AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೂಳೆಬ್ಬಿಸಿದ ಎತ್ತುಗಳ ನಾಗಲೋಟ; ರೋಮಾಂಚನಗೊಳಿಸಿದ ಧಾರವಾಡ ಚಕ್ಕಡಿ ಸ್ಪರ್ಧೆ

ಕೃಷಿ ಚಟುವಟಿಕೆಗಳು ಮುಗಿದು ರೈತರು ಕೊಂಚ ನಿರಾಳರಾಗಿದ್ದಾರೆ. ವರ್ಷವಿಡೀ ದುಡಿದ ಅನ್ನದಾತನಿಗೆ ರಿಲೀಫ್‌ ಸಿಕ್ಕಿದೆ. ಇದೇ ರಿಲೀಫ್‌ನಲ್ಲಿರೋ ಧಾರವಾಡದ ರೈತರು ಚಕ್ಕಡಿ ಬಂಡಿ ಓಟದ ಮೊರೆ ಹೋಗಿದ್ರು.

ಧೂಳೆಬ್ಬಿಸಿದ ಎತ್ತುಗಳ ನಾಗಲೋಟ; ರೋಮಾಂಚನಗೊಳಿಸಿದ ಧಾರವಾಡ ಚಕ್ಕಡಿ ಸ್ಪರ್ಧೆ
ಧೂಳೆಬ್ಬಿಸಿದ ಎತ್ತುಗಳ ನಾಗಲೋಟ; ರೋಮಾಂಚನಗೊಳಿಸಿದ ಧಾರವಾಡ ಚಕ್ಕಡಿ ಸ್ಪರ್ಧೆ
TV9 Web
| Edited By: |

Updated on: Jan 02, 2022 | 8:37 AM

Share

ಧಾರವಾಡ: ಅಲ್ಲಿ ರೋಮಾಂಚನ ಇತ್ತು. ಮೈನವಿರೇಳಿಸೋ ಸ್ಪರ್ಧೆ ಇತ್ತು..ಮಿಂಚಿನ ಓಟ ದಾಖಲಿಸಿದ್ದವರಿಗೆ ಬಹುಮಾನವೂ ಇತ್ತು. ಅಷ್ಟಕ್ಕೂ ಕೃಷಿ ಕೆಲಸ ಮುಗಿಸಿ ಮನೆಯಲ್ಲಿರೋ ರೈತರು ಚಕ್ಕಡಿ ಓಟದ ಸ್ಪರ್ಧೆ ಆಯೋಜಿಸಿದ್ರು.

ಕೃಷಿ ಚಟುವಟಿಕೆಗಳು ಮುಗಿದು ರೈತರು ಕೊಂಚ ನಿರಾಳರಾಗಿದ್ದಾರೆ. ವರ್ಷವಿಡೀ ದುಡಿದ ಅನ್ನದಾತನಿಗೆ ರಿಲೀಫ್‌ ಸಿಕ್ಕಿದೆ. ಇದೇ ರಿಲೀಫ್‌ನಲ್ಲಿರೋ ಧಾರವಾಡದ ರೈತರು ಚಕ್ಕಡಿ ಬಂಡಿ ಓಟದ ಮೊರೆ ಹೋಗಿದ್ರು. ಹೊಸ ವರ್ಷದ ಅಂಗವಾಗಿ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗೆವಾಡ ಗ್ರಾಮದಲ್ಲಿ ಖಾಲಿ ಚಕ್ಕಡಿ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಗ್ರಾಮದ ಚಕ್ಕಡಿ ದಾರಿಯಲ್ಲೇ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಬೇರೆ ಬೇರೆ ಊರುಗಳಿಂದ ತಮ್ಮ ಇಷ್ಟದ ಎತ್ತುಗಳೊಂದಿಗೆ ಆಗಮಿಸಿದ್ದ ರೈತರು, ಉತ್ಸಾಹದಿಂದಲೇ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇಲ್ಲಿ ಜಯ ದಾಖಲಿಸಿದವರಿಗೆ ಒಂದೂವರೆ ಲಕ್ಷದವರೆಗೆ ಬಹುಮಾನ ನೀಡಲಾಗಿತ್ತು.

ಅಷ್ಟಕ್ಕೂ ಒಂದು ನಿಮಿಷದ ಸ್ಪರ್ಧೆ ಇದಾಗಿದ್ದು, ಈ ಅವಧಿಯಲ್ಲಿ ಎಷ್ಟು ದೂರ ಜೋಡಿ ಎತ್ತುಗಳು ಚಕ್ಕಡಿಯೊಂದಿಗೆ ಸಾಗುತ್ತವೆ ಅನ್ನುವುದರ ಮೇಲೆ ವಿಜೇತರನ್ನು ಆಯ್ಕೆ ಮಾಡಲಾಗುತ್ತೆ. ಮೆಲ್ನೋಟಕ್ಕೆ ಇಲ್ಲಿ ಸ್ಪರ್ಧೆ ಕಂಡ್ರೂ ಇದ್ರ ಹಿಂದೆ ಎತ್ತುಗಳನ್ನ ಌಕ್ಟೀವ್‌ ಮಾಡುವ ತಂತ್ರವೂ ಇತ್ತು. ಹೌದು ಕೃಷಿ ಚಟುವಟಿಕೆ ಮುಗಿಸಿರೋ ಎತ್ತುಗಳು ಕೆಲಸವಿಲ್ಲದೇ ಸೋಮಾರಿಗಳಾಗಿರುತ್ತವೆ. ಆ ಎತ್ತುಗಳಿಗೆ ಕೊಂಚ ದೈಹಿಕ ಕಸರತ್ತು ಸಿಗಲಿ ಅನ್ನೋ ಉದ್ದೇಶಕ್ಕೂ ಕೂಡ ಇಂಥ ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ.

ಒಟ್ನಲ್ಲಿ ಕೃಷಿ ಕೆಲಸ ಮುಗಿಸಿರೋ ರೈತರು, ರಿಲೀಫ್‌ ಪಡೆಯಲು ಈಗ ಸ್ಪರ್ಧೆಯ ಮೊರೆ ಹೋಗಿದ್ದಾರೆ. ತಮ್ಮ ಎತ್ತುಗಳನ್ನೇ ಬಳಸಿಕೊಂಡು ಅಖಾಡದಲ್ಲಿ ಧೂಳೆಬ್ಬಿಸಿದ್ದಾರೆ.

ನರಸಿಂಹಮೂರ್ತಿ ಪ್ಯಾಟಿ , ಟಿವಿ9, ಧಾರವಾಡ

bullock cart race

ಧೂಳೆಬ್ಬಿಸಿದ ಎತ್ತುಗಳ ನಾಗಲೋಟ; ರೋಮಾಂಚನಗೊಳಿಸಿದ ಧಾರವಾಡ ಚಕ್ಕಡಿ ಸ್ಪರ್ಧೆ

ಇದನ್ನೂ ಓದಿ: ದಾವಣಗೆರೆಯ ಗಾಜಿನ ಮನೆಗೆ ಪ್ರವಾಸಿಗರು ಫಿದಾ; ಧಾರಾವಾಹಿ, ಸಿನಿಮಾ ಶೂಟಿಂಗ್​ಗಳಿಗೂ ಇದು ನೆಚ್ಚಿನ ತಾಣ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?