Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad News: ಪ್ಲಾಟ್ ಖರೀದಿ ಪತ್ರ ಮಾಡಿಕೊಡದ ಬಿಲ್ಡ್‌ರ್‌ಗೆ ದಂಡ

ಪ್ಲಾಟ್ ಖರೀದಿ ಪತ್ರ ಮಾಡಿಕೊಡದ ನಿಸರ್ಗ ರಿಯಲ್ ವೆಲ್ತ್ ಸಲ್ಯೂಶನ್ಸ್‌ಗೆ ಗ್ರಾಹಕರ ಆಯೋಗ 1 ಲಕ್ಷ ರೂ. ಪರಿಹಾರ ಹಾಗೂ ಈ ಪ್ರಕರಣದ ಖರ್ಚು ವೆಚ್ಚವೆಂದು 10 ಸಾವಿರ ರೂ. ನೀಡುವಂತೆ ಆದೇಶಿಸಿದೆ.

Dharwad News: ಪ್ಲಾಟ್ ಖರೀದಿ ಪತ್ರ ಮಾಡಿಕೊಡದ ಬಿಲ್ಡ್‌ರ್‌ಗೆ ದಂಡ
ಪ್ರಾತಿನಿಧಿಕ ಚಿತ್ರ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 20, 2023 | 8:32 PM

ಧಾರವಾಡ, ಜುಲೈ 20: ಪ್ಲಾಟ್ ಖರೀದಿ (plot purchase) ಪತ್ರ ಮಾಡಿಕೊಡದ ನಿಸರ್ಗ ರಿಯಲ್ ವೆಲ್ತ್ ಸಲ್ಯೂಶನ್ಸ್‌ಗೆ ಗ್ರಾಹಕರ ಆಯೋಗ ದಂಡ ಮತ್ತು ಪರಿಹಾರ ನೀಡುವಂತೆ ಆದೇಶಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗದ ಡಾ. ವಿನಯ ಸುಲ್ತಾನಪುರ ಎಂಬುವವರು ಹುಬ್ಬಳ್ಳಿಯ ನಿಸರ್ಗ ರಿಯಲ್ ವೆಲ್ತ್ ಸಲ್ಯೂಶನ್ಸ್‌ರವರು ಅಭಿವೃದ್ಧಿಪಡಿಸಿದ ನಿಸರ್ಗ ಸಿಲ್ವರ್ ಟೌನ್‌ನಲ್ಲಿ ಪ್ಲಾಟ್ ನಂ. 57ನ್ನು ರೂ. 38.28 ಲಕ್ಷಕ್ಕೆ 2014 ರ ಮಾರ್ಚ್ ತಿಂಗಳಲ್ಲಿ ಖರೀದಿಸಿದ್ದರು.

ಆ ಪೈಕಿ ಬೇರೆ ಬೇರೆ ದಿನಾಂಕಗಳಂದು ವಿನಯ ರೂ. 20 ಲಕ್ಷ ಮುಂಗಡ ಹಣವನ್ನು ನೀಡಿದ್ದರು. ಈ ಕುರಿತು ಖರೀದಿ ಕರಾರು ಪತ್ರ ಸಹ ಮಾಡಿಕೊಳ್ಳಲಾಗಿತ್ತು. ಬಾಕಿ ಮೊತ್ತವನ್ನು ತೆಗೆದುಕೊಂಡು ಖರೀದಿ ಪತ್ರ ನೋಂದಣಿ ಮಾಡಿಕೊಡುವಂತೆ ಹಲವಾರು ಬಾರಿ ವಿನಯ ಅವರು ನಿಸರ್ಗ ರಿಯಲ್ ವೆಲ್ತ್ ಸಲ್ಯೂಶನ್ ಮಾಲೀಕರಿಗೆ ಕೇಳಿಕೊಂಡರೂ ಖರೀದಿ ಪತ್ರ ನೋಂದಣಿ ಮಾಡಿ ಕೊಟ್ಟಿರಲಿಲ್ಲ. ಹೀಗಾಗಿ ವಿನಯ ಅವರು ಗ್ರಾಹಕರ ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ: Dharwad News: ಧಾರವಾಡದ ಕಾರ್ಖಾನೆಗಳಿಂದ ತೆರಿಗೆಯೇ ಬರುತ್ತಿಲ್ಲ: ಗ್ರಾಮ ಪಂಚಾಯತಿಗಳಿಗಿಲ್ಲ ಆದಾಯ

ಈ ದೂರಿನ ವಿಚಾರಣೆ ನಡೆಸಿದ ಆಯೋಗ ಅಧ್ಯಕ್ಷರಾದ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ ದೂರುದಾರನಿಂದ ರೂ. 20 ಲಕ್ಷ ಮುಂಗಡ ಹಣ ಪಡೆದುಕೊಂಡು ಖರೀದಿ ಪತ್ರ ನೋಂದಣಿ ಮಾಡಲು ವಿಫಲರಾಗಿರುವುದು ಮತ್ತು ದೂರುದಾರನಿಗೆ ಹಣವನ್ನು ಹಿಂತಿರುಗಿಸದೆ ಇರುವುದು ಸೇವಾ ನ್ಯೂನ್ಯತೆ ಎಂದು ಅಭಿಪ್ರಾಯಪಡಲಾಗಿದೆ.

ಇದನ್ನೂ ಓದಿ: ಧಾರವಾಡ: ಒಪ್ಪಂದದಂತೆ ನಿವೇಶನ ಅಭಿವೃದ್ಧಿ ಮಾಡದ ಬಿಲ್ಡರ್‌ಗೆ ದಂಡ ವಿಧಿಸಿದ ಜಿಲ್ಲಾ ಗ್ರಾಹಕರ ಆಯೋಗ

ಮುಂಗಡ ಹಣ ರೂ. 20 ಲಕ್ಷ ಮತ್ತು ಅದರ ಮೇಲೆ ಪೂರ್ತಿ ಹಣ ಸಂದಾಯವಾಗುವವರೆಗೆ ಶೇ.8 ರಂತೆ ವಾರ್ಷಿಕ ಬಡ್ಡಿ ಲೆಕ್ಕ ಹಾಕಿ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ ಆದೇಶಿಸಿದೆ. ದೂರುದಾರರಿಗೆ ಆಗಿರುವ ಅನಾನುಕೂಲತೆ ಮತ್ತು ಮಾನಸಿಕ ಹಿಂಸೆಗಾಗಿ ರೂ. 1 ಲಕ್ಷ ಪರಿಹಾರ ಹಾಗೂ ಈ ಪ್ರಕರಣದ ಖರ್ಚು ವೆಚ್ಚವೆಂದು ರೂ. 10 ಸಾವಿರ ನೀಡುವಂತೆ ನಿಸರ್ಗ ವೆಲ್ತ್ ಸಲ್ಯೂಷನ್‌ಗೆ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ