ರಾಜ್ಯದಲ್ಲಿ ಇಂದು ಘೋರ ಅಪಘಾತಗಳ ಸರಮಾಲೆ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಅಪ್ಪ, ಮಗಳು ಬಲಿ

Annigeri, Dharwad: ತಂದೆ ಇಬ್ರಾಹಿಂ ಉವಾಜಿ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪುತ್ರಿ ಇಸ್ಮತ್ ಕಿಮ್ಸ್​ನಲ್ಲಿ ಕೊನೆಯುಸಿರೆಳೆದಿದ್ದಾಳೆ. ಪತ್ನಿ ನಸ್ರೀನ್ ಬಾನುಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಾಜ್ಯದಲ್ಲಿ ಇಂದು ಘೋರ ಅಪಘಾತಗಳ ಸರಮಾಲೆ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಅಪ್ಪ, ಮಗಳು ಬಲಿ
ರಾಜ್ಯದಲ್ಲಿ ಇಂದು ಅಪಘಾತಗಳ ಸರಮಾಲೆ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಅಪ್ಪ, ಮಗಳು ಬಲಿ
Follow us
| Updated By: ಸಾಧು ಶ್ರೀನಾಥ್​

Updated on:Mar 12, 2022 | 8:23 PM

ಧಾರವಾಡ: ಇಂದು ರಾಜ್ಯದಲ್ಲಿ ಅಪಘಾತಗಳ ಸರಮಾಲೆಯೇ ನಡೆದಿದ್ದು ಹತ್ತಾರು ಮಂದಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಬಳಿ ನಡೆದಿರುವ ದುರ್ಘಟನೆಯಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಅಪ್ಪ ಮತ್ತು ಮಗಳು ಮೃತಪಟ್ಟಿದ್ದಾರೆ. ತಂದೆ ಇಬ್ರಾಹಿಂ ಉವಾಜಿ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪುತ್ರಿ ಇಸ್ಮತ್ ಕಿಮ್ಸ್​ನಲ್ಲಿ ಕೊನೆಯುಸಿರೆಳೆದಿದ್ದಾಳೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ರಾಹಿಂ ಉವಾಜಿ ಗದಗ ಜಿಲ್ಲೆಯ ಮಲ್ಲಸಮುದ್ರ ಗ್ರಾಮದ ನಿವಾಸಿ. ಪತ್ನಿ ನಸ್ರೀನ್ ಬಾನುಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಲಬುರಗಿ: ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಐವರ ದುರ್ಮರಣ ಕಲಬುರಗಿ: ಮರಕ್ಕೆ ಕಾರು(Car) ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವನ್ನಪ್ಪಿದೆ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಹೊರವಲಯದಲ್ಲಿ ನಡೆದಿದೆ. ಕಾರಿನಲ್ಲಿದ್ದ ಚಾಲಕ ಹಾಗೂ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗಾಣಗಾಪುರ ದತ್ತಾತ್ರೇಯ ದೇಗುಲದಿಂದ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಫಜಲಪುರದಿಂದ ಮಹಾರಾಷ್ಟ್ರ ಕಡೆಗೆ ಹೊರಟಿದ್ದ ಕಾರು ಮರಕ್ಕೆ( Tree) ಡಿಕ್ಕಿ ಹೊಡೆದಿದೆ. ಮೃತರು ಮಹಾರಾಷ್ಟ್ರ ಅಹ್ಮದನಗರದ ನಿವಾಸಿಗಳು. ಚಾಲಕ ನಿದ್ರೆ ಮಂಪರಿನಲ್ಲಿದ್ದರಿಂದ ಅಪಘಾತವಾಗಿರುವ( Accident) ಶಂಕೆ ವ್ಯಕ್ತವಾಗಿದೆ. ಅಫಜಲಪುರ ಪೊಲೀಸ್​ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಓವರ್ ಲೋಡ್ ಧಾವಂತದಿಂದ​ ಟ್ರ್ಯಾಕ್ಟರ್ ಪಲ್ಟಿ -ನಿಶ್ಚಿತಾರ್ಥಕ್ಕೆ ಹೊರಟಿದ್ದ 4 ಮಂದಿ ಸಾವು ಕೊಪ್ಪಳ: ಸುಮಾರು 25 ಜನರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು, ಚಿಕಿತ್ಸೆ ಫಲಿಸದೆ ಕಾರಟಗಿ ಆಸ್ಪತ್ರೆಯಲ್ಲಿ ಇಬ್ಬರು ದುರ್ಮರಣಕ್ಕೀಡಾಗಿರುವ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ನವಲಿಯಲ್ಲಿ ನಡೆದಿದೆ. ನಿಶ್ಚಿತಾರ್ಥಕ್ಕೆ ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಯಮನೂರಪ್ಪ(55) ಮತ್ತು ಅಂಬಮ್ಮ(50) ಸ್ಥಳದಲ್ಲೇ ಅಸುನೀಗಿದವರು. ಶೇಶಪ್ಪ ಬಂಡಿ (40) ಮತ್ತು ಯಮನಪ್ಪ ಸಿಂಧನೂರು (35) ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.ಇವರೆಲ್ಲಾ ಕೊಪ್ಪಳ ಜಿಲ್ಲೆ ಕಾರಟಗಿಯ ಇಂದ್ರನಗರ ನಿವಾಸಿಗಳು. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಕಾರಟಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಸೇರಿದಂತೆ ಕನಕಗಿರಿ ಪೊಲೀಸ್ ತಂಡ ಭೇಟಿ ನೀಡಿದೆ.

ನಿಶ್ಚಿತಾರ್ಥಕ್ಕೆ ಹೊರಟಿದ್ದವರು ಸೇರಿದ್ದು ಮಸಣಕ್ಕೆ: ನವಲಿ ಗ್ರಾಮದ ಬಳಿಯ ರೈಸ್ ಟೆಕ್ನಾಲಜಿ ‌ಪಾರ್ಕ್ ಬಳಿ ಈ ದುರ್ಘಟನೆ ನಡೆದಿದ್ದು, ಮೃತರು ಕಾರಟಗಿ ಪಟ್ಟಣದ 18ನೇ ವಾರ್ಡ್ ನ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರಟಗಿಯಿಂದ ಕನಕಗಿರಿಯ ಸಿರವಾರ ಕಡೆಗೆ ಟ್ರ್ಯಾಕ್ಟರ್ ಹೊರಟಿತ್ತು.

ಇದನ್ನೂ ಓದಿ: ಒಂದೇ ದಿನ ಎರಡು ಕಡೆ! ಪೊಲೀಸರು ಜಫ್ತಿ ಮಾಡಿದ್ದ ಹಳೆಯ ವಾಹನಗಳಿಗೆ ಬೆಂಕಿ -21 ವಾಹನಗಳು ಅಗ್ನಿಗಾಹುತಿ

ಇದನ್ನೂ ಓದಿ: ಮನೆಯವರ ವಿರೋಧದ ನಡುವೆ ಮದುವೆಯಾಗಿದಕ್ಕೆ ಮಗಳನ್ನೇ ವಿಧವೆ ಮಾಡಿದ ಅಪ್ಪ; ವಿಜಯಪುರ ಮಾಜಿ ಕಾರ್ಪೊರೇಟರ್ ಸೇರಿ ನಾಲ್ವರ ಬಂಧನ

Published On - 7:52 pm, Fri, 11 March 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ