AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಕಾರ್ಯಕರ್ತರಿಗೆ 150 ಸೀಟ್​ ಗೆಲ್ಲುವ ಟಾಸ್ಕ್​ ಕೊಟ್ಟ ಅರಣು ಸಿಂಗ್​

ಕರ್ನಾಟಕದಲ್ಲಿ‌ ಬಿಜೆಪಿ 150 ಸ್ಥಾನದೊಂದಿಗೆ ಅಧಿಕಾರಕ್ಕೆ ಬರತ್ತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಹೇಳಿದ್ದಾರೆ.

ಹುಬ್ಬಳ್ಳಿ: ಕಾರ್ಯಕರ್ತರಿಗೆ 150 ಸೀಟ್​ ಗೆಲ್ಲುವ ಟಾಸ್ಕ್​ ಕೊಟ್ಟ ಅರಣು ಸಿಂಗ್​
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್
TV9 Web
| Edited By: |

Updated on: Oct 16, 2022 | 4:01 PM

Share

ಧಾರವಾಡ: ಧಾರವಾಡ ಪವಿತ್ರ ಭೂಮಿಯಾಗಿದ್ದು, ದ. ರಾ ಬೇಂದ್ರೆ, ಗಿರೀಶ ಕಾರ್ನಾಡ, ಚಂದ್ರಶೇಖರ ಕಂಬಾರ, ಗಂಗೂಬಾಯಿ ಹಾನಗಲ್ಲ, ಬಸವರಾಜ ರಾಜಗುರುಗಳಂತಹ ಮಹಾನ್​​ ಸಾಹಿತಿಗಳು, ಸಂಗೀತ ವಿದ್ವಾಂಸರು ಜನಿಸಿದ ಭೂಮಿ ಎಂದು ಬಿಜೆಪಿ (BJP) ರಾಜ್ಯ ಉಸ್ತುವಾರಿ ಅರುಣ ಸಿಂಗ್​ (Arun singh) ಹೆಮ್ಮೆ ವ್ಯಕ್ತಪಡಿಸಿದರು. ಇಂದು (ಅ.16) ಹುಬ್ಬಳ್ಳಿಯಲ್ಲಿ (Hubli) ನಡೆದ ಪಕ್ಷದ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು ವಾಣಿಜ್ಯ ನಗರಿ ಹುಬ್ಬಳ್ಳಿ ಉದ್ಯಮ ಕ್ಷೇತ್ರಕ್ಕೆ ಹೆಸರುವಾಸಿಯಾಗಿದೆ. ಜನಸಂಘದ ಕಾರ್ಯ ಇಲ್ಲಿಂದ ಆರಂಭಗೊಂಡಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.

ಬಿಜೆಪಿ ಅಧಿಕಾರಕ್ಕೆ ಬರಲಿ ಎಂದು ಇಂದು ಸ್ವಾಮೀಜಿ ಆರ್ಶಿವದಿಸಿದ್ದಾರೆ. ಇವಾಗ ಕಾಲ ಬದಲಾಗಿದ್ದು, ಒಮ್ಮೆ ಕಾಂಗ್ರೆಸ್, ಒಮ್ಮೆ ಬಿಜೆಪಿ ಅಲ್ಲ. ಈಗ ಏನೇ ಇದ್ದರೂ ಬಿಜೆಪಿ. ಪಕ್ಕದ ಗೋವಾದಲ್ಲಿ ಮೂರನೇ ಬಾರಿ ಬಿಜೆಪಿ ಅಧಿಕಾರ ನಡೆಸುತ್ತಿದೆ.‌ ಮಣಿಪುರದಲ್ಲಿ , ಉತ್ತರಖಾಂದಲ್ಲಿ ಬಿಜೆಪಿ ಸರಕಾರ ಗದ್ದುಗೆ ಏರಿದೆ. ಕಾಂಗ್ರೆಸ್ ನೆಲಕಚ್ಚಿದೆ. ಉತ್ತರ ಪ್ರದೇಶದಲ್ಲಿ ಬುಲ್ಡೋಜರ ಬಾಬಾ ಸಿಎಂ ಯೋಗಿ ಆದಿತ್ಯನಾಥ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ‌ ಬಿಜೆಪಿ 150 ಸ್ಥಾನದೊಂದಿಗೆ ಅಧಿಕಾರಕ್ಕೆ ಬರತ್ತೆ. ಮೋದಿ ನೇತೃತ್ವದಲ್ಲಿ ಬಿಜೆಪಿ ಅರಳುತ್ತಿದೆ. ಹಿಂದೆ ಹುಬ್ಬಳ್ಳಿಯ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಬಿಜೆಪಿ ಅರಳಿತ್ತು. ಈಗ ಮತ್ತೆ 150 ಸ್ಥಾನಗಳಲ್ಲಿ ಪೂರ್ವ ವಿಧಾನಸಭಾ ಕ್ಷೇತ್ರವೂ ಒಂದಾಗಲಿದೆ. ಭೂತ್ ಕಾರ್ಯಕರ್ತರು ಹೆಚ್ಚು ಹೆಚ್ಚು ಕೆಲಸ ಮಾಡಿ. ಪಕ್ಷದ ಗೆಲುವಿಗೆ ಕಾರಣರಾಗಬೇಕು ಎಂದು ಮನವಿಮಾಡಿರು.

ಇಂದಿನಿಂದ ಕೆಲಸ ಮಾಡುವ ಸಂಕಲ್ಪ ಮಾಡಬೇಕು. ಹಗಲು ರಾತ್ರಿ ಕೆಲಸ ಮಾಡಬೇಕು. ಬೊಮ್ಮಾಯಿ, ಮೋದಿ ಮಾಡಿರುವ ಕೆಲಸದ ಕುರಿತು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು. ಕಾಂಗ್ರೆಸ್ ಜನರನ್ನು ಮರಳು ಮಾಡುವ ಕೆಲಸ ಮಾಡುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿಪಕ್ಷನಾಯಕ ಸಿದ್ದರಾನಯ್ಯನವರನ್ನು ಒಂದು ಗೂಡಿಸಲು ಕಾಂಗ್ರೆಸ್​ನವರು ಒದ್ದಾಡುತ್ತಿದ್ದಾರೆ. ಅವರಿಗೆ ಅದೇ ಒಂದು ದೊಡ್ಡ ಕೆಲಸವಾಗಿದೆ. ಅವರಿಬ್ಬರು ಒಂದಾಗಲು ಸಾಧ್ಯವಿಲ್ಲ. ಅವರಿಬ್ಬರನ್ನು ಫೆವಿಕೋಲ್ ಹಾಕಿ‌ ಒಂದುಗೂಡಿಸಿದರೂ ಸಾಧ್ಯವಿಲ್ಲ ಎಂದು ವಾಗ್ದಾಳಿ ಮಾಡಿದರು.

ಕಾಂಗ್ರೆಸ್ ‌ಮನೆಯಲ್ಲಿ ರಾಹುಲ್ ಗಾಂಧಿ, ಮೋದಿ‌ ಬಗ್ಗೆ ಕೇಳಿದರೆ ಮೋದಿ ಮೋದಿ ಅಂತಾರೆ. ಬೊಮ್ಮಾಯಿ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ. ಅದಕ್ಕೆ ಅಭಿನಂದನೆ ಸಲ್ಲಿಸಬೇಕು. ಕಾಂಗ್ರೆಸ್​ ಪಕ್ಷ ಜನರನ್ನು ಮರುಳು ಮಾಡಲು ಯತ್ನಿಸುತ್ತಿದೆ ಎಂದು ಕಾಲೆಳೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು