AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಹುಬ್ಬಳ್ಳಿಯ ಸ್ಟಡಿ ಸೆಂಟರ್​ ಮೇಲೆ ಸಿಸಿಬಿ ದಾಳಿ

ಸ್ಟಡಿ ಸೆಂಟರ್​​ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಹುಬ್ಬಳ್ಳಿಯ KIOS ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.

ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಹುಬ್ಬಳ್ಳಿಯ ಸ್ಟಡಿ ಸೆಂಟರ್​ ಮೇಲೆ ಸಿಸಿಬಿ ದಾಳಿ
ಸಿಸಿಬಿ ಕಚೇರಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Apr 28, 2023 | 1:54 PM

Share

ಮುಖ್ಯಾಂಶಗಳು

  • ಹುಬ್ಬಳ್ಳಿಯ KIOS ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.
  • ಬಂಧಿತರಿಂದ ಪದವಿ, ಎಸ್​ಎಸ್​ಎಲ್​ಸಿ, ಪಿಯು ಮಾರ್ಕ್ಸ್ ಕಾರ್ಡ್​ಗಳು, ಉತ್ತರ ಪ್ರತಿಗಳು, ಕಲರ್​ ಪ್ರಿಂಟರ್​​ ಮತ್ತು ಜೆರಾಕ್ಸ್ ಮಷಿನ್ ವಶಪಡಿಸಿಕೊಂಡಿದ್ದಾರೆ.
  • ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಹುಬ್ಬಳ್ಳಿ/ ಬೆಂಗಳೂರು: ಸ್ಟಡಿ ಸೆಂಟರ್ (Study Center)​​ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ (Duplicate marks card) ಮಾರಾಟ ಮಾಡುತ್ತಿದ್ದ ಹುಬ್ಬಳ್ಳಿಯ (Hubli) KIOS ಕಚೇರಿ ಮೇಲೆ ಸಿಸಿಬಿ (CCB) ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ. ಪ್ರಭುರಾಜ್, ಮೈಲಾರಿ, ಮೊಹಮ್ಮದ್ ತೈಹೀದ್ ಬಂಧಿತ ಆರೋಪಿಗಳು. ಬಂಧಿತರಿಂದ ಪದವಿ, ಎಸ್​ಎಸ್​ಎಲ್​ಸಿ, ಪಿಯು ಮಾರ್ಕ್ಸ್ ಕಾರ್ಡ್​ಗಳು, ಉತ್ತರ ಪ್ರತಿಗಳು, ಕಲರ್​ ಪ್ರಿಂಟರ್​​ ಮತ್ತು ಜೆರಾಕ್ಸ್ ಮಷಿನ್ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. KIOS ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯದೆ ಸ್ಟಡಿ ಸೆಂಟರ್ ನಡೆಸುತ್ತಿದ್ದರು. ಪೊಲೀಸರು ದಾಳಿ ವೇಳೆ 7100 ಅಂಕಪಟ್ಟಿ, 5500 ಉತ್ತರ ಪ್ರತಿಗಳು, 25 ಅಡ್ಮಿಷನ್ ರಿಜಿಸ್ಟರ್​​ಗಳು ಪತ್ತೆಯಾಗಿವೆ.

ಇದನ್ನೂ ಓದಿ: ಚೀನಾ ಒಡೆತನದ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಕಂಪೆನಿ‌ ಮೇಲೆ ಇಡಿ ದಾಳಿ

ಸಿಸಿಬಿ ಎಸಿಪಿ ನಾರಾಯಣ ಭರಮಣಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಗೋಕುಲ್ ರೋಡ್ ಹೊಸ ಬಸ್ ನಿಲ್ದಾಣದ ಬಳಿ 11.86 ಲಕ್ಷ ಮೌಲ್ಯದ ಸುಮಾರು 2 ಕೆಜಿ ಅಪೀಮ್ ಪತ್ತೆಯಾಗಿದೆ. ಪ್ರಕರಣ ಸಂಬಂಧ ಪೊಲೀಸರು ಮೂಲಾರಾಮ್​ ಹಾಗೂ ಜಯರಾಮ್ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 2 ಕೆಜಿ ದ್ರವ ರೂಪದ ಅಫೀಮು, ಮೂರು ಮೊಬೈಲ್ ಹಾಗೂ 4500 ರೂ. ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು