AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ತೀವ್ರ ವಿರೋಧ: ಹೈಕಮಾಂಡ್​​ಗೆ ರವಾನೆಯಾದ ಪತ್ರದಲ್ಲಿರುವ 10 ಅಂಶಗಳಿವು

ವಿಧಾನ ಪರಿಷತ್ ಸಭಾಪತಿಯೂ ಆಗಿರುವ ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಅವರ ಬಿಜೆಪಿ ಸೇರ್ಪಡೆ ಪಕ್ಷದ ಹಿರಿಯ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ತೀವ್ರ ವಿರೋಧ: ಹೈಕಮಾಂಡ್​​ಗೆ ರವಾನೆಯಾದ ಪತ್ರದಲ್ಲಿರುವ 10 ಅಂಶಗಳಿವು
ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
TV9 Web
| Edited By: |

Updated on: Mar 20, 2022 | 10:48 AM

Share

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿಯೂ ಆಗಿರುವ ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ (Basavaraj Horatti) ಅವರ ಬಿಜೆಪಿ ಸೇರ್ಪಡೆ ಪಕ್ಷದ ಹಿರಿಯ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೊರಟ್ಟಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದನ್ನು ಆಕ್ಷೇಪಿಸಿರುವ ಅವರು, ತಮ್ಮ ನಿರ್ಧಾರಕ್ಕೆ 10 ಕಾರಣಗಳನ್ನೂ ನೀಡಿದ್ದಾರೆ. ಈ ಕುರಿತು ತಮ್ಮ ಆಕ್ಷೇಪ ಪತ್ರವನ್ನು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಹಲವು ನಾಯಕರ ಸಹಿ ಇರುವ ಪತ್ರವೊಂದು ರವಾನೆಯಾಗಿದೆ. ಪತ್ರದ ಜೊತೆಗೆ ಹಲವು ದಾಖಲೆಗಳನ್ನೂ ಈ ಭಾಗದ ಬಿಜೆಪಿ ನಾಯಕರು ಹೈಕಮಾಂಡ್​ಗೆ ಸಲ್ಲಿಸಿದ್ದಾರೆ. ಯಾವುದೇ ಕಾರಣಕ್ಕೆ ಹೊರಟ್ಟಿ ಅವರನ್ನು ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಬಾರದೆಂದು ಮನವಿ ಮಾಡಿದ್ದಾರೆ.

ಪತ್ರದಲ್ಲಿ ಉಲ್ಲೇಖವಾಗಿರುವ ಪ್ರಮುಖ ಅಂಶಗಳಿವು.

  1. ಬಸವರಾಜ್ ಹೊರಟ್ಟಿಗೆ ಈಗಾಗಲೇ 76 ವರ್ಷ ಆಗಿದೆ. ಪಕ್ಷದ ನಿಯಮದಂತೆ ಇವರಿಗೆ ಟಿಕೆಟ್ ನೀಡಲು ಅವಕಾಶವಿಲ್ಲ.
  2. ಹೊರಟ್ಟಿ ಒಟ್ಟಿಗೆ ಎರಡೆರೆಡು ವೇತನ ಪಡೆದಿರುವ ಆರೋಪ ಹೊಂದಿದ್ದಾರೆ. 1980ರಲ್ಲಿ ವಿಧಾನ ಪರಿಷತ್ಸ
  3. ಸದಸ್ಯರಾಗಿದ್ದರು. ಆದರೆ 1999ರವರೆಗೆ ಲ್ಯಾಮಿಂಗ್ಟನ್ ಶಾಲೆಯಲ್ಲಿ ದೈಹಿಕ ಶಿಕ್ಷಕರ ಹುದ್ದೆ ಉಳಿಸಿಕೊಂಡು ವೇತನ ಪಡೆದಿದ್ದರು.
  4. ಧಾರವಾಡದಲ್ಲಿ ಎಸ್​ಟಿ ಸಮಾಜಕ್ಕೆ ಸೇರಿದ ಸರ್ವೋದಯ ಶಿಕ್ಷಣ ಸಂಸ್ಥೆ ಆಸ್ತಿ ಕಬಳಿಸಿದ ಆರೋಪ ಇವರ ಮೇಲಿದೆ
  5. ಶಿಕ್ಷಣ ಸಂಸ್ಥೆ ವಿಚಾರದಲ್ಲಿ ಬಸವರಾಜ ಹೊರಟ್ಟಿ ಅವರ ಮೇಲೆ ಎಫ್​ಐಆರ್ ದಾಖಲಾಗಿದೆ
  6. ಹಿಂದುತ್ವದ ವಿರುದ್ಧದ ಚಳವಳಿಯಲ್ಲಿ ಕಾಂಗ್ರೆಸ್ ಜೊತೆ ಹೊರಟ್ಟಿ ಗುರುತಿಸಿಕೊಂಡಿದ್ದರು
  7. ಬಿಜೆಪಿ ಪಕ್ಷದ ಸಿದ್ದಾಂತಗಳನ್ನು ಹೊರಟ್ಟಿ ಅವರು ಈವರೆಗೆ ಸಂಪೂರ್ಣವಾಗಿ ಒಪ್ಪಿಂಡಿಕೊಂಡಿಲ್ಲ
  8. ಹಾವೇರಿ, ಧಾರವಾಡ,, ಗದಗ, ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿದೆ
  9. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ 17 ಶಾಸಕರು, 3 ಸಂಸತ್ ಸದಸ್ಯರು, 4 ವಿಧಾನ ಪರಿಷತ್ ಸದಸ್ಯರು, ಓರ್ವ ಸಭಾಪತಿ, 3 ಕ್ಯಾಬಿನೆಟ್ ಸಚಿವರು, ಓರ್ವ ಕೇಂದ್ರ ಸಚಿವರು, ರಾಜ್ಯದ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳು ಇದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಒಬ್ಬರೆ ಒಬ್ಬ ಶಾಸಕರು ಇಲ್ಲ.
  10. ಬಸವರಾಜ್ ಹೊರಟ್ಟಿ ಒಬ್ಬ ಕಳಂಕಿತ ವ್ಯಕ್ತಿ, ಇಂತಹ ಕಳಂಕಿತ ವ್ಯಕ್ತಿಗೆ ಟಿಕೆಟ್ ಕೊಟ್ಟು ಸಾಧಿಸುವುದೇನಿದೆ?

ಇದನ್ನೂ ಓದಿ: ತಪ್ಪು ಮಾಡದವರು ಬಲಿಪಶು ಆಗುವುದು ಬೇಡ: ಬಸವರಾಜ ಹೊರಟ್ಟಿ

ಇದನ್ನೂ ಓದಿ: ಸಭಾಪತಿ ಹೊರಟ್ಟಿ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಿಸಿದ ಇನ್​ಸ್ಪೆಕ್ಟರ್ ಅಮಾನತು: ಎಸ್​ಪಿ ಅಮಾನತಿಗೆ ಸಲೀಂ ಅಹ್ಮದ್ ಆಗ್ರಹ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು