AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chennaveera Kanavi: ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ದೇಣಿಗೆ ನೀಡಲು ನಿರ್ಧರಿಸಿದ ಕುಟುಂಬ

ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಿತ್ತು. ಈ ಹಿನ್ನೆಲೆಯಲ್ಲಿ ಕಣವಿ ಕುಟುಂಬಸ್ಥರು ವೈದ್ಯಕೀಯ ವೆಚ್ಚವನ್ನು ದೇಣಿಗೆ ನೀಡಲು ನಿರ್ಧಾರ ಮಾಡಿದ್ದಾರೆ. ಕಣವಿ ಅವರ ಆಸ್ಪತ್ರೆ ವೆಚ್ಚ 7 ಲಕ್ಷ ರೂ. ಆಗಿತ್ತು.

Chennaveera Kanavi: ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ದೇಣಿಗೆ ನೀಡಲು ನಿರ್ಧರಿಸಿದ ಕುಟುಂಬ
ನಾಡೋಜ ಚೆನ್ನವೀರ ಕಣವಿ
TV9 Web
| Edited By: |

Updated on:Mar 27, 2022 | 9:06 AM

Share

ಧಾರವಾಡ: ಕವಿ, ಹಿರಿಯ ಸಾಹಿತಿ ನಾಡೋಜ ಚೆನ್ನವೀರ ಕಣವಿ ನಿಧನ ಹಿನ್ನೆಲೆ ಅವರ ವೈದ್ಯಕೀಯ ವೆಚ್ಚ ದೇಣಿಗೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಕಣವಿ ಕುಟುಂಬಸ್ಥರಿಂದ ಅವರ ವೈದ್ಯಕೀಯ ವೆಚ್ಚವನ್ನು ದೇಣೀಗೆ ನೀಡಲು ನಿರ್ಧರಿಸಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಎಸ್‌ಡಿಎಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ದೇಣಿಗೆ ನೀಡಲು ನಿರ್ಧರಿಸಿದ್ದಾರೆ. ಚಿನ್ನದ ಪದಕದ ರೂಪದಲ್ಲಿ ನೀಡಲು ತೀರ್ಮನ ಕೈಗೊಳ್ಳಲಾಗಿದೆ. ಕಣವಿಯವರ ಪುತ್ರ ಪ್ರಿಯದರ್ಶಿ ಕಣವಿ ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಕವಿ ಚೆನ್ನವೀರ ಕಣವಿ ಅವರು 32 ದಿನಗಳ ಕಾಲ ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿ ಆಗದೇ ಅವರು ಕೊನೆಯುಸಿರೆಳೆದಿದ್ದರು. ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಿತ್ತು. ಈ ಹಿನ್ನೆಲೆಯಲ್ಲಿ ಕಣವಿ ಕುಟುಂಬಸ್ಥರು ವೈದ್ಯಕೀಯ ವೆಚ್ಚವನ್ನು ದೇಣಿಗೆ ನೀಡಲು ನಿರ್ಧಾರ ಮಾಡಿದ್ದಾರೆ. ಕಣವಿ ಅವರ ಆಸ್ಪತ್ರೆ ವೆಚ್ಚ 7 ಲಕ್ಷ ರೂ. ಆಗಿತ್ತು. ಕಣವಿ ವೈದ್ಯಕೀಯ ವೆಚ್ಚಕ್ಕೆ ಮೊದಲೇ ಹಣ ಇಟ್ಟಿದ್ದರು. ವೈದ್ಯಕೀಯ ವೆಚ್ಚ ತಮ್ಮ ಹಣದಲ್ಲೇ ಭರಿಸುವಂತೆ ಹೇಳಿದ್ದರು. ಆದರೆ, ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಿದ ಹಿನ್ನೆಲೆ ಕಣವಿ ಇಟ್ಟಿದ್ದ ಹಣ ವಿದ್ಯಾರ್ಥಿಗಳಿಗೆ ದೇಣಿಗೆ ನೀಡಲು ನಿರ್ಧರಿಸಲಾಗಿದೆ.

ಬೆಂಗಳೂರು: ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ

ರಸ್ತೆ ದಾಟುವ ವೇಳೆ ಯುವತಿಗೆ ಕ್ಯಾಂಟರ್ ಡಿಕ್ಕಿಯಾದ ಪ್ರಕರಣದಲ್ಲಿ ಮೃತಪಟ್ಟ ಹಿಮಾದ್ರಿ (23) ನೇತ್ರ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಶುಕ್ರವಾರ ಪೀಣ್ಯ ಮೆಟ್ರೋ ನಿಲ್ದಾಣದ ಬಳಿ ರಸ್ತೆ ದಾಟುವಾಗ ಕ್ಯಾಂಟರ್ ಡಿಕ್ಕಿಯಾಗಿ ಯುವತಿ ಮೃತಪಟ್ಟಿದ್ದರು. ಅವರು ನೇತ್ರದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಿದ್ದಾರೆ.

ಇದನ್ನೂ ಓದಿ: Chennaveera Kanavi Death: ‘ವ್ಯಕ್ತಿಗೀತೆ’; ಬೇಂದ್ರೆಯವರಿಗೆ ಎಪ್ಪತ್ತು ತುಂಬಿದಾಗ ಕಣವಿಯವರು ಬರೆದ ಧೀಮಂತ ಕವಿತೆ

ಇದನ್ನೂ ಓದಿ: Chennaveera Kanavi Death: ನಾಡೋಜ ಚೆನ್ನವೀರ ಕಣವಿ ವಿಧಿವಶ: ಕವಿಯ ಕೆಲ ಫೋಟೋಗಳು ಇಲ್ಲಿವೆ

Published On - 9:04 am, Sun, 27 March 22

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​