AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ, ಅಯ್ಯಪ್ಪ, ಶಿವ-ಪಾರ್ವತಿ ಬಗ್ಗೆ ಲೇವಡಿ: ವಿವಾದದ ಕಿಡಿ ಹೊತ್ತಿಸಿದ ಲಲಿತಾ ನಾಯಕ್

ಹೋರಾಟಗಾರ್ತಿ ಬಿ.ಟಿ. ಲಲಿತಾ ನಾಯಕ್ ಅವರು ಮತ್ತೆ ಹಿಂದೂ ದೇವರುಗಳ ಬಗ್ಗೆ ಲೇವಡಿಯಾಗಿ ಮಾತನಾಡಿದ ವಿವಾದಕ್ಕೀಡಾಗಿದ್ದಾರೆ. ಧಾರವಾಡದಲ್ಲಿ ನಡೆದ 'ಧರೆಗೆ ದೊಡ್ಡವರು' ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಬಿ.ಟಿ. ಲಲಿತಾ ನಾಯಕ್ ಅವರು ಗಣೇಶ ಸೇರಿದಂತೆ ಇತರೆ ದೇವರುಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Nov 20, 2024 | 8:46 PM

Share

ಧಾರವಾಡ, (ನವೆಂಬರ್ 20): ಬಿ.ಟಿ. ಲಲಿತಾ ನಾಯಕ್ ಅವರು ಮತ್ತೆ ಹಿಂದೂ ದೇವರುಗಳ ಬಗ್ಗೆ ಮಾತನಾಡಿ ವಿವಾದಕ್ಕೀಡಾಗಿದ್ದಾರೆ. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆದ ‘ಧರೆಗೆ ದೊಡ್ಡವರು’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಣೇಶ, ಶಿವ, ಪಾರ್ವತಿ ಮತ್ತು ಅಯ್ಯಪ್ಪನ ಬಗ್ಗೆ ಲೇವಡಿ ಮಾಡಿದ್ದಾರೆ. ಗಣೇಶ, ಶಿವ, ಪಾರ್ವತಿ ಮತ್ತು ಅಯ್ಯಪ್ಪನ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಅಲ್ಲದೇ  ಭಾರತಾಂಬೆ ದೇವಿ ಪೂಜಿಸೋಣ ಬಾರಾ ಎಂದು ಕುವೆಂಪು ಹೇಳಿರುವುದನ್ನು ತಪ್ಪು ಎಂದಿದ್ದಾರೆ.

ಗಣೇಶ ಅನ್ನೋದು ಒಂದು ಜ್ಞಾನ. ಆ ಜ್ಞಾನಕ್ಕೆ ಒಂದು ಆಕಾರ ಕೊಟ್ಟಿದ್ದಾರೆ. ಅದಕ್ಕೆ ಒಂದು ಸೊಂಡಿಲು, ತಲೆ ಇದೆ. ಈಶ್ವರ ಅನ್ನುವಂತಹ ಅಪ್ಪ ಇದ್ದಾನೆ. ದೇವರು ಯಾರನ್ನಾದರೂ ಕೊಲ್ಲುತ್ತಾನಾ? ಧರೆಯಿಂದ ಆಕಾಶದೆತ್ತರಕ್ಕೆ ಬೆಳೆದವನು ದೇವರು. ಅಣುರೇಣು ತೃಣಕಾಷ್ಠದಲ್ಲಿಯೂ ದೇವರಿದ್ದಾನಂತೆ. ಹಾಗಾದ್ರೆ ಪಾರ್ವತಿಯ ಬಚ್ಚಲು ಮನೆಯಲ್ಲಿ ದೇವರು ಇರೋಲ್ವಾ? ಹುಡುಗ ಅಡ್ಡ ನಿಂತಿದ್ದಾನಂತ ಕೊಂದು ಹೋಗುವವನ್ನು ದೇವರು ಅನ್ನೋದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಅವರೆಲ್ಲ ದೇವರಲ್ಲ, ಮನುಷ್ಯರು. ಆ ಮನುಷ್ಯ ಮಾಡಿರೋ ತಪ್ಪನ್ನು ನಾವು ಮಾಡಬಾರದು. ಅಯ್ಯಪ್ಪ ಭಕ್ತರು ಅಂತಾ ಕೆಲವರು ಬಹಳ ಮಾಡುತ್ತಿರುತ್ತಾರೆ. ಆದರೆ ಅಯ್ಯಪ್ಪ ಕಾಡಿನಲ್ಲಿ ಇಲ್ಲ. ಅಯ್ಯಪ್ಪ ಎಲ್ಲ ಕಡೆ ಅನಾಥವಾಗಿ ಇದ್ದಾನೆ. ಅನೇಕ ಅನಾಥ ಮಕ್ಕಳಿದ್ದಾರೆ. ಅವರಿಗೆ ತಂದೆ-ತಾಯಿ ಇಲ್ಲ. ಅವರನ್ನು ನೋಡಿಕೊಳ್ಳುವ ಕೆಲಸ ಆಗಬೇಕು. ಅದನ್ನು ಬಿಟ್ಟು ಕಾಡಿಗೆ ಹೋಗುವುದಲ್ಲ. ಅಲ್ಲಿ ಕಾಡು ಕಡಿದು ಪುರೋಹಿತಶಾಹಿಗೆ ಅವಕಾಶ ಕೊಟ್ಟಿದ್ದಾರೆ. ಅಲ್ಲೆಲ್ಲ ತಲೆಯ ಮೇಲೆ ಏನೇನೋ ಹೊತ್ತುಕೊಂಡು ಹೋಗ್ತಾರೆ. ಜಯಮಾಲಾ ಏನೋ ಮುಟ್ಟಿದ್ರಂತೆ. ಮಟ್ಟಿದ ಕೂಡಲೇ ಮೈಲಿಗೆ ಆಯ್ತು ಅಂದ್ರು. ಕುಳಿತಿರೋ ಮೂರ್ತಿಗೆ ಯಾರು ಮುಟ್ಟಿದ್ರು ಒಂದೇ ಮುಟ್ಟದಿದ್ದರೂ ಒಂದೇ. ಸಂಕೇತಗಳು ಯಾವತ್ತೂ ಸತ್ಯವಲ್ಲ. ಸಂಕೇತಗಳು ಸಂಕೇತ ಅಷ್ಟೆ ಎಂದು ವ್ಯಂಗ್ಯವಾಡಿದರು.

ದೇಶದ ಬಾವುಟವನ್ನು ನಾವು ಗೌರವಿಸುತ್ತೇವೆ. ಆದರೆ ಆ ಬಾವುಟ ದೇಶವಲ್ಲ. ಅದು ದೇಶದ ಜನಗಳ ಪ್ರತೀಕ. ಬಾವುಟ ಹಾಕಿಕೊಂಡು ಒಂದ ವರ್ಷ ಪೂಜೆ ಮಾಡಿ ಏನಾದರೂ ಆಗುತ್ತದೆಯಾ? ಏನೂ ಆಗುವುದಿಲ್ಲ. ಈ ಪರಿಸರವೇ ದೇವರು. ಭಾರತಾಂಬೆ ದೇವಿ ಪೂಜಿಸೋಣ ಬಾರಾ ಎಂದು ಕುವೆಂಪು ಹೇಳಿದ್ದರು. ಅದು ಕೂಡ ಈಗ ತಪ್ಪಾಗಿದೆ. ಒಂದು ಕಿರೀಟ ಹಾಕಿರೋ ದೇವರು, ನಾಲ್ಕು ಕೈ ಅದಕ್ಕೆ ಪೂಜೆ ಮಾಡಿ ಕುವೆಂಪು ಮಾತು ಪಾಲಿಸುತ್ತೇವೆ ಅಂತಾರೆ. ಅದೂ ತಪ್ಪು ಎಂದರು.

ಸೀತೆಯನ್ನು ಬೆಂಕಿಗೆ ದೂಡಿದರು. ಬದುಕಿದ್ಳು, ದೈವಿ ಸ್ವರೂಪ ಅಂತಾರೆ. ಅದು ಹಾಗಲ್ಲ. ಸೀತೆ ಬೆಂಕಿಯಲ್ಲಿ ಸುಟ್ಟು ಹೋಗಿದ್ದಳು. ಬಳಿಕ ಮಣ್ಣು ಮಾಡಿದರು. ಅದನ್ನೇ ಭೂತಾಯಿ ಕೈ ಹಿಡಿದು ಎತ್ತಿತ್ತು ಅಂತಾರೆ. ಅದೆಲ್ಲ ಏನೂ ಅಲ್ಲ. ಅವರೆಲ್ಲ‌ ಮನುಷ್ಯರೇ ಎಂದು ಹೇಳಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು