AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೂಳೆಬ್ಬಿಸಿದ ಎತ್ತುಗಳ ನಾಗಲೋಟ; ರೋಮಾಂಚನಗೊಳಿಸಿದ ಧಾರವಾಡ ಚಕ್ಕಡಿ ಸ್ಪರ್ಧೆ

ಕೃಷಿ ಚಟುವಟಿಕೆಗಳು ಮುಗಿದು ರೈತರು ಕೊಂಚ ನಿರಾಳರಾಗಿದ್ದಾರೆ. ವರ್ಷವಿಡೀ ದುಡಿದ ಅನ್ನದಾತನಿಗೆ ರಿಲೀಫ್‌ ಸಿಕ್ಕಿದೆ. ಇದೇ ರಿಲೀಫ್‌ನಲ್ಲಿರೋ ಧಾರವಾಡದ ರೈತರು ಚಕ್ಕಡಿ ಬಂಡಿ ಓಟದ ಮೊರೆ ಹೋಗಿದ್ರು.

ಧೂಳೆಬ್ಬಿಸಿದ ಎತ್ತುಗಳ ನಾಗಲೋಟ; ರೋಮಾಂಚನಗೊಳಿಸಿದ ಧಾರವಾಡ ಚಕ್ಕಡಿ ಸ್ಪರ್ಧೆ
ಧೂಳೆಬ್ಬಿಸಿದ ಎತ್ತುಗಳ ನಾಗಲೋಟ; ರೋಮಾಂಚನಗೊಳಿಸಿದ ಧಾರವಾಡ ಚಕ್ಕಡಿ ಸ್ಪರ್ಧೆ
TV9 Web
| Edited By: |

Updated on: Jan 02, 2022 | 8:37 AM

Share

ಧಾರವಾಡ: ಅಲ್ಲಿ ರೋಮಾಂಚನ ಇತ್ತು. ಮೈನವಿರೇಳಿಸೋ ಸ್ಪರ್ಧೆ ಇತ್ತು..ಮಿಂಚಿನ ಓಟ ದಾಖಲಿಸಿದ್ದವರಿಗೆ ಬಹುಮಾನವೂ ಇತ್ತು. ಅಷ್ಟಕ್ಕೂ ಕೃಷಿ ಕೆಲಸ ಮುಗಿಸಿ ಮನೆಯಲ್ಲಿರೋ ರೈತರು ಚಕ್ಕಡಿ ಓಟದ ಸ್ಪರ್ಧೆ ಆಯೋಜಿಸಿದ್ರು.

ಕೃಷಿ ಚಟುವಟಿಕೆಗಳು ಮುಗಿದು ರೈತರು ಕೊಂಚ ನಿರಾಳರಾಗಿದ್ದಾರೆ. ವರ್ಷವಿಡೀ ದುಡಿದ ಅನ್ನದಾತನಿಗೆ ರಿಲೀಫ್‌ ಸಿಕ್ಕಿದೆ. ಇದೇ ರಿಲೀಫ್‌ನಲ್ಲಿರೋ ಧಾರವಾಡದ ರೈತರು ಚಕ್ಕಡಿ ಬಂಡಿ ಓಟದ ಮೊರೆ ಹೋಗಿದ್ರು. ಹೊಸ ವರ್ಷದ ಅಂಗವಾಗಿ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗೆವಾಡ ಗ್ರಾಮದಲ್ಲಿ ಖಾಲಿ ಚಕ್ಕಡಿ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಗ್ರಾಮದ ಚಕ್ಕಡಿ ದಾರಿಯಲ್ಲೇ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಬೇರೆ ಬೇರೆ ಊರುಗಳಿಂದ ತಮ್ಮ ಇಷ್ಟದ ಎತ್ತುಗಳೊಂದಿಗೆ ಆಗಮಿಸಿದ್ದ ರೈತರು, ಉತ್ಸಾಹದಿಂದಲೇ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇಲ್ಲಿ ಜಯ ದಾಖಲಿಸಿದವರಿಗೆ ಒಂದೂವರೆ ಲಕ್ಷದವರೆಗೆ ಬಹುಮಾನ ನೀಡಲಾಗಿತ್ತು.

ಅಷ್ಟಕ್ಕೂ ಒಂದು ನಿಮಿಷದ ಸ್ಪರ್ಧೆ ಇದಾಗಿದ್ದು, ಈ ಅವಧಿಯಲ್ಲಿ ಎಷ್ಟು ದೂರ ಜೋಡಿ ಎತ್ತುಗಳು ಚಕ್ಕಡಿಯೊಂದಿಗೆ ಸಾಗುತ್ತವೆ ಅನ್ನುವುದರ ಮೇಲೆ ವಿಜೇತರನ್ನು ಆಯ್ಕೆ ಮಾಡಲಾಗುತ್ತೆ. ಮೆಲ್ನೋಟಕ್ಕೆ ಇಲ್ಲಿ ಸ್ಪರ್ಧೆ ಕಂಡ್ರೂ ಇದ್ರ ಹಿಂದೆ ಎತ್ತುಗಳನ್ನ ಌಕ್ಟೀವ್‌ ಮಾಡುವ ತಂತ್ರವೂ ಇತ್ತು. ಹೌದು ಕೃಷಿ ಚಟುವಟಿಕೆ ಮುಗಿಸಿರೋ ಎತ್ತುಗಳು ಕೆಲಸವಿಲ್ಲದೇ ಸೋಮಾರಿಗಳಾಗಿರುತ್ತವೆ. ಆ ಎತ್ತುಗಳಿಗೆ ಕೊಂಚ ದೈಹಿಕ ಕಸರತ್ತು ಸಿಗಲಿ ಅನ್ನೋ ಉದ್ದೇಶಕ್ಕೂ ಕೂಡ ಇಂಥ ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ.

ಒಟ್ನಲ್ಲಿ ಕೃಷಿ ಕೆಲಸ ಮುಗಿಸಿರೋ ರೈತರು, ರಿಲೀಫ್‌ ಪಡೆಯಲು ಈಗ ಸ್ಪರ್ಧೆಯ ಮೊರೆ ಹೋಗಿದ್ದಾರೆ. ತಮ್ಮ ಎತ್ತುಗಳನ್ನೇ ಬಳಸಿಕೊಂಡು ಅಖಾಡದಲ್ಲಿ ಧೂಳೆಬ್ಬಿಸಿದ್ದಾರೆ.

ನರಸಿಂಹಮೂರ್ತಿ ಪ್ಯಾಟಿ , ಟಿವಿ9, ಧಾರವಾಡ

bullock cart race

ಧೂಳೆಬ್ಬಿಸಿದ ಎತ್ತುಗಳ ನಾಗಲೋಟ; ರೋಮಾಂಚನಗೊಳಿಸಿದ ಧಾರವಾಡ ಚಕ್ಕಡಿ ಸ್ಪರ್ಧೆ

ಇದನ್ನೂ ಓದಿ: ದಾವಣಗೆರೆಯ ಗಾಜಿನ ಮನೆಗೆ ಪ್ರವಾಸಿಗರು ಫಿದಾ; ಧಾರಾವಾಹಿ, ಸಿನಿಮಾ ಶೂಟಿಂಗ್​ಗಳಿಗೂ ಇದು ನೆಚ್ಚಿನ ತಾಣ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್