AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ಸರಿಮಾಡಿಕೊಳ್ಳಿ: ಶೆಟ್ಟರ್​ ವಿರುದ್ಧ ಮಹೇಶ್​ ಟೆಂಗಿನಕಾಯಿ ವಾಗ್ದಾಳಿ

ಜಗದೀಶ್​ ಶೆಟ್ಟರ್​ ಅವರಿಗೆ 30 ವರ್ಷ ಬಿಜೆಪಿ ಎಲ್ಲ ಕೊಟ್ಟಿದೆ. ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ನೀವು ಸರಿಮಾಡಿಕೊಳ್ಳಿ. ರಾಜಕೀಯಕ್ಕೆ ಸಮುದಾಯವನ್ನು ಎಳೆದು ತರಬಾರದು ಎಂದು ಶಾಸಕ ಮಹೇಶ್​ ಟೆಂಗಿನಕಾಯಿ ಹೇಳಿದರು.

ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ಸರಿಮಾಡಿಕೊಳ್ಳಿ: ಶೆಟ್ಟರ್​ ವಿರುದ್ಧ ಮಹೇಶ್​ ಟೆಂಗಿನಕಾಯಿ ವಾಗ್ದಾಳಿ
ಶಾಸಕ ಮಹೇಶ್​ ಟೆಂಗಿನಕಾಯಿ
ಶಿವಕುಮಾರ್ ಪತ್ತಾರ್
| Edited By: |

Updated on: Sep 18, 2023 | 11:33 AM

Share

ಹುಬ್ಬಳ್ಳಿ ಸೆ.18: ಬಿಜೆಪಿಯವರು (BJP) ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್​​ ಶೆಟ್ಟರ್ (Jagadish Shettar) ​ರವಿವಾರ ಕಮಲ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಹೇಶ್​ ಟೆಂಗಿನಕಾಯಿ (Mahesh Tenginkai) ಮಾತನಾಡಿ ಬಿಜೆಪಿಯಲ್ಲಿ ಟಿಕೇಟ್ ಮಾರಟ ಪದ್ದತಿಯಿಲ್ಲ. ಮಾಜಿ ಸಿಎಂ ಹೇಗೆ ಟಿಕೆಟ್​ ತೆಗೆದುಕೊಂಡಿದ್ದರು, ಹೇಗೆ ಟಿಕೆಟ್ ಕೊಟ್ಟಿದ್ದರು ಅಂತ ಎಲ್ಲ ಗೊತ್ತಿದೆ ಎಂದು ಪರೋಕ್ಷವಾಗಿ ಕಾಂಗ್ರೆಸ್​ (Congress) ಎಂಎಲ್​ಸಿ ಜಗದೀಶ್ ಶೆಟ್ಟರ್​ಗೆ ಕುಟುಕಿದರು.

ಬಿಜೆಪಿಯಲ್ಲಿ ಲಿಂಗಾಯತ ಸಮುದಾಯದ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಜಗದೀಶ್​ ಶೆಟ್ಟರ್​ ಆರೋಪ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಅತಿ ಹೆಚ್ಚು ಬಾರಿ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಕೊಟ್ಟಿದೆ. ಜಗದೀಶ್​ ಶೆಟ್ಟರ್​ ಅವರಿಗೆ 30 ವರ್ಷ ಬಿಜೆಪಿ ಎಲ್ಲ ಕೊಟ್ಟಿದೆ. ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ನೀವು ಸರಿಮಾಡಿಕೊಳ್ಳಿ. ರಾಜಕೀಯಕ್ಕೆ ಸಮುದಾಯವನ್ನು ಎಳೆದು ತರಬಾರದು ಎಂದು ಹೇಳಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಜಗದೀಶ್​ ಶೆಟ್ಟರ್​ ಗೇಮ್​ ಪ್ಲ್ಯಾನ್​: ಲಿಂಗಾಯತ ನಾಯಕರೇ ಟಾರ್ಗೆಟ್

ಕಾಂಗ್ರೆಸ್​ನಲ್ಲಿ ಜಗದೀಶ್​ ಶೆಟ್ಟರ್ ಅವರನ್ನು ಗುರುತಿಸುತ್ತಿಲ್ಲ. ಅದಕ್ಕೆ ಅವರಿಗೆ ಕಷ್ಟ ಆಗಿದೆ. ಹೀಗಾಗಿ ಅವರು ಮಾಧ್ಯಮಗಳಿಗೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಎಮ್​​ಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ಹಣ ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಬಿಜೆಪಿಯಲ್ಲಿ ಟಿಕೆಟ್​ ಮಾರಾಟ ಪದ್ಧತಿ ಇಲ್ಲ. ಚೈತ್ರಾ ಕುಂದಾಪುರ ಕೇಸ್​ಗೂ ಬಿಜೆಪಿಗೂ ಯಾವ ಸಂಬಂಧ ಇಲ್ಲ. ಕೆಲವರು ತಮ್ಮ ಚಟಕ್ಕೆ ಈ ರೀತಿ ಮಾಡಿದರೇ ಅದಕ್ಕೆ ಬಿಜೆಪಿ ಉತ್ತರ ನೀಡುವುದಿಲ್ಲ. ಇದಕ್ಕೆ ಬಿಜೆಪಿ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ