AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ, ಅಯ್ಯಪ್ಪ, ಶಿವ-ಪಾರ್ವತಿ ಬಗ್ಗೆ ಲೇವಡಿ: ವಿವಾದದ ಕಿಡಿ ಹೊತ್ತಿಸಿದ ಲಲಿತಾ ನಾಯಕ್

ಹೋರಾಟಗಾರ್ತಿ ಬಿ.ಟಿ. ಲಲಿತಾ ನಾಯಕ್ ಅವರು ಮತ್ತೆ ಹಿಂದೂ ದೇವರುಗಳ ಬಗ್ಗೆ ಲೇವಡಿಯಾಗಿ ಮಾತನಾಡಿದ ವಿವಾದಕ್ಕೀಡಾಗಿದ್ದಾರೆ. ಧಾರವಾಡದಲ್ಲಿ ನಡೆದ 'ಧರೆಗೆ ದೊಡ್ಡವರು' ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಬಿ.ಟಿ. ಲಲಿತಾ ನಾಯಕ್ ಅವರು ಗಣೇಶ ಸೇರಿದಂತೆ ಇತರೆ ದೇವರುಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Nov 20, 2024 | 8:46 PM

Share

ಧಾರವಾಡ, (ನವೆಂಬರ್ 20): ಬಿ.ಟಿ. ಲಲಿತಾ ನಾಯಕ್ ಅವರು ಮತ್ತೆ ಹಿಂದೂ ದೇವರುಗಳ ಬಗ್ಗೆ ಮಾತನಾಡಿ ವಿವಾದಕ್ಕೀಡಾಗಿದ್ದಾರೆ. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆದ ‘ಧರೆಗೆ ದೊಡ್ಡವರು’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಣೇಶ, ಶಿವ, ಪಾರ್ವತಿ ಮತ್ತು ಅಯ್ಯಪ್ಪನ ಬಗ್ಗೆ ಲೇವಡಿ ಮಾಡಿದ್ದಾರೆ. ಗಣೇಶ, ಶಿವ, ಪಾರ್ವತಿ ಮತ್ತು ಅಯ್ಯಪ್ಪನ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಅಲ್ಲದೇ  ಭಾರತಾಂಬೆ ದೇವಿ ಪೂಜಿಸೋಣ ಬಾರಾ ಎಂದು ಕುವೆಂಪು ಹೇಳಿರುವುದನ್ನು ತಪ್ಪು ಎಂದಿದ್ದಾರೆ.

ಗಣೇಶ ಅನ್ನೋದು ಒಂದು ಜ್ಞಾನ. ಆ ಜ್ಞಾನಕ್ಕೆ ಒಂದು ಆಕಾರ ಕೊಟ್ಟಿದ್ದಾರೆ. ಅದಕ್ಕೆ ಒಂದು ಸೊಂಡಿಲು, ತಲೆ ಇದೆ. ಈಶ್ವರ ಅನ್ನುವಂತಹ ಅಪ್ಪ ಇದ್ದಾನೆ. ದೇವರು ಯಾರನ್ನಾದರೂ ಕೊಲ್ಲುತ್ತಾನಾ? ಧರೆಯಿಂದ ಆಕಾಶದೆತ್ತರಕ್ಕೆ ಬೆಳೆದವನು ದೇವರು. ಅಣುರೇಣು ತೃಣಕಾಷ್ಠದಲ್ಲಿಯೂ ದೇವರಿದ್ದಾನಂತೆ. ಹಾಗಾದ್ರೆ ಪಾರ್ವತಿಯ ಬಚ್ಚಲು ಮನೆಯಲ್ಲಿ ದೇವರು ಇರೋಲ್ವಾ? ಹುಡುಗ ಅಡ್ಡ ನಿಂತಿದ್ದಾನಂತ ಕೊಂದು ಹೋಗುವವನ್ನು ದೇವರು ಅನ್ನೋದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಅವರೆಲ್ಲ ದೇವರಲ್ಲ, ಮನುಷ್ಯರು. ಆ ಮನುಷ್ಯ ಮಾಡಿರೋ ತಪ್ಪನ್ನು ನಾವು ಮಾಡಬಾರದು. ಅಯ್ಯಪ್ಪ ಭಕ್ತರು ಅಂತಾ ಕೆಲವರು ಬಹಳ ಮಾಡುತ್ತಿರುತ್ತಾರೆ. ಆದರೆ ಅಯ್ಯಪ್ಪ ಕಾಡಿನಲ್ಲಿ ಇಲ್ಲ. ಅಯ್ಯಪ್ಪ ಎಲ್ಲ ಕಡೆ ಅನಾಥವಾಗಿ ಇದ್ದಾನೆ. ಅನೇಕ ಅನಾಥ ಮಕ್ಕಳಿದ್ದಾರೆ. ಅವರಿಗೆ ತಂದೆ-ತಾಯಿ ಇಲ್ಲ. ಅವರನ್ನು ನೋಡಿಕೊಳ್ಳುವ ಕೆಲಸ ಆಗಬೇಕು. ಅದನ್ನು ಬಿಟ್ಟು ಕಾಡಿಗೆ ಹೋಗುವುದಲ್ಲ. ಅಲ್ಲಿ ಕಾಡು ಕಡಿದು ಪುರೋಹಿತಶಾಹಿಗೆ ಅವಕಾಶ ಕೊಟ್ಟಿದ್ದಾರೆ. ಅಲ್ಲೆಲ್ಲ ತಲೆಯ ಮೇಲೆ ಏನೇನೋ ಹೊತ್ತುಕೊಂಡು ಹೋಗ್ತಾರೆ. ಜಯಮಾಲಾ ಏನೋ ಮುಟ್ಟಿದ್ರಂತೆ. ಮಟ್ಟಿದ ಕೂಡಲೇ ಮೈಲಿಗೆ ಆಯ್ತು ಅಂದ್ರು. ಕುಳಿತಿರೋ ಮೂರ್ತಿಗೆ ಯಾರು ಮುಟ್ಟಿದ್ರು ಒಂದೇ ಮುಟ್ಟದಿದ್ದರೂ ಒಂದೇ. ಸಂಕೇತಗಳು ಯಾವತ್ತೂ ಸತ್ಯವಲ್ಲ. ಸಂಕೇತಗಳು ಸಂಕೇತ ಅಷ್ಟೆ ಎಂದು ವ್ಯಂಗ್ಯವಾಡಿದರು.

ದೇಶದ ಬಾವುಟವನ್ನು ನಾವು ಗೌರವಿಸುತ್ತೇವೆ. ಆದರೆ ಆ ಬಾವುಟ ದೇಶವಲ್ಲ. ಅದು ದೇಶದ ಜನಗಳ ಪ್ರತೀಕ. ಬಾವುಟ ಹಾಕಿಕೊಂಡು ಒಂದ ವರ್ಷ ಪೂಜೆ ಮಾಡಿ ಏನಾದರೂ ಆಗುತ್ತದೆಯಾ? ಏನೂ ಆಗುವುದಿಲ್ಲ. ಈ ಪರಿಸರವೇ ದೇವರು. ಭಾರತಾಂಬೆ ದೇವಿ ಪೂಜಿಸೋಣ ಬಾರಾ ಎಂದು ಕುವೆಂಪು ಹೇಳಿದ್ದರು. ಅದು ಕೂಡ ಈಗ ತಪ್ಪಾಗಿದೆ. ಒಂದು ಕಿರೀಟ ಹಾಕಿರೋ ದೇವರು, ನಾಲ್ಕು ಕೈ ಅದಕ್ಕೆ ಪೂಜೆ ಮಾಡಿ ಕುವೆಂಪು ಮಾತು ಪಾಲಿಸುತ್ತೇವೆ ಅಂತಾರೆ. ಅದೂ ತಪ್ಪು ಎಂದರು.

ಸೀತೆಯನ್ನು ಬೆಂಕಿಗೆ ದೂಡಿದರು. ಬದುಕಿದ್ಳು, ದೈವಿ ಸ್ವರೂಪ ಅಂತಾರೆ. ಅದು ಹಾಗಲ್ಲ. ಸೀತೆ ಬೆಂಕಿಯಲ್ಲಿ ಸುಟ್ಟು ಹೋಗಿದ್ದಳು. ಬಳಿಕ ಮಣ್ಣು ಮಾಡಿದರು. ಅದನ್ನೇ ಭೂತಾಯಿ ಕೈ ಹಿಡಿದು ಎತ್ತಿತ್ತು ಅಂತಾರೆ. ಅದೆಲ್ಲ ಏನೂ ಅಲ್ಲ. ಅವರೆಲ್ಲ‌ ಮನುಷ್ಯರೇ ಎಂದು ಹೇಳಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?