಯೂ ನಿಲ್ಲಿಸಿದ್ದರು. ಆ್ಯಂಬುಲೆನ್ಸ್​ಗೂ ಕ್ಯೂ ನಿಲ್ಲಿಸಿದ್ರು. ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ. ಅದಕ್ಕೆ ಸಿಎಂ ಬದಲಾವಣೆ ಆಯ್ತು. ಸಿಎಂ ಅಧಿಕಾರ ತ್ಯಾಗ ಮಾಡಬೇಕಾದರೆ ಕಣ್ಣೀರು ಹಾಕಿದ್ರು. ಅವರು ಯಾಕೆ ಕಣ್ಣೀರು ಹಾಕಿದ್ರು ಎನ್ನುವುದು ನಮಗೆ ಗೊತ್ತಿದೆ ಅಂತ ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರ ಬಗ್ಗೆ ಅವರ ಪಕ್ಷದ ಶಾಸಕ ಬೆಲ್ಲದ್ ಅವರೇ ಹೇಳಿದ್ದಾರೆ. ಅವರನ್ನ ನಂಬಲೇಬೇಕು ಅಲ್ವಾ? ಎಂದು ಪ್ರಶ್ನಿಸಿದ ಡಿ.ಕೆ.ಶಿವಕುಮಾರ್, ಅವರಿಗೆ ಅವರ ಪಕ್ಷದ ಆಂತರಿಕ ವಿಚಾರ ಗೊತ್ತಿರುತ್ತದೆ. ಸಿಎಂ ಆದ ಮೇಲೆ ಹುಬ್ಬಳ್ಳಿಯಲ್ಲಿ ಬೊಮ್ಮಾಯಿ ಮನೆ ಬೀದಿ ರಸ್ತೆ ರಿಪೇರಿ ನಡಿಯುತ್ತಿದೆ. ಅವರು 15 ವರ್ಷದಲ್ಲಿ ಪಾಲಿಕೆಯಲ್ಲಿ ಅಧಿಕಾರದಲ್ಲಿದ್ದರೂ ಏನು ಮಾಡಿಲ್ಲ ಎನ್ನುವುದಕ್ಕೆ ಇದೇ ಸ್ಪಷ್ಟ ಉದಾಹರಣೆ. ಕೇಂದ್ರ 20 ಲಕ್ಷ ಕೋಟಿ ಪ್ಯಾಕೆಜ್ ಬಿಡುಗಡೆ ಮಾಡಿದ್ದೀವಿ ಅಂತ ಹೇಳಿದ್ದರು. ಆ ಹಣ ಯಾರು ಯಾರಿಗೆ ತಲುಪಿದೆ ಎನ್ನುವ ಪಟ್ಟಿಯನ್ನು ಬಿಡುಗಡೆ ಮಾಡಲಿ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕೊವಿಡ್ ಹಿನ್ನೆಲೆ ನಾವು ಯಾವುದೇ ಬಹಿರಂಗ ಸಭೆ ಮಾಡುತ್ತಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರ ನುಡಿದಂತೆ ನಡೆದಿದೆ. ಕಳೆದ 15 ವರ್ಷಗಳಿಂದ ಪಾಲಿಕೆ ಆಡಳಿತ ನಡೆಸುತ್ತಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಏನು ಬದಲಾವಣೆ ತಂದಿದ್ದಾರೆ? ಬಿಜೆಪಿ ಕೇವಲ ಸುಳ್ಳಿನ ಸರಮಾಲೆಯನ್ನ ಕಟ್ಟಿದ್ದಾರೆ. ಮನೆಮನೆಗೆ ಗ್ಯಾಸ್ ಪೈಪ್ ಲೈನ್ ಅಳವಡಿಸುತ್ತೀವೆ ಎಂದಿದ್ದರು. ಆದರೆ ಈವರೆಗೂ ಆ ಯೋಜನೆ ಪೂರ್ಣಗೊಂಡಿಲ್ಲ ಅಂತ ಅಭಿಪ್ರಾಯಪಟ್ಟರು.

ಇದನ್ನೂ ಓದಿ

ಕೊರೊನಾ 3ನೇ ಅಲೆಯ ಭೀತಿ; ಮುಂಜಾಗ್ರತೆ ವಹಿಸಲು ಗೃಹ ಇಲಾಖೆಯಿಂದ ರಾಜ್ಯಗಳಿಗೆ ಪತ್ರ

ಕಾಬೂಲ್​ನಲ್ಲಿ ಮತ್ತೊಂದು ಭೀಕರ ದಾಳಿಗೆ ಸಜ್ಜಾದ ಉಗ್ರರು; ಡ್ರೋನ್​ ದಾಳಿ ಮುಗಿದಿಲ್ಲ, ಯಾರನ್ನೂ ಬಿಡುವುದಿಲ್ಲ ಎಂದ ಅಮೆರಿಕಾ

(BJP government has not fulfilled any of promises in Hubli Dharwad said DK Shivakumar)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ