AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಲ್ಲಿ ರಕ್ತಹೀನತೆ: ಶಾಕ್​ ಆಗುವಂತಿದೆ ಧಾರವಾಡ ಆರೋಗ್ಯ ಇಲಾಖೆ ಅಂಕಿ ಅಂಶ

ಧಾರವಾಡ ಜಿಲ್ಲೆಯಲ್ಲಿ ಮಕ್ಕಳ ರಕ್ತಹೀನತೆ ಕೇಸ್​​ಗಳ ಸಂಖ್ಯೆ ಆಘಾತಕಾರಿ ಪ್ರಮಾಣದಲ್ಲಿದೆ. 50 ಸಾವಿರಕ್ಕೂ ಹೆಚ್ಚು ಮಕ್ಕಳು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಪೌಷ್ಟಿಕತೆ, ಜಂಕ್‌ ಫುಡ್‌ ಹಾಗೂ ಮೊಬೈಲ್‌ನ ಅತಿಯಾದ ಬಳಕೆಯು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ ಅಡಿಯಲ್ಲಿ ಮಕ್ಕಳ ತಪಾಸಣೆ ನಡೆಸುವ ವೇಳೆ ಈ ವಿಷಯ ಬೆಳಕಿಗೆ ಬಂದಿದೆ.

ಮಕ್ಕಳಲ್ಲಿ ರಕ್ತಹೀನತೆ: ಶಾಕ್​ ಆಗುವಂತಿದೆ ಧಾರವಾಡ ಆರೋಗ್ಯ ಇಲಾಖೆ ಅಂಕಿ ಅಂಶ
ರಕ್ತಹೀನತೆ (ಸಾಂದರ್ಭಿಕ ಚಿತ್ರ)
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಪ್ರಸನ್ನ ಹೆಗಡೆ|

Updated on:Nov 14, 2025 | 5:03 PM

Share

ಧಾರವಾಡ, ನವೆಂಬರ್​ 14: ಮಕ್ಕಳನ್ನು ಅಪೌಷ್ಟಿಕತೆ ಸಮಸ್ಯೆಯಿಂದ ಪಾರು ಮಾಡಲು ಸಾಕಷ್ಟು ಯೋಜನೆಗಳನ್ನು ಸರ್ಕಾರ ಜಾರಿಗೆ ತರುತ್ತೆ. ಆದರೂ ಅದರ ಪ್ರಯೋಜನ ದೊರೆಯದ ಪರಿಣಾಮ ಅನೇಕ ಮಕ್ಕಳು ನಾನಾ ಸಮಸ್ಯೆಯಿಂದ ಬಳಲುತ್ತಲೇ ಇದ್ದಾರೆ. ಇದಕ್ಕೆ ಧಾರವಾಡ ಜಿಲ್ಲೆಯೂ ಹೊರತಾಗಿಲ್ಲ. ಇತ್ತೀಚಿಗೆ ನಡೆಸಲಾದ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅರ್ಧ ಲಕ್ಷದಷ್ಟು ಮಕ್ಕಳು ರಕ್ತ ಹೀನತೆಯಿಂದ ಬಳಲುತ್ತಿರುವ ಅಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಜಿಲ್ಲಾ ಆರೋಗ್ಯ ಇಲಾಖೆಯ ವರದಿ ಪ್ರಕಾರ 1ರಿಂದ 14 ವರ್ಷದೊಳಗಿನ 58,159 ಮಕ್ಕಳಲ್ಲಿ ರಕ್ತಹೀನತೆ ಸಮಸ್ಯೆ ಕಂಡು ಬಂದಿದೆ. ಮಕ್ಕಳಲ್ಲಿ ರಕ್ತಹೀನತೆ, ಅಪೌಷ್ಟಿಕ ಆಹಾರ, ಆರೋಗ್ಯ ನ್ಯೂನತೆಗಳ ಮೇಲೆ ನಿಗಾ ಇಡಲು ಸರಕಾರ ‘ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ’ ಜಾರಿಗೊಳಿಸಿದೆ. ಇದರಡಿ ಪ್ರತಿ ವರ್ಷ ಎರಡು ಬಾರಿ 1ರಿಂದ 14 ವರ್ಷದ ಮಕ್ಕಳ ಆರೋಗ್ಯ ತಪಾಸಣೆಯನ್ನು ಅಂಗನವಾಡಿ ಹಾಗೂ ಶಾಲೆಗಳಲ್ಲಿ ನಡೆಸಲಾಗುತ್ತೆ. ಈ ಹಿನ್ನಲೆ ಜಿಲ್ಲೆಯಲ್ಲಿ ಪ್ರಸ್ತುತ 1,80,882 ಮಕ್ಕಳ ತಪಾಸಣೆ ನಡೆಸಲಾಗಿದ್ದು, ಅದರಲ್ಲಿ 30,598 ಮಕ್ಕಳು ಅಲ್ಪ, 27,282 ಮಕ್ಕಳು ಮಧ್ಯಮ ಹಾಗೂ 279 ಮಕ್ಕಳು ತೀವ್ರತರದ ರಕ್ತಹೀನತೆಯಿಂದ ಬಳಲುತ್ತಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ರಕ್ತಹೀನತೆ ಸಮಸ್ಯೆ ದೂರಮಾಡಲು ಈ ಮನೆಮದ್ದುಗಳನ್ನು ಬಳಸಿ

ಆಹಾರದಲ್ಲಿ ಪೌಷ್ಟಿಕಾಂಶದ ಕೊರತೆ, ಜಂಕ್ ಆಹಾರ ಪದಾರ್ಥಗಳ ಸೇವನೆ ಸೇರಿದಂತೆ ಹತ್ತಾರು ಕಾರಣಗಳಿಂದ ಮಕ್ಕಳ ದೇಹದಲ್ಲಿ ರಕ್ತ ಉತ್ಪಾದನೆ ಕಡಿಮೆಯಾಗುತ್ತಿದೆ. ಕೆಲ ಮಕ್ಕಳಲ್ಲಿ ಜೆನೆಟಿಕ್ ಆಗಿಯೇ ರಕ್ತಹೀನತೆ ಕಾಡುತ್ತಿದೆ. ಇದರಿಂದ ಮಕ್ಕಳು ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಜೊತೆಗೆ ಏಕಾಗ್ರತೆ ಸಾಧಿಸಲು ಮತ್ತು ಆಟೋಟಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದೇ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಇದು ಮಕ್ಕಳ ಕಲಿಕೆ ಮೇಲೆ ನೇರ ಪರಿಣಾಮ ಉಂಟು ಮಾಡುತ್ತಿದೆ.

ಇನ್ನು ಸಹಜವಾಗಿ ಮಕ್ಕಳಿಂದ ಹಿಡಿದು ಪಾಲಕರ ವರೆಗೂ ಮೊಬೈಲ್ ಗೀಳು ಹೆಚ್ಚಾಗಿದೆ. ಅಳುವ ಮಕ್ಕಳ ಕೈಗೆ ಸುಲಭವಾಗಿ ಮೊಬೈಲ್ ಕೊಟ್ಟು ಸಮಾಧಾನ ಮಾಡುವವರ ಸಂಖ್ಯೆ ಹೆಚ್ಚಿದೆ. ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಮತ್ತು ಅಗತ್ಯ ಇರುವಷ್ಟು ಆಹಾರ ನೀಡುವುದನ್ನೂ ಬಹುತೇಕ ಪೋಷಕರು ಮಾಡದ ಕಾರಣ ಅವರ ದೈಹಿಕ ಬೆಳವಣಿಗೆ ಮೇಲೆ ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಮಕ್ಕಳ ಆರೋಗ್ಯದ ಬಗ್ಗೆ ಸರ್ಕಾರದ ಜೊತೆ ಪಾಲಕರೂ ವಿಶೇಷ ಕಾಳಜಿ ವಹಿಸಿದಾಗ ಮಾತ್ರ ಇಮತಹ ಸಮಸ್ಯೆಯಿಂದ ಮಕ್ಕಳನ್ನು ಹೊರ ತರಲು ಸಾಧ್ಯ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:00 pm, Fri, 14 November 25

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ