ಧಾರವಾಡ ಕಾರಾಗೃಹದಲ್ಲಿ ಕೈದಿ ಮತ್ತು ಜೈಲು ಸಿಬ್ಬಂದಿ ನಡುವೆ ಹೊಡೆದಾಟ

ಕೈದಿ ಹಾಗೂ ಜೈಲು ಸಿಬ್ಬಂದಿ ನಡುವೆ ಹೊಡೆದಾಟ ನಡೆದ ಘಟನೆ ಧಾರವಾಡ ಕಾರಗೃಹದಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೈದಿ ಪ್ರಶಾಂತ್ ಹಲವು ದಿನಗಳಿಂದ ಧಾರವಾಡ ಕಾರಾಗೃಹದಲ್ಲಿದ್ದು, ಬಾಚಣಿಕೆಯನ್ನೇ ಚೂಪಾಗಿ ಹರಿತಗೊಳಿಸಿ ಚುಚ್ಚಿರುವ ಸಾಧ್ಯತೆ ಇದೆ.

ಧಾರವಾಡ ಕಾರಾಗೃಹದಲ್ಲಿ ಕೈದಿ ಮತ್ತು ಜೈಲು ಸಿಬ್ಬಂದಿ ನಡುವೆ ಹೊಡೆದಾಟ
ಧಾರವಾಡ ಜಿಲ್ಲಾ ಕಾರಾಗೃಹದಲ್ಲಿ ಕೈದಿ ಮತ್ತು ಜೈಲು ಸಿಬ್ಬಂದಿ ನಡುವೆ ಹೊಡೆದಾಟ
Updated By: Rakesh Nayak Manchi

Updated on: Oct 17, 2023 | 4:39 PM

ಧಾರವಾಡ, ಅ.17: ಕೈದಿ ಹಾಗೂ ಜೈಲು ಸಿಬ್ಬಂದಿ ನಡುವೆ ಹೊಡೆದಾಟ ನಡೆದ ಘಟನೆ ಧಾರವಾಡ (Dharwad) ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಜೈಲು ಸಿಬ್ಬಂದಿ ಮೋಹನ ಸಿದ್ದಪ್ಪ ಬಡಿಗೇರ ಹಾಗೂ ಅನೇಕ ದಿನಗಳಿಂದ ಕಾರಗೃಹದಲ್ಲಿ ಕೈದಿಯಾಗಿರುವ ಪ್ರಶಾಂತ ಅಲಿಯಾಸ್ ಪಾಚು ಗಾಯಗೊಂಡವರಾಗಿದ್ದಾರೆ.

ಜೈಲಿನಲ್ಲಿ ಚಾಕು ಇಲ್ಲದಿರುವ ಹಿನ್ನೆಲೆ ಬಾಚಣಿಗೆಯನ್ನೇ ಚಾಕೂವಿನಂತೆ ಬಳಸಿ ಸಿಬ್ಬಂದಿ ಮೇಲೆ ಕೈದಿ ಹಲ್ಲೆ ನಡೆಸಿದ್ದಾನೆ ಎನ್ನಲಾಗುತ್ತಿದೆ. ಹೊಡೆದಾಟದಿಂದ ಇಬ್ಬರಿಗೂ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಸಿಬ್ಬಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು, ಬೆಳಗಾವಿ ಕೇಂದ್ರ ಕಾರಾಗೃಹ ಸ್ಪೋಟಿಸುವುದಾಗಿ ಕರೆ ಮಾಡಿದ್ದ ಆರೋಪಿ ಸುಳಿವು ಪತ್ತೆ

ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮರಿ ನಡೆಯುತ್ತಿರುವ ಪ್ರಕರಣಗಳು ಈ ಹಿಂದೆ ಸಾಕಷ್ಟು ನಡೆದಿವೆ. ಜುಲೈ ತಿಂಗಳ ಕೊನೆಯಲ್ಲಿ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇಬ್ಬರು ಕೈದಿಗಳ ನಡುವೆ ಹೊಡೆದಾಟ ನಡೆದಿತ್ತು. ಗಲಾಟೆ ನಡೆಯದಂತೆ ನೋಡಿಕೊಳ್ಳದ ಇಬ್ಬರು ಜೈಲು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:34 pm, Tue, 17 October 23