AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಬಣ ರಾಜಕೀಯ ಶಮನಕ್ಕೆ ಮುಂದಾದ ಬಿವೈ ವಿಜಯೇಂದ್ರ: ಶೆಟ್ಟರ್, ಮುನೇನಕೊಪ್ಪ, ಬೆಲ್ಲದ್ ಜೊತೆ ಸಭೆ

ಧಾರಾವಾಡ ಜಿಲ್ಲೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರವಾಪ್ಸಿಯಾದರೂ ಭಿನ್ನಮತವಿತ್ತು. ಹೀಗಾಗಿ ಧಾರವಾಡದ ಬಣ ರಾಜಕೀಯವನ್ನು ಶಮನ ಮಾಡಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮುಂದಾಗಿದ್ದಾರೆ. ಜಗದೀಶ್​ ಶೆಟ್ಟರ್​, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮತ್ತು ವಿಧಾನಸಭಾ ಉಪನಾಯಕ ಅರವಿಂದ ಬೆಲ್ಲದ್​ ಅವರೊಂದಿಗೆ ಸಭೆ ಮಾಡಿ ಮಾತನಾಡಿದ್ದಾರೆ.

ಧಾರವಾಡ ಬಣ ರಾಜಕೀಯ ಶಮನಕ್ಕೆ ಮುಂದಾದ ಬಿವೈ ವಿಜಯೇಂದ್ರ: ಶೆಟ್ಟರ್, ಮುನೇನಕೊಪ್ಪ, ಬೆಲ್ಲದ್ ಜೊತೆ ಸಭೆ
ಬಿ.ವೈ ವಿಜಯೇಂದ್ರ
ಶಿವಕುಮಾರ್ ಪತ್ತಾರ್
| Edited By: |

Updated on: Feb 01, 2024 | 6:40 PM

Share

ಹುಬ್ಬಳ್ಳಿ, ಫೆಬ್ರುವರಿ 1: ಧಾರವಾಡದ ಬಣ ರಾಜಕೀಯವನ್ನು ಶಮನ ಮಾಡಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಮುಂದಾಗಿದ್ದಾರೆ. ಆ ಮೂಲಕ ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮತ್ತು ವಿಧಾನಸಭಾ ಉಪನಾಯಕ ಅರವಿಂದ ಬೆಲ್ಲದ್​ ಅವರೊಂದಿಗೆ ಹುಬ್ಬಳ್ಳಿ ಪ್ರವಾಸಿ‌ ಮಂದಿರದಲ್ಲಿ ಪ್ರತ್ಯೇಕ ಸಭೆ ಮಾಡಿದ್ದಾರೆ. ಮೂವರು ನಾಯಕರೊಂದಿಗೆ ಬಿ.ವೈ.ವಿಜಯೇಂದ್ರ ಚರ್ಚೆ ಮಾಡಿದ್ದಾರೆ. ಧಾರಾವಾಡ ಜಿಲ್ಲೆಯಲ್ಲಿ ಜಗದೀಶ್ ಶೆಟ್ಟರ್ ಘರವಾಪ್ಸಿಯಾದರೂ ಭಿನ್ನಮತವಿತ್ತು. ಶೆಟ್ಟರ್ ಮೆರವಣಿಗೆಯಲ್ಲೂ ಸ್ಥಳೀಯ ನಾಯಕರು ಭಾಗಿಯಾಗಿರಲಿಲ್ಲ. ಹೀಗಾಗಿ ಬಣ ರಾಜಕೀಯವನ್ನು ಶಮನ ಮಾಡಲು ಸಭೆ ಮಾಡಿದ್ದಾರೆ.

ನಮ್ಮ ಮುಂದೆ ಇರುವ ದೊಡ್ಡ ಸವಾಲು ಲೋಕಸಭೆ ಚುನಾವಣೆ: ಬಿ.ವೈ.ವಿಜಯೇಂದ್ರ

ಬಳಿಕ ಮಾತನಾಡಿದ ಅವರು, ನಮ್ಮ ಮುಂದೆ ಇರುವ ದೊಡ್ಡ ಸವಾಲು ಲೋಕಸಭೆ ಚುನಾವಣೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅನಿರೀಕ್ಷಿತ ಸೋಲಾಗಿದೆ. ಕಾಂಗ್ರೆಸ್​ ಎಂಪಿ ಚುನಾವಣೆಯಲ್ಲಿ ಗೆಲ್ತೇವೆ ಅನ್ನೋ ಭ್ರಮೆಯಲ್ಲಿದೆ. ಪಂಚರಾಜ್ಯಗಳ ಚುನಾವಣೆ ಕಾಂಗ್ರೆಸ್​ನವರಿಗೆ ಆಘಾತ ನೀಡಿದೆ. ಕಳೆದ ಕೆಲ ತಿಂಗಳಿಂದ ರಾಜ್ಯದಲ್ಲಿ ಅನೇಕ ಬದಲಾವಣೆ ಆಗಿದೆ. ಅನುದಾನ ಕೊಡದ ಸರ್ಕಾರ ಇದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಜವಾಬ್ದಾರಿಯುತ ಸ್ಥಾನದಲ್ಲಿರುವ ಡಿಕೆ ಸುರೇಶ್ ಬೇಜವಾಬ್ದಾರಿ ಹೇಳಿಕೆ ನೀಡಬಾರದು: ಬಿವೈ ವಿಜಯೇಂದ್ರ

ಅಧಿಕಾರಕ್ಕೆ ಬಂದು 8 ತಿಂಗಳಾದರೂ ಯಾವ ಅನುದಾನ ಕೊಟ್ಟಿಲ್ಲ. ಸಿಎಂ ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕತೆ ಅರಾಜಕತೆಗೆ ನೂಕಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್​ ಗೆಲ್ಲಲಿದೆ ಎಂದಿದ್ದಾರೆ.

ಶೆಟ್ಟರ್ ಬಿಜೆಪಿಗೆ ವಾಪಸ್ ಬಂದಿರುವುದು ಅವಕಾಶಕ್ಕಾಗಿ ಅಲ್ಲ

ಶೆಟ್ಟರ್ ಬಿಜೆಪಿಗೆ ವಾಪಸ್ ಬಂದಿರುವುದು ಅವಕಾಶಕ್ಕಾಗಿ ಅಲ್ಲ. ಎಂಎಲ್​ಸಿ ಸ್ಥಾನಕ್ಕೆ ಶೆಟ್ಟರ್ ರಾಜೀನಾಮೆ ಕೊಟ್ಟು ಬಂದಿದ್ದಾರೆ. ನಾವೆಲ್ಲ ಒಟ್ಟಾಗಿ ದುಡಿಯಬೇಕು ಎಂದಿದ್ದಾರೆ. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಮಂತ್ರಿ ಆಗಲಿದ್ದಾರೆ. ಕಾಂಗ್ರೆಸ್ ಏನೇ ಮಾಡಿದರೂ ಇದನ್ನು ತಡೆಯಲು ಸಾಧ್ಯವಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಆಗಿದ್ದು ನಮಗೆ ಹೆಮ್ಮೆ. ಮೋದಿ ದೇಶದ ಸಂಸ್ಕೃತಿ, ಪರಂಪರೆ ಉಳಿಸುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ಸಿಗರಿಗೆ ಜೈ ಶ್ರೀರಾಮ್ ಅಂದರೆ ನಿದ್ದೆ ಬರಲ್ಲ. ಕೇಸರಿ ಬಣ್ಣ ನೋಡಿದರೂ ಸಹ ಕಾಂಗ್ರೆಸ್​ನವರಿಗೆ ನಿದ್ದೆ ಬರಲ್ಲ ಎಂದಿದ್ದಾರೆ.

ಆಪರೇಶನ್ ಕುರಿತು ಹೊಸ ಬಾಂಬ್

ಆಪರೇಶನ್ ಕಮಲ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಆಪರೇಶನ್ ನಿಮಗೆ ಹೇಳಿ ಮಾಡಬೇಕಾ? ಇನ್ನೂ ಕಾಂಗ್ರೆಸ್​ನಿಂದ ಬಹಳ ಜನ ಬಿಜೆಪಿಗೆ ಬರುವವರಿದ್ದಾರೆ. ಲೋಕಸಭೆಯಲ್ಲಿ 28 ಸ್ಥಾನ ಗಳಿಸುವುದೇ ನಮ್ಮ ಗುರಿ ಎಂದು ಹುಬ್ಬಳ್ಳಿಯಲ್ಲಿ ಆಪರೇಶನ್ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ.

ರಾಜ್ಯ ಆರ್ಥಿಕ‌ ಸಂಕಷ್ಟದಲ್ಲಿ‌ ಸಿಲುಕಿಕೊಂಡಿದೆ

ಕಾಂಗ್ರೆಸ್‌ಗೆ ಮತ ಹಾಕಿದರೆ 5 ಗ್ಯಾರಂಟಿ ಇರುತ್ತೆಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಹಣ ಕ್ರೋಡೀಕರಣಕ್ಕೆ ಸಿಎಂ ಸಿದ್ದರಾಮಯ್ಯ ಪರದಾಡುತ್ತಿದ್ದಾರೆ. ರಾಜ್ಯ ಆರ್ಥಿಕ‌ ಸಂಕಷ್ಟದಲ್ಲಿ‌ ಸಿಲುಕಿಕೊಂಡಿದೆ. ಭರವಸೆ ನೀಡಿದ್ದ ಗ್ಯಾರಂಟಿ ಈಡೇರಿಸಲು ಸರ್ಕಾರಕ್ಕೆ‌ ಸಾಧ್ಯವಾಗುತ್ತಿಲ್ಲ. ಹೀಗಾಗಿ ಶಾಸಕರಿಂದ ಗ್ಯಾರಂಟಿ ರದ್ದತಿ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!