Sign In

By signing in or creating an account, you agree with Associated Broadcasting Company's Terms & Conditions and Privacy Policy.

Chennaveera Kanavi: ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ದೇಣಿಗೆ ನೀಡಲು ನಿರ್ಧರಿಸಿದ ಕುಟುಂಬ

ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಿತ್ತು. ಈ ಹಿನ್ನೆಲೆಯಲ್ಲಿ ಕಣವಿ ಕುಟುಂಬಸ್ಥರು ವೈದ್ಯಕೀಯ ವೆಚ್ಚವನ್ನು ದೇಣಿಗೆ ನೀಡಲು ನಿರ್ಧಾರ ಮಾಡಿದ್ದಾರೆ. ಕಣವಿ ಅವರ ಆಸ್ಪತ್ರೆ ವೆಚ್ಚ 7 ಲಕ್ಷ ರೂ. ಆಗಿತ್ತು.

Chennaveera Kanavi: ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ದೇಣಿಗೆ ನೀಡಲು ನಿರ್ಧರಿಸಿದ ಕುಟುಂಬ
ನಾಡೋಜ ಚೆನ್ನವೀರ ಕಣವಿ
Follow us
TV9 Web
| Updated By: ganapathi bhat

Updated on:Mar 27, 2022 | 9:06 AM

ಧಾರವಾಡ: ಕವಿ, ಹಿರಿಯ ಸಾಹಿತಿ ನಾಡೋಜ ಚೆನ್ನವೀರ ಕಣವಿ ನಿಧನ ಹಿನ್ನೆಲೆ ಅವರ ವೈದ್ಯಕೀಯ ವೆಚ್ಚ ದೇಣಿಗೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಕಣವಿ ಕುಟುಂಬಸ್ಥರಿಂದ ಅವರ ವೈದ್ಯಕೀಯ ವೆಚ್ಚವನ್ನು ದೇಣೀಗೆ ನೀಡಲು ನಿರ್ಧರಿಸಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಎಸ್‌ಡಿಎಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ದೇಣಿಗೆ ನೀಡಲು ನಿರ್ಧರಿಸಿದ್ದಾರೆ. ಚಿನ್ನದ ಪದಕದ ರೂಪದಲ್ಲಿ ನೀಡಲು ತೀರ್ಮನ ಕೈಗೊಳ್ಳಲಾಗಿದೆ. ಕಣವಿಯವರ ಪುತ್ರ ಪ್ರಿಯದರ್ಶಿ ಕಣವಿ ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಕವಿ ಚೆನ್ನವೀರ ಕಣವಿ ಅವರು 32 ದಿನಗಳ ಕಾಲ ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿ ಆಗದೇ ಅವರು ಕೊನೆಯುಸಿರೆಳೆದಿದ್ದರು. ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಿತ್ತು. ಈ ಹಿನ್ನೆಲೆಯಲ್ಲಿ ಕಣವಿ ಕುಟುಂಬಸ್ಥರು ವೈದ್ಯಕೀಯ ವೆಚ್ಚವನ್ನು ದೇಣಿಗೆ ನೀಡಲು ನಿರ್ಧಾರ ಮಾಡಿದ್ದಾರೆ. ಕಣವಿ ಅವರ ಆಸ್ಪತ್ರೆ ವೆಚ್ಚ 7 ಲಕ್ಷ ರೂ. ಆಗಿತ್ತು. ಕಣವಿ ವೈದ್ಯಕೀಯ ವೆಚ್ಚಕ್ಕೆ ಮೊದಲೇ ಹಣ ಇಟ್ಟಿದ್ದರು. ವೈದ್ಯಕೀಯ ವೆಚ್ಚ ತಮ್ಮ ಹಣದಲ್ಲೇ ಭರಿಸುವಂತೆ ಹೇಳಿದ್ದರು. ಆದರೆ, ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಿದ ಹಿನ್ನೆಲೆ ಕಣವಿ ಇಟ್ಟಿದ್ದ ಹಣ ವಿದ್ಯಾರ್ಥಿಗಳಿಗೆ ದೇಣಿಗೆ ನೀಡಲು ನಿರ್ಧರಿಸಲಾಗಿದೆ.

ಬೆಂಗಳೂರು: ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ

ರಸ್ತೆ ದಾಟುವ ವೇಳೆ ಯುವತಿಗೆ ಕ್ಯಾಂಟರ್ ಡಿಕ್ಕಿಯಾದ ಪ್ರಕರಣದಲ್ಲಿ ಮೃತಪಟ್ಟ ಹಿಮಾದ್ರಿ (23) ನೇತ್ರ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಶುಕ್ರವಾರ ಪೀಣ್ಯ ಮೆಟ್ರೋ ನಿಲ್ದಾಣದ ಬಳಿ ರಸ್ತೆ ದಾಟುವಾಗ ಕ್ಯಾಂಟರ್ ಡಿಕ್ಕಿಯಾಗಿ ಯುವತಿ ಮೃತಪಟ್ಟಿದ್ದರು. ಅವರು ನೇತ್ರದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಿದ್ದಾರೆ.

ಇದನ್ನೂ ಓದಿ: Chennaveera Kanavi Death: ‘ವ್ಯಕ್ತಿಗೀತೆ’; ಬೇಂದ್ರೆಯವರಿಗೆ ಎಪ್ಪತ್ತು ತುಂಬಿದಾಗ ಕಣವಿಯವರು ಬರೆದ ಧೀಮಂತ ಕವಿತೆ

ಇದನ್ನೂ ಓದಿ: Chennaveera Kanavi Death: ನಾಡೋಜ ಚೆನ್ನವೀರ ಕಣವಿ ವಿಧಿವಶ: ಕವಿಯ ಕೆಲ ಫೋಟೋಗಳು ಇಲ್ಲಿವೆ

Published On - 9:04 am, Sun, 27 March 22

ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ