AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡುವ ಸುಳಿವು ನೀಡಿದ ಸಿಎಂ ಬೊಮ್ಮಾಯಿ

ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೀಟರ್ ಡೀಸೆಲ್ ದರ 100ರ ಗಡಿ ದಾಟಿದೆ. ಬೆಂಗಳೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 100.37 ರೂ. ಆಗಿದ್ದರೆ, ರಾಯಚೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 100.25 ರೂಪಾಯಿ ಇದೆ.

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡುವ ಸುಳಿವು ನೀಡಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: sandhya thejappa|

Updated on:Oct 17, 2021 | 10:42 AM

Share

ಹುಬ್ಬಳ್ಳಿ: ಹಾನಗಲ್ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆ ಇಳಿಕೆ ಮಾಡುವ ಸುಳಿವು ನೀಡಿದ್ದಾರೆ. ತೈಲ ಬೆಲೆ ಆರ್ಥಿಕತೆ ಮೇಲೆ ನೇರ ಪರಿಣಾಮ ಬೀರುತ್ತದೆ. ರಾಜ್ಯದ ಆರ್ಥಿಕತೆ ಸುಧಾರಣೆಯಾದರೆ ಉಪಚುನಾವಣೆ ಬಳಿಕ ಬೆಲೆ ಇಳಿಕೆ ಮಾಡುವ ಬಗ್ಗೆ ಚಿಂತನೆಯಿದೆ ಅಂತ ತಿಳಿಸಿದ್ದಾರೆ.

ಎಷ್ಟಿದೆ ಡೀಸೆಲ್ ದರ? ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೀಟರ್ ಡೀಸೆಲ್ ದರ 100ರ ಗಡಿ ದಾಟಿದೆ. ಬೆಂಗಳೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 100.37 ರೂ. ಆಗಿದ್ದರೆ, ರಾಯಚೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 100.25 ರೂಪಾಯಿ, ತುಮಕೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 100.84 ರೂಪಾಯಿ, ಕಲಬುರಗಿಯಲ್ಲಿ ಲೀಟರ್ ಡೀಸೆಲ್ ಬೆಲೆ 100.16 ರೂಪಾಯಿ ಹಾಗೂ ರಾಮನಗರದಲ್ಲಿ ಲೀಟರ್ ಡೀಸೆಲ್ ಬೆಲೆ 100.67 ರೂಪಾಯಿಗೆ ಏರಿಕೆ ಆಗಿದೆ. ಬೀದರ್​ನಲ್ಲಿ ಲೀಟರ್ ಡೀಸೆಲ್ ಬೆಲೆ 101.22 ರೂಪಾಯಿ ಹಾಗೂ ಚಿತ್ರದುರ್ಗದಲ್ಲಿ ಲೀಟರ್ ಡೀಸೆಲ್ ಬೆಲೆ 101.93 ರೂಪಾಯಿ ಇದೆ. ಪ್ರತಿದಿನ ಸಾಗುತ್ತಿದ್ದಂತೆಯೇ ಪೆಟ್ರೋಲ್, ಡೀಸೆಲ್ ದರ ಇನ್ನಷ್ಟು ಏರಿಕೆಯಾಗುತ್ತಿರುವುದನ್ನು ಕಂಡು ವಾಹನ ಸವಾರರು ಬೇಸರ ಹೊರಹಾಕಿದ್ದಾರೆ.

ಎಷ್ಟಿದೆ ಪೆಟ್ರೋಲ್ ಬೆಲೆ? ಇಂದು ರಾಯಚೂರಿನಲ್ಲಿ ಒಂದು ಲೀಟರ್ ಪೆಟ್ರೋಲ್​ಗೆ 109.35 ರೂ. ಇದೆ. ತುಮಕೂರಿನಲ್ಲಿ 108.08 ರೂ, ಕಲಬುರಗಿಯಲ್ಲಿ ಪೆಟ್ರೋಲ್ 109.26, ಬೀದರ್​ನಲ್ಲಿ 110.42, ಚಿತ್ರದುರ್ಗದಲ್ಲಿ 111.30, ಮಂಡ್ಯದಲ್ಲಿ 109.28, ಯಾದಗಿರಿಯಲ್ಲಿ 109.88, ಚಿಕ್ಕಬಳ್ಳಾಪುರದಲ್ಲಿ 109.59, ಧಾರವಾಡದಲ್ಲಿ 109.26 ರೂ ಇದೆ. ಇನ್ನು ವಿಜಯಪುರದಲ್ಲೂ ಒಂದು ಲೀಟರ್ ಪೆಟ್ರೋಲ್​ಗೆ 109.24 ರೂಪಾಯಿ ಆಗಿದೆ.

ಇದನ್ನೂ ಓದಿ

ಕೌಟುಂಬಿಕ ಕಲಹ: ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಹತ್ಯೆ; ಪತಿಯು ನೇಣಿಗೆ ಶರಣು

T20 World Cup 2021: ಟಿ20 ವಿಶ್ವಕಪ್ ಕಾವು ಶುರು: ಅರ್ಹಾತಾ ಸುತ್ತಿನಲ್ಲಿಂದು ಎರಡು ಪಂದ್ಯ: ಸೂಪರ್ 12ಗಾಗಿ ಹೋರಾಟ

Published On - 9:27 am, Sun, 17 October 21

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು